ಸುಮಾರು 19 ವರ್ಷದ ಯುವಕನೋರ್ವ ಮಾನಸಿಕವಾಗಿ ಮನನೊಂದು ಸುಮಾರು 11ಗಂಟೆ ರಾತ್ರಿಯಲ್ಲಿ ವಿಷ ಕುಡಿದು ತೀವ್ರವಾಗಿ ಅಸ್ವಸ್ಥಗೊಂಡು ಒದ್ದಾಡುತ್ತಿದ್ದನು. ಆಗ ಈ ಯುವಕನೇ ತನ್ನ ಫೋನ್ ನಿಂದ 112ಗೆ ಕರೆ ಮಾಡಿ ತಡವರಿಸುತ್ತಾ ತಾನು ವಿಷ ಕುಡಿದಿರುವ ಬಗ್ಗೆ ದೂರು ನೀಡುತ್ತಾನೆ.
ಕರೆ ಬಂದ ಕೆಲವೇ ಕ್ಷಣಗಳಲ್ಲಿ 112 ಸಿಬ್ಬಂದಿಯಾದ ಮುನಿರಾಜು ಎಂ ಹಾಗೂ ಕಾಂತರಾಜು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳದಲ್ಲಿ ಆ ಯುವಕನನ್ನು ಕತ್ತಲಲ್ಲೇ ಹುಡುಕಾಡಿದ್ದಾರೆ. ಆ ಯುವಕ ತೀವ್ರವಾಗಿ ಅಸ್ವಸ್ಥಗೊಂಡು ತೋಟವೊಂದರಲ್ಲಿ ಕೆಳಗೆ ಬಿದ್ದು ನರಳಾಡುತ್ತಿದ್ದನು. ಆತನ ಫೋನ್ ಗೆ ಸಾಕಷ್ಟು ಬಾರಿ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ. ಮೊಬೈಲ್ ಗಳಲ್ಲಿ ಟಾರ್ಚ್ ಹಾಕಿಕೊಂಡು ಪೊಲೀಸರು ಹುಡುಕಾಡಿದ್ದಾರೆ. ಕೊನೆಗೆ ನರಳಾಡುತ್ತಿದ್ದ ಯುವಕನನ್ನು ಪತ್ತೆ ಮಾಡಿ ಸ್ಥಳೀಯ ಆಸ್ಪತ್ರೆಗೆ ತಮ್ಮ 112 ವಾಹನದಲ್ಲೇ ರವಾನಿಸಿದ್ದಾರೆ.
ಸದ್ಯ ವಿಷ ಕುಡಿದ ಯುವಕ ಚಿಕಿತ್ಸೆ ಪಡೆದು ಆರೋಗ್ಯವಾಗಿದ್ದಾನೆ. ವಿಷ ಕುಡಿದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವಕನ ಜೀವವನ್ನು ಸಕಾಲಕ್ಕೆ ಬಂದ 112 ಪೊಲೀಸರು, ಆತನ ಜೀವ ಉಳಿಸಿದ್ದಾರೆ. 112 ಸಿಬ್ಬಂದಿಯಾದ ಮುನಿರಾಜು ಎಂ ಹಾಗೂ ಕಾಂತರಾಜು ಅವರ ಈ ಕಾರ್ಯಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಜೊತೆಗೆ ಯುವಕನ ಸಂಬಂಧಿಕರು ಕೂಡ ಮುನಿರಾಜು ಎಂ ಹಾಗೂ ಕಾಂತರಾಜುರವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ….
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…