ವಿಹಾನ್ ಶಾಲಾ ಮಾಲೀಕರಿಂದ 1.75 ಕೋಟಿ ಕೂಲಿ ಹಣ ಕೊಡದೆ ವಂಚನೆ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಕಂಟ್ರಾಕ್ಟರ್

ದೇವನಹಳ್ಳಿ : ಮಕ್ಕಳಿಗೆ ಪಾಠ-ಪ್ರವಚನ, ಶಿಸ್ತು‌-ಸಂಯಮ ಕಲಿಸಿಕೊಡುವ ಶಾಲಾ ಆಡಳಿತ ಮಂಡಳಿಯ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ಬಣ್ಣಬಣ್ಣದ ಮಾತುಗಳಿಂದ ಮರುಳು ಮಾಡಿರುವ ಶಾಲಾ ಮಾಲೀಕರು, ಕಂಟ್ರಾಕ್ಟರ್ ಗೆ ಬರೋಬರಿ 1.75 ಕೋಟಿ ವಂಚಿಸಿರುವ ಆರೋಪ‌‌ ಕೇಳಿಬಂದಿದೆ. ಹಣ ಕೇಳಲು ಹೋದರೆ ಜೀವ ಬೇದರಿಕೆ ಹಾಕಿರುವುದ್ದಲ್ಲದೆ, ಜಾತಿ ನಿಂದನೆ ಕೂಡ ಮಾಡಿದ್ದಾರೆಂದು ಕಂಟ್ರಾಕ್ಟರ್ ವಿಶ್ವನಾಥಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಯಲಹಂಕದ ಎಸ್ .ರಾಜರೆಡ್ಡಿ ಪರಿಶಿಷ್ಟ ಸಮುದಾಯಕ್ಕೆ ಸೇರಿದವರಾಗಿದ್ದು, ಕಟ್ಟಡ ನಿರ್ಮಾಣದ ಕಂಟ್ರಾಕ್ಟರ್ ಕೆಲಸ ಮಾಡುತ್ತಿದ್ದಾರೆ. 2022ರ ಮಾರ್ಚ್ 26ರಂದು  ದೇವನಹಳ್ಳಿಯ ವಿಶ್ವನಾಥಪುರದ ಬಳಿಯ ವಿಹಾನ್ ಶಾಲೆಯ ಮಾಲೀಕ ಪ್ರತಾಪ್ ಯಾದವ್  ರಾಜರೆಡ್ಡಿಯವರನ್ನ ಭೇಟಿಯಾಗುತ್ತಾರೆ. ಶಾಲಾ ಕಟ್ಟಡವನ್ನ ಕಟ್ಟಿಸಿಕೊಂಡುವಂತೆ ಮನವಿ ಮಾಡುತ್ತಾರೆ. ದೊಡ್ಡ ಕೆಲಸದಿಂದ ದೊಡ್ಡ ಪ್ರಮಾಣದಲ್ಲಿ ಹಣ ಬರುತ್ತೆಂಬ ಆಸೆಯಲ್ಲಿ ರಾಜರೆಡ್ಡಿ ಕಟ್ಟಡವನ್ನ ನಿರ್ಮಾಣ ಮಾಡುತ್ತಾರೆ. ಶಾಲಾ ಕಟ್ಟಡ ನಿರ್ಮಾಣವಾದ ನಂತರ ಬಾಕಿ ಕೂಲಿ ಹಣ ಕೇಳಲು ಹೋದರೆ ಕಟ್ಟಡ ಹಣ ಕೊಡೋದಿಲ್ಲ, ಏನು ಬೇಕೋ ಅದನ್ನ ಮಾಡ್ಕೋ ಅಂತಾ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.

ವಿಹಾನ್ ಶಾಲೆಯವರು ರಾಜರೆಡ್ಡಿ 1.75 ಕೋಟಿ ಕೂಲಿ ಹಣವನ್ನ ಕೊಡದೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ರಾಜರೆಡ್ಡಿಯವರ ಬೆಂಬಲಕ್ಕೆ ದಲಿತ ಸಂಘಟನೆಗಳು ನಿಂತಿವೆ. ವಿಶ್ವನಾಥಪುರ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ ಸಂಘಟನೆಗಳು ರಾಜರೆಡ್ಡಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ.

ಹಣ ವಂಚನೆ ಮಾಡಿರುವ ವಿಹಾನ್ ಶಾಲೆಯ ವಿರುದ್ಧ ದೂರು ನೀಡಿರುವ ಸಂಘಟನೆಗಳು, ಬಾಕಿ ಹಣ ಕೊಡದಿದ್ದಲ್ಲಿ ವಿಹಾನ್ ಶಾಲೆಯ ಮುಂದೆ ಬೃಹತ್ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನ‌ ಸಹ ನೀಡಿದ್ದಾರೆ.

ವಿಹಾನ್ ಶಾಲೆ ಮಾಲೀಕರಿಂದ ವಂಚನೆಗೊಳಗಾದ ರಾಜರೆಡ್ಡಿ ಮಾಧ್ಯಮದೊಂದಿಗೆ ಮಾತನಾಡಿ, ಮೊದಲಿನ ಕಂಟ್ರಾಕ್ಟರ್ ವಿಹಾನ್ ಶಾಲೆಯ ಕಟ್ಟಡವನ್ನ ಅರೆಬರೆ ಕೆಲಸ ಮಾಡಿ ಬಿಟ್ಟು ಹೋಗಿದ್ದರು. ಶೀಟ್ ನಂತಿದ್ದ ಶಾಲಾ ಕಟ್ಟಡವನ್ನ ಸುಂದರವಾದ ಕಟ್ಟಡವಾಗಿ ನಿರ್ಮಾಣ ಮಾಡಿದ್ದೇನೆ. ಕೂಲಿಯಾಳುಗಳ ಕೂಲಿಗಾಗಿ 3.5 ಕೋಟಿ ಖರ್ಚಾಗಿದ್ದು, ಇದರಲ್ಲಿ ಕೇವಲ 1.5 ಕೋಟಿ ಹಣವನ್ನು ನೀಡಿದ್ದಾರೆ. ಇನ್ನುಳಿದ 1.75 ಕೋಟಿ ಹಣವನ್ನ ನೀಡದೆ ದೌರ್ಜನ್ಯ ಮಾಡುತ್ತಿದ್ದಾರೆ. ಸಾಲ ಮಾಡಿದ ಹಣದಲ್ಲಿ ಕೂಲಿಯಾಳುಗಳಿಗೆ ಕೂಲಿ ನೀಡಿ ಕಟ್ಟಡದ ಕೆಲಸ ಮುಗಿಸಿದ್ದೇನೆ. ಈಗ ಸಾಲಗಾರರು ನನ್ನ ಮನೆಗೆ ಬಂದು ಸಾಲದ ಹಣ ಕೇಳುತ್ತಿದ್ದಾರೆಂದು ತಮ್ಮ ನೋವು ತೋಡಿಕೊಂಡರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

20 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago