ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.
ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಆರ್.ವಿ. ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಸಿಎಂ ಸತೀಶನ್ ಸೇರಿದಂತೆ 20 ಮಂದಿ ಸಚಿವರಿಗೆ ಪ್ರಮಾಣವಚನ ಬೋಧಿಸಿದರು..
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಡಿಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ರೇವಂತ್ ರೆಡ್ಡಿ, ಕೆಸಿ.ವೇಣುಗೋಪಾಲ್, ರಾಜೀವ್ ಚಂದ್ರಶೇಖರ್, ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.
ಸತೀಶನ್ ಜೊತೆಗೆ 20 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್ನಿಂದ 11 ಮಂದಿ, ಮುಸ್ಲಿಂ ಲೀಗ್ನ ಐವರು ಹಾಗೂ ಮಾನ್ಸ್ ಜೋಸೆಫ್ (ಕೇರಳ ಕಾಂಗ್ರೆಸ್-ಜೋಸೆಫ್), ಶಿಬು ಬೇಬಿ ಜಾನ್ (ಕ್ರಾಂತಿಕಾರಿ ಸಮಾಜವಾದಿ ಪಕ್ಷ), ಅನೂಪ್ ಜಾಕೋಬ್ (ಕೇರಳ ಕಾಂಗ್ರೆಸ್-ಜಾಕೋಬ್), ಮತ್ತು ಸಿಪಿ ಜಾನ್ (ಕಮ್ಯುನಿಸ್ಟ್ ಮಾರ್ಕ್ಸ್ ವಾದಿ ಪಕ್ಷ) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಹೊಸ ಸರ್ಕಾರ ರಾಜ್ಯದ ಅಭಿವೃದ್ಧಿ, ಜನಪರ ಆಡಳಿತ ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಿದೆ ಎಂದು ನೂತನ ಮುಖ್ಯಮಂತ್ರಿ ಸತೀಶನ್ ತಿಳಿಸಿದ್ದಾರೆ.
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…