ವಿ.ಡಿ ಸತೀಶನ್ ಕೇರಳದ ನೂತನ ಮುಖ್ಯಮಂತ್ರಿ

ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಆರ್.ವಿ. ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಸಿಎಂ ಸತೀಶನ್ ಸೇರಿದಂತೆ 20 ಮಂದಿ ಸಚಿವರಿಗೆ ಪ್ರಮಾಣವಚನ ಬೋಧಿಸಿದರು..

ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಡಿಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ರೇವಂತ್ ರೆಡ್ಡಿ, ಕೆಸಿ.ವೇಣುಗೋಪಾಲ್, ರಾಜೀವ್ ಚಂದ್ರಶೇಖರ್, ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

ಸತೀಶನ್ ಜೊತೆಗೆ 20 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್​ನಿಂದ 11 ಮಂದಿ, ಮುಸ್ಲಿಂ ಲೀಗ್​ನ ಐವರು ಹಾಗೂ ಮಾನ್ಸ್ ಜೋಸೆಫ್ (ಕೇರಳ ಕಾಂಗ್ರೆಸ್-ಜೋಸೆಫ್), ಶಿಬು ಬೇಬಿ ಜಾನ್ (ಕ್ರಾಂತಿಕಾರಿ ಸಮಾಜವಾದಿ ಪಕ್ಷ), ಅನೂಪ್ ಜಾಕೋಬ್ (ಕೇರಳ ಕಾಂಗ್ರೆಸ್-ಜಾಕೋಬ್), ಮತ್ತು ಸಿಪಿ ಜಾನ್ (ಕಮ್ಯುನಿಸ್ಟ್ ಮಾರ್ಕ್ಸ್ ವಾದಿ ಪಕ್ಷ) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಹೊಸ ಸರ್ಕಾರ ರಾಜ್ಯದ ಅಭಿವೃದ್ಧಿ, ಜನಪರ ಆಡಳಿತ ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಿದೆ ಎಂದು ನೂತನ ಮುಖ್ಯಮಂತ್ರಿ ಸತೀಶನ್ ತಿಳಿಸಿದ್ದಾರೆ.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

2 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

3 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

23 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago