ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ.

ಕಾಂಗ್ರೆಸ್ ಪಕ್ಷದ ಯುವ ಮುಖಂಡರು, ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ವಿ.ಶಾಂತಕುಮಾರ್ ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇಗುಲಕ್ಕೆ ಭೇಟಿಕೊಟ್ಟು ದೇವರಿಗೆ ಪೂಜೆ ಪುನಸ್ಕಾರ ನೆರೆವೇರಿಸಿದ್ದಾರೆ.

ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಅದ್ಧೂರಿಯಾಗಿ ಸನ್ಮಾನಿಸಿ ಪ್ರೀತಿಯಿಂದ ತಮ್ಮ ನಾಯಕನಿಗೆ ಹುಟ್ಟುಹಬ್ಬದ ಶುಭಕೋರಿದ್ದಾರೆ.

ಅಭಿಮಾನಿಗಳು ದೇವನಹಳ್ಳಿ ಸರ್ಕಾರಿ‌ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ವಿ.ಶಾಂತಕುಮಾರ್ ಆಸ್ಪತ್ರೆಗೆ ಧಾವಿಸಿ ನವಜಾತು ಶಿಶುಗಳಿಗೆ ಜನ್ಮ ನೀಡಿದ ತಾಯಂದಿರಿಗೆ ಮತ್ತು ಇತರೆ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಆರೋಗ್ಯದ ಬಗ್ಗೆ ಕಾಳಜಿವಹಿಸಿ ಎಂದು ತಿಳಿಸಿದ್ರು.

ನಂತರ ಮಾತನಾಡಿದ ವಿ.ಶಾಂತಕುಮಾರ್, ನಮ್ಮ ಎಲ್ಲಾ ಮುಖಂಡರು, ಅಭಿಮಾನಿಗಳು, ಪಕ್ಷ ಕಾರ್ಯಕರ್ತರು ಸೇರಿ ಇವತ್ತು ಆಸ್ಪತ್ರೆಗೆ ಬಂದು ಬಡ ರೋಗಿಗಳಿಗೆ, ಅನಾರೋಗ್ಯ ಪೀಡಿತರಿಗೆ ಹಣ್ಣಹಂಪಲು ವಿತರಿಸಿರೋದು ತುಂಬಾ ಖುಷಿ ತಂದಿದೆ. ಸಚಿವ ಕೆ.ಎಚ್.ಮುನಿಯಪ್ಪ ಅವ್ರು ಹುಟ್ಟುಹಬ್ಬಕ್ಕೆ ಶುಭಕೋರಿದ್ದು ಮರೆಯಾಗದ ಕ್ಷಣವಾಗಿದೆ, ಎಲ್ಲಾ ಸಮಾಜದ ಕಾರ್ಯಕ್ರಮಗಳಿಗೆ ನನ್ನ ಬೆಂಬಲವಿದೆ, ಕ್ಷೇತ್ರದ ಪ್ರತಿಯೊಬ್ಬ ನಾಗರಿಕನ ಪರವಾಗಿ ಕೆಲಸ ಮಾಡುವ ಹಂಬಲವಿದೆ, ನನ್ನ ಸಮಾಜಸೇವೆ ಮತ್ತಷ್ಟು ಮುಂದುವರೆಸಿಕೊಂಡು ಹೋಗ್ತೀನಿ, ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಯಪ್ಪ ಅಧ್ಯಕ್ಷರಾದಾಗಿನಿಂದ ಅಭಿವೃದ್ಧಿ ಕಾರ್ಯಗಳಿಗೆ ಒತ್ತುಕೊಟ್ಟು ಕೆರೆ ಅಭಿವೃದ್ಧಿ, ಮೂಲಭೂತ ಸೌಕರ್ಯಗಳನ್ನ ಜನರಿಗೆ ತಲುಪಿಸುವ ಕೆಲಸ ಮಾಡಿದ್ದೇನೆ, ಇದು ಮುಂದಿನ ದಿನಗಳಲ್ಲಿಯೂ ಮುಂದುವರೆಯುತ್ತೆ ಎಂದರು.

ನಂತರ ಮಾತನಾಡಿದ ಅಭಿಮಾನಿ ಮೋಹನ್ ಬಾಬು, ವಿ.ಶಾಂತಕುಮಾರ್ ಅವರು ಒಳ್ಳೆಯದನ್ನೇ ಭಯಸುತ್ತಾರೆ, ಒಳ್ಳೇದನ್ನೇ ಮಾಡುತ್ತಿದ್ದಾರೆ, ಸಮಾಜ ಸೇವೆಯಲ್ಲಿ ನಿರತರಾಗಿದ್ದಾರೆ, ಅವರ ಶ್ರಮಕ್ಕೆ ಒಳ್ಳೆ ಸ್ಥಾನಮಾನ ಈಗ ಸಿಕ್ಕಿದೆ, ಅವರಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸ್ಥಾನಮಾನ ಸಿಗಲಿ ಅಂತ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹುಟ್ಟುಹಬ್ಬದಕ್ಕೆ ಶುಭಕೋರಿದ್ರು‌. ಇನ್ನು ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಅರದೇಶನಹಳ್ಳಿ ಮನೋಜ್ (ಮನು), ಬೆಟ್ಟೇನಹಳ್ಳಿ ನವೀನ್, ನಾಗೇಶ್ ಮತ್ತು ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Ramesh Babu

Journalist

Recent Posts

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 hours ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

18 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

3 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

4 days ago