ವಿ.ಸೋಮಣ್ಣಗೆ ತುಮಕೂರು ಲೋಕಸಭೆಯ ಟಿಕೆಟ್ ಫಿಕ್ಸ್?, ಲೋಕಸಭೆ ಚುನಾವಣೆ ಗೆಲುವಿಗಾಗಿ ತಯಾರಿ ನಡೆದಿದೆಯಾ?, ವರ್ಷಕ್ಕಿಂತ ಮೊದಲೇ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ನಡೆದಿದೆ ಹುಡುಕಾಟ? ಲೋಕಸಭೆಗೆ ತುಮಕೂರಲ್ಲೇ ಸ್ಪರ್ಧೆ ಮಾಡಲಿದ್ದಾರೆ ವಿ.ಸೋಮಣ್ಣ?. ಸೋಮಣ್ಣಗೆ ಸಾಥ್ ನೀಡುವಂತೆ ಸಂಸದ ಜಿ.ಎಸ್ ಬಸವರಾಜು ವೀರಶೈವ ಸಮಾಜಕ್ಕೆ ಕರೆ ಕೊಟ್ಟಿದ್ದಾರೆ.
ವಿ.ಸೋಮಣ್ಣ ತುಮಕೂರು ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುತ್ತಾರೆ. ಅವರ ಬೆಂಬಲಕ್ಕೆ ವೀರಶೈವ ಸಮಾಜ ನಿಲ್ಲಬೇಕು ಎಂದು ಸಂಸದ ಜಿ.ಎನ್ ಬಸವರಾಜ್ ಹೇಳಿದ್ದಾರೆ.
ತುಮಕೂರಿನಲ್ಲಿ ನಡೆದ ವೀರಶೈವ ಸಮಾಜದ ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್ ಬಸವರಾಜು ಮಾತನಾಡಿ, ಸಮಾಜ ಒಗ್ಗಟ್ಟಿನಿಂದ ಇದ್ದರೆ ಏನು ಬೇಕಾದರೂ ಸಾಧಿಸಬಹುದು. ನಿಮ್ಮನಿಮ್ಮಲ್ಲೇ ಕಿತ್ತಾಡಿದರೆ ನಿಮ್ಮನ್ನೇ ಒದ್ದು ಓಡಿಸುತ್ತಾರೆ. ಯಾವಾಗ ಒಗ್ಗಟ್ಟು ಮುರಿಯುತ್ತೆ ಏನೇನು ಮಾಡಬೇಕು ಅನ್ನೋದು ಅವರಿಗೆ ಗೊತ್ತಿದೆ.
ಸಮಾಜದಲ್ಲಿ ಕೆಲವೇ ಜನ ಇರೋದು ಒಟ್ಟಾಗಿರಿ ಎಂದು ಎಚ್ಚರಿಕೆ ಕೊಡುತ್ತಿದ್ದೇನೆ. ನನ್ನದು ಆಯ್ತು, ನನ್ನ ಸೀಟ್ ನ್ನು ಸೋಮಣ್ಣಗೆ ಕೊಡುತ್ತಾರೆ, ನಾನು ಚುನಾವಣೆಯಲ್ಲಿ ನಿಲ್ಲಲ್ಲ, ನಾನು ದೆಹಲಿಗೆ ಹೋಗಿದ್ದಾಗ ಹೇಳಿದ್ದೇನೆ. ಮುಂದೆ ಬರೋರನ್ನು ಉಪಯೋಗಿಸಿಕೊಳ್ಳಿ ಎಂದು ಹೇಳಿದ್ದಾರೆ.
8 ಬಾರಿ ಚುನಾವಣೆಗೆ ನಿಂತಿದ್ದೇನೆ, 5 ಸಲ ಗೆದ್ದಿದ್ದೇನೆ, ಮೂರು ಬಾರಿ ಸೋತ್ತಿದ್ದೇನೆ. ನಮ್ಮವರೇ ನನ್ನ ಸೋಲಿಸಿದ್ದು ಎಂದು ಗುಡುಗಿದರು. ನಾನು ಸೋತರು ಒಂದೇ ಗೆದ್ದರೂ ಒಂದೇ ಕೆಲಸ ಮಾಡಿಸಿಕೊಂಡು ಬರುತ್ತಿದ್ದೇನೆ ಎಂದರು.