Categories: ರಾಜ್ಯ

ವಿ. ಸೋಮಣ್ಣ ತುಮಕೂರಿನಿಂದ ಲೋಕಸಭೆಗೆ ಸ್ಪರ್ಧೆ-ಸಂಸದ ಜಿ.ಎಸ್.ಬಸವರಾಜು

ವಿ.ಸೋಮಣ್ಣಗೆ ತುಮಕೂರು ಲೋಕಸಭೆಯ ಟಿಕೆಟ್ ಫಿಕ್ಸ್?, ಲೋಕಸಭೆ ಚುನಾವಣೆ ಗೆಲುವಿಗಾಗಿ ತಯಾರಿ ನಡೆದಿದೆಯಾ?, ವರ್ಷಕ್ಕಿಂತ ಮೊದಲೇ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ನಡೆದಿದೆ ಹುಡುಕಾಟ? ಲೋಕಸಭೆಗೆ ತುಮಕೂರಲ್ಲೇ ಸ್ಪರ್ಧೆ ಮಾಡಲಿದ್ದಾರೆ ವಿ.ಸೋಮಣ್ಣ?. ಸೋಮಣ್ಣಗೆ ಸಾಥ್ ನೀಡುವಂತೆ ಸಂಸದ ಜಿ.ಎಸ್ ಬಸವರಾಜು ವೀರಶೈವ ಸಮಾಜಕ್ಕೆ ಕರೆ ಕೊಟ್ಟಿದ್ದಾರೆ.

ವಿ.ಸೋಮಣ್ಣ ತುಮಕೂರು ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುತ್ತಾರೆ. ಅವರ ಬೆಂಬಲಕ್ಕೆ ವೀರಶೈವ ಸಮಾಜ ನಿಲ್ಲಬೇಕು ಎಂದು ಸಂಸದ ಜಿ.ಎನ್ ಬಸವರಾಜ್ ಹೇಳಿದ್ದಾರೆ.

ತುಮಕೂರಿನಲ್ಲಿ ನಡೆದ ವೀರಶೈವ ಸಮಾಜದ ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್ ಬಸವರಾಜು ಮಾತನಾಡಿ, ಸಮಾಜ ಒಗ್ಗಟ್ಟಿನಿಂದ ಇದ್ದರೆ ಏನು ಬೇಕಾದರೂ ಸಾಧಿಸಬಹುದು. ನಿಮ್ಮ‌ನಿಮ್ಮಲ್ಲೇ ಕಿತ್ತಾಡಿದರೆ ನಿಮ್ಮನ್ನೇ ಒದ್ದು ಓಡಿಸುತ್ತಾರೆ. ಯಾವಾಗ ಒಗ್ಗಟ್ಟು ಮುರಿಯುತ್ತೆ ಏನೇನು ಮಾಡಬೇಕು ಅನ್ನೋದು ಅವರಿಗೆ ಗೊತ್ತಿದೆ.

ಸಮಾಜದಲ್ಲಿ ಕೆಲವೇ ಜನ ಇರೋದು ಒಟ್ಟಾಗಿರಿ ಎಂದು ಎಚ್ಚರಿಕೆ ಕೊಡುತ್ತಿದ್ದೇನೆ. ನನ್ನದು ಆಯ್ತು, ನನ್ನ ಸೀಟ್ ನ್ನು ಸೋಮಣ್ಣಗೆ ಕೊಡುತ್ತಾರೆ, ನಾನು ಚುನಾವಣೆಯಲ್ಲಿ ನಿಲ್ಲಲ್ಲ, ನಾನು ದೆಹಲಿಗೆ ಹೋಗಿದ್ದಾಗ ಹೇಳಿದ್ದೇನೆ. ಮುಂದೆ ಬರೋರನ್ನು ಉಪಯೋಗಿಸಿಕೊಳ್ಳಿ ಎಂದು ಹೇಳಿದ್ದಾರೆ.

8 ಬಾರಿ ಚುನಾವಣೆಗೆ ನಿಂತಿದ್ದೇನೆ, 5 ಸಲ ಗೆದ್ದಿದ್ದೇನೆ, ಮೂರು ಬಾರಿ ಸೋತ್ತಿದ್ದೇನೆ. ನಮ್ಮವರೇ ನನ್ನ ಸೋಲಿಸಿದ್ದು ಎಂದು ಗುಡುಗಿದರು. ನಾನು ಸೋತರು ಒಂದೇ ಗೆದ್ದರೂ ಒಂದೇ ಕೆಲಸ ಮಾಡಿಸಿಕೊಂಡು ಬರುತ್ತಿದ್ದೇನೆ ಎಂದರು.

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

4 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

4 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

6 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

7 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

10 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

13 hours ago