Categories: ರಾಜ್ಯ

ವಿ. ಸೋಮಣ್ಣ ತುಮಕೂರಿನಿಂದ ಲೋಕಸಭೆಗೆ ಸ್ಪರ್ಧೆ-ಸಂಸದ ಜಿ.ಎಸ್.ಬಸವರಾಜು

ವಿ.ಸೋಮಣ್ಣಗೆ ತುಮಕೂರು ಲೋಕಸಭೆಯ ಟಿಕೆಟ್ ಫಿಕ್ಸ್?, ಲೋಕಸಭೆ ಚುನಾವಣೆ ಗೆಲುವಿಗಾಗಿ ತಯಾರಿ ನಡೆದಿದೆಯಾ?, ವರ್ಷಕ್ಕಿಂತ ಮೊದಲೇ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ನಡೆದಿದೆ ಹುಡುಕಾಟ? ಲೋಕಸಭೆಗೆ ತುಮಕೂರಲ್ಲೇ ಸ್ಪರ್ಧೆ ಮಾಡಲಿದ್ದಾರೆ ವಿ.ಸೋಮಣ್ಣ?. ಸೋಮಣ್ಣಗೆ ಸಾಥ್ ನೀಡುವಂತೆ ಸಂಸದ ಜಿ.ಎಸ್ ಬಸವರಾಜು ವೀರಶೈವ ಸಮಾಜಕ್ಕೆ ಕರೆ ಕೊಟ್ಟಿದ್ದಾರೆ.

ವಿ.ಸೋಮಣ್ಣ ತುಮಕೂರು ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುತ್ತಾರೆ. ಅವರ ಬೆಂಬಲಕ್ಕೆ ವೀರಶೈವ ಸಮಾಜ ನಿಲ್ಲಬೇಕು ಎಂದು ಸಂಸದ ಜಿ.ಎನ್ ಬಸವರಾಜ್ ಹೇಳಿದ್ದಾರೆ.

ತುಮಕೂರಿನಲ್ಲಿ ನಡೆದ ವೀರಶೈವ ಸಮಾಜದ ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್ ಬಸವರಾಜು ಮಾತನಾಡಿ, ಸಮಾಜ ಒಗ್ಗಟ್ಟಿನಿಂದ ಇದ್ದರೆ ಏನು ಬೇಕಾದರೂ ಸಾಧಿಸಬಹುದು. ನಿಮ್ಮ‌ನಿಮ್ಮಲ್ಲೇ ಕಿತ್ತಾಡಿದರೆ ನಿಮ್ಮನ್ನೇ ಒದ್ದು ಓಡಿಸುತ್ತಾರೆ. ಯಾವಾಗ ಒಗ್ಗಟ್ಟು ಮುರಿಯುತ್ತೆ ಏನೇನು ಮಾಡಬೇಕು ಅನ್ನೋದು ಅವರಿಗೆ ಗೊತ್ತಿದೆ.

ಸಮಾಜದಲ್ಲಿ ಕೆಲವೇ ಜನ ಇರೋದು ಒಟ್ಟಾಗಿರಿ ಎಂದು ಎಚ್ಚರಿಕೆ ಕೊಡುತ್ತಿದ್ದೇನೆ. ನನ್ನದು ಆಯ್ತು, ನನ್ನ ಸೀಟ್ ನ್ನು ಸೋಮಣ್ಣಗೆ ಕೊಡುತ್ತಾರೆ, ನಾನು ಚುನಾವಣೆಯಲ್ಲಿ ನಿಲ್ಲಲ್ಲ, ನಾನು ದೆಹಲಿಗೆ ಹೋಗಿದ್ದಾಗ ಹೇಳಿದ್ದೇನೆ. ಮುಂದೆ ಬರೋರನ್ನು ಉಪಯೋಗಿಸಿಕೊಳ್ಳಿ ಎಂದು ಹೇಳಿದ್ದಾರೆ.

8 ಬಾರಿ ಚುನಾವಣೆಗೆ ನಿಂತಿದ್ದೇನೆ, 5 ಸಲ ಗೆದ್ದಿದ್ದೇನೆ, ಮೂರು ಬಾರಿ ಸೋತ್ತಿದ್ದೇನೆ. ನಮ್ಮವರೇ ನನ್ನ ಸೋಲಿಸಿದ್ದು ಎಂದು ಗುಡುಗಿದರು. ನಾನು ಸೋತರು ಒಂದೇ ಗೆದ್ದರೂ ಒಂದೇ ಕೆಲಸ ಮಾಡಿಸಿಕೊಂಡು ಬರುತ್ತಿದ್ದೇನೆ ಎಂದರು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

13 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

19 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

23 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago