ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಇತಿಹಾಸ ಪ್ರಸಿದ್ಧ ಹುಲುಕುಡಿ ಕ್ಷೇತ್ರದಲ್ಲಿ ಕಾರ್ತಿಕ ಮಾಸದ ಕೊನೆ ಮಂಗಳವಾರ ದಿನದಂದು ಶ್ರೀ ವೀರಭದ್ರಸ್ವಾಮಿ ಮತ್ತು ಶ್ರೀ ಪ್ರಸನ್ನ ಭದ್ರಕಾಳಮ್ಮ ನವರ 13 ನೇ ವರ್ಷದ ಕಾರ್ತಿಕ ದೀಪೋತ್ಸವ ಹಾಗೂ ಮುತ್ತಿನ ಪಲ್ಲಕ್ಕಿ ಉತ್ಸವ ವಿಜ್ರಂಭಣೆಯಿಂದ ನೆರವೇರಿತು.
ಸಾವಿರಾರು ಭಕ್ತಾದಿಗಳು ದೀಪೋತ್ಸವ ಹಾಗೂ ಮುತ್ತಿನ ಪಲ್ಲಕ್ಕಿ ಉತ್ಸವ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು. ಕೊನೆಯಲ್ಲಿ ಭಕ್ತಾದಿಗಳಿಗೆ ದಾಸೋಹ ವ್ಯವಸ್ಥೆ ಮಾಡಲಾಗಿತ್ತು.