ವೀರಾಪುರದ ದೇವಸ್ಥಾನಗಳಲ್ಲಿ ಸರಣಿ ಕಳ್ಳತನ: 8 ಚಿನ್ನದ ತಾಳಿ 50 ಸಾವಿರ ಕಾಣಿಕೆ ಹಣ ಕಳವು

ಒಂದೇ ರಾತ್ರಿಯಲ್ಲಿ ಎರಡು‌ ದೇವಸ್ಥಾನಗಳಲ್ಲಿನ ಕಾಣಿಕೆ ಹುಂಡಿ ಒಡೆದು ಸರಣಿ ಕಳ್ಳತನ ಮಾಡಿರೋ ಘಟನೆ ತಾಲೂಕಿನ ವೀರಾಪುರದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಮಾರಮ್ಮ ಮತ್ತು ಅಂಜನೇಯ ದೇವಸ್ಥಾನಗಳಲ್ಲಿ ಕಳವು ಮಾಡಿರುವ ಕಳ್ಳರು, ಹುಂಡಿಯಲ್ಲಿದ್ದ ಹಣ ಹಾಗೂ ಮಾರಮ್ಮ ದೇವತೆ ಕೊರಳಿನಲ್ಲಿದ್ದ 8 ಚಿನ್ನದ ತಾಳಿಗಳು ಮತ್ತು ಬೆಳ್ಳಿ ಅಭರಣಗಳು ಕಳವು ಮಾಡಿರೋ ಕಳ್ಳರು.

ಹುಂಡಿಯಲ್ಲಿದ್ದ 50 ಸಾವಿರ ರೂ. ನೋಟ್ ಗಳನ್ನ ದೋಚಿದ ಕಳ್ಳರು 3,600 ರೂಪಾಯಿಯ ನಾಣ್ಯಗಳನ್ನ ಹುಂಡಿಯಲ್ಲಿಯೇ ಬಿಟ್ಟು ಹೋಗಿದ್ದಾರೆ.

ದೇವಸ್ಥಾನದ ಪೂಜಾರಿ ಸೋಮವಾರದ ಸಂಜೆ 7:30ರ‌ ಸಮಯದಲ್ಲಿ ದೇವಸ್ಥಾನ ಸ್ವಚ್ಛ ಮಾಡಲು ಬಂದಾಗ ಕಳವು ಪ್ರಕರಣ ಬೆಳಕಿಗೆ ಬಂದಿದೆ, ಕಳೆದ 5 ವರ್ಷಗಳಿಂದ ಹುಂಡಿ ಹಣವನ್ನ ಹೊರಗೆ ತೆಗೆದಿರಲಿಲ್ಲ, ಸುಮಾರು 50 ಸಾವಿರಕ್ಕೂ ಹೆಚ್ಚು ಹಣ ಸಂಗ್ರಹವಾಗಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಮಾರಮ್ಮ ದೇವಸ್ಥಾನದಲ್ಲಿ ಕಳವು ಮಾಡಿದ ನಂತರ ಕಳ್ಳರು ಹಿಂಭಾಗದಲ್ಲಿದ್ದ ಅಂಜನೇಯ ದೇವಸ್ಥಾನದ ಹುಂಡಿಯನ್ನ ಕದ್ದು ಗ್ರಾಮದ ಹೊರಗಿನ ನೀಲಿಗಿರಿ ತೋಪಿನಲ್ಲಿ ಹುಂಡಿ ಎಸೆದು ಪರಾರಿಯಾಗಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳ ಪರಿಶೀಲನೆ ನಡೆಸಿದ ಪೊಲೀಸರಿಗೆ ಸುತ್ತಮುತ್ತಲಿನ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಇಬ್ಬರು ವ್ಯಕ್ತಿಗಳು ಭಾನುವಾರದ ರಾತ್ರಿಯಲ್ಲಿ ದೇವಸ್ಥಾನದ ಬಳಿ ಓಡಾಡಿರುವ ಮಾಹಿತಿ ಸಿಕ್ಕಿದೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

13 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago