ವೀರಾಪುರದ ದೇವಸ್ಥಾನಗಳಲ್ಲಿ ಸರಣಿ ಕಳ್ಳತನ: 8 ಚಿನ್ನದ ತಾಳಿ 50 ಸಾವಿರ ಕಾಣಿಕೆ ಹಣ ಕಳವು

ಒಂದೇ ರಾತ್ರಿಯಲ್ಲಿ ಎರಡು‌ ದೇವಸ್ಥಾನಗಳಲ್ಲಿನ ಕಾಣಿಕೆ ಹುಂಡಿ ಒಡೆದು ಸರಣಿ ಕಳ್ಳತನ ಮಾಡಿರೋ ಘಟನೆ ತಾಲೂಕಿನ ವೀರಾಪುರದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಮಾರಮ್ಮ ಮತ್ತು ಅಂಜನೇಯ ದೇವಸ್ಥಾನಗಳಲ್ಲಿ ಕಳವು ಮಾಡಿರುವ ಕಳ್ಳರು, ಹುಂಡಿಯಲ್ಲಿದ್ದ ಹಣ ಹಾಗೂ ಮಾರಮ್ಮ ದೇವತೆ ಕೊರಳಿನಲ್ಲಿದ್ದ 8 ಚಿನ್ನದ ತಾಳಿಗಳು ಮತ್ತು ಬೆಳ್ಳಿ ಅಭರಣಗಳು ಕಳವು ಮಾಡಿರೋ ಕಳ್ಳರು.

ಹುಂಡಿಯಲ್ಲಿದ್ದ 50 ಸಾವಿರ ರೂ. ನೋಟ್ ಗಳನ್ನ ದೋಚಿದ ಕಳ್ಳರು 3,600 ರೂಪಾಯಿಯ ನಾಣ್ಯಗಳನ್ನ ಹುಂಡಿಯಲ್ಲಿಯೇ ಬಿಟ್ಟು ಹೋಗಿದ್ದಾರೆ.

ದೇವಸ್ಥಾನದ ಪೂಜಾರಿ ಸೋಮವಾರದ ಸಂಜೆ 7:30ರ‌ ಸಮಯದಲ್ಲಿ ದೇವಸ್ಥಾನ ಸ್ವಚ್ಛ ಮಾಡಲು ಬಂದಾಗ ಕಳವು ಪ್ರಕರಣ ಬೆಳಕಿಗೆ ಬಂದಿದೆ, ಕಳೆದ 5 ವರ್ಷಗಳಿಂದ ಹುಂಡಿ ಹಣವನ್ನ ಹೊರಗೆ ತೆಗೆದಿರಲಿಲ್ಲ, ಸುಮಾರು 50 ಸಾವಿರಕ್ಕೂ ಹೆಚ್ಚು ಹಣ ಸಂಗ್ರಹವಾಗಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಮಾರಮ್ಮ ದೇವಸ್ಥಾನದಲ್ಲಿ ಕಳವು ಮಾಡಿದ ನಂತರ ಕಳ್ಳರು ಹಿಂಭಾಗದಲ್ಲಿದ್ದ ಅಂಜನೇಯ ದೇವಸ್ಥಾನದ ಹುಂಡಿಯನ್ನ ಕದ್ದು ಗ್ರಾಮದ ಹೊರಗಿನ ನೀಲಿಗಿರಿ ತೋಪಿನಲ್ಲಿ ಹುಂಡಿ ಎಸೆದು ಪರಾರಿಯಾಗಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳ ಪರಿಶೀಲನೆ ನಡೆಸಿದ ಪೊಲೀಸರಿಗೆ ಸುತ್ತಮುತ್ತಲಿನ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಇಬ್ಬರು ವ್ಯಕ್ತಿಗಳು ಭಾನುವಾರದ ರಾತ್ರಿಯಲ್ಲಿ ದೇವಸ್ಥಾನದ ಬಳಿ ಓಡಾಡಿರುವ ಮಾಹಿತಿ ಸಿಕ್ಕಿದೆ.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

9 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

3 days ago