ವೀರಾಪುರ ಗ್ರಾಮದಲ್ಲಿ ಎನ್.ಎಸ್.ಎಸ್ ವಿಶೇಷ ಶಿಬಿರ: ಶಿಸ್ತುಬದ್ಧ ಜೀವನ ಶೈಲಿ‌ ವಿದ್ಯಾರ್ಥಿಗಳಿಗೆ ಬಹುಮುಖ್ಯ-ವಿಜಯ ಮಾರಹನುಮಯ್ಯ

ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಆಗುತ್ತವೆ ಎಂದು ಡಾ.ಅಂಬೇಡ್ಕರ್ ವಿದ್ಯಾಕೇಂದ್ರದ ಅಧ್ಯಕ್ಷೆ ವಿಜಯ ಮಾರಹನುಮಯ್ಯ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ವೀರಾಪುರ ಗ್ರಾಮದಲ್ಲಿ  ಮಾರಸಂದ್ರ ಪಿಕೆಬಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಸ್ತುಬದ್ದ ಜೀವನ ಶೈಲಿ‌ ವಿದ್ಯಾರ್ಥಿಗಳಿಗೆ ಬಹುಮುಖ್ಯ.   ದುರಾಭ್ಯಾಸಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತವೆ. ವಿದ್ಯಾರ್ಥಿಗಳು ಪಠ್ಯ ವಿಷಯಗಳಿಗೆ ಮಾತ್ರ ಸೀಮಿತ ಆಗಬಾರದು. ಪಠ್ಯೇತರ ಚಟುವಟಿಕೆಗಳಲ್ಲಿ  ತಮ್ಮ ಆಸಕ್ತಿಯನ್ನು ಹೊಂದಬೇಕು. ಗ್ತಾಮೀಣ ಪ್ರದೇಶದ  ಸಮಕಾಲೀನ ಸಾಮಾಜಿಕ ಮತ್ತು ಸಾಂಸ್ಕೃತಿಕ  ಪರಿಸ್ಥಿತಿಯನ್ನು ಅರಿಯಲು ವಿಶೇಷ ಶಿಬಿರಗಳಿಂದ ಅನುಕೂಲವಾಗುತ್ತದೆ ಎಂದರು.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ಸಾದಿಕ್ ಪಾಷ ಮಾತನಾಡಿ, ನಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛತೆಯಲ್ಲಿ ಇರುವಂತೆ ಮಾಡುವುದು  ಎಲ್ಲಾ ನಾಗರಿಕರ ಜವಾಬ್ದಾರಿ. ಶುಚಿತ್ವದಿಂದ ಆರೋಗ್ಯ ವೃದ್ದಿಸುತ್ತದೆ. ಸ್ವಚ್ಛತೆಯ ಮಹತ್ವ ಕುರಿತು ಜನಜಾಗೃತಿ ಹೆಚ್ಚಿನ‌ ಪ್ರಮಾಣದಲ್ಲಿ ಆಗಬೇಕಾಗಿದೆ. ವಿಶೇಷ ಸೇವಾ ಶಿಬಿಗಳಲ್ಲಿ ಭಾಗವಹಿಸಿದ್ದ. ಹಲವಾರು ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಜೀವನ ಶೈಲಿ ಬದಲಿಸಿಕೊಂಡಿದ್ದಾರೆ ಎಂದರು.

ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರೇವತಿ ಮಾತನಾಡಿ, ವಿದ್ಯಾರ್ಥಿ ಜೀವನದ ಹಂತದಲ್ಲಿಯೇ ಯುವಜನತೆಯು ವಿದ್ಯೆ, ಜ್ಞಾನ ಮತ್ತು ಕೌಶಲ್ಯದ ಮಹತ್ವವನ್ನು ಸಕಾಲದಲ್ಲಿ ಅರ್ಥ ಮಾಡಿಕೊಳ್ಳಬೇಕು.‌ ನಮ್ಮ ಸುತ್ತಲಿನ ಸಮಾಜದ ಒಳಿತಿಗಾಗಿ  ಬದುಕನ್ನು ಸಾರ್ಥಕಗೊಳಿಸಬೇಕು. ಮಹಾತ್ಮ ಗಾಂಧೀಜಿಯವರ ತತ್ತ್ವ ಮತ್ತು ಆದರ್ಶ ಚಿಂತನೆಗಳ‌ ಆಶಯದಂತೆ ರಾಷ್ಟ್ರೀಯ ಸೇವಾ ಯೋಜನೆ ಅಸ್ತಿತ್ವಕ್ಕೆ ಬಂದಿದೆ. ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನು  ಬದುಕಿನಲ್ಲಿ ಅಳವಡಿಸಿಕೊಂಡರೆ ಮಹಾತ್ಮ ಗಾಂಧೀಜಿ ಅವರ ಕನಸು ನನಸಾಗುತ್ತದೆ ಎಂದರು.

ಸಮಾರಂಭದಲ್ಲಿ ಆಡಳಿತಾಧಿಕಾರಿ ಟಿ.ಎಂ.ಕರಗಯ್ಯ, ಪಿಕೆಬಿ ಪದವಿ ಪೂರ್ವ ಕಾಲೇಜಿನ‌ ಪ್ರಾಂಶುಪಾಲ ಎಂ.ಆನಂದ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಎ.ಆರ್.ಗಂಗಾಧರೇಶ್ವರ, ಶಿಬಿರಾಧಿಕಾರಿ ಕೆ.ಆರ್.ಪ್ರಸನ್ನಕುಮಾರ್, ಮಜರಾ ಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ, ಉಪಾಧ್ಯಕ್ಷೆ ಮೀನಾ,  ಸದಸ್ಯರುಗಳಾದ ವಿಮಲಪಿಳ್ಳಾಂಜಪ್ಪ, ವಿ.ಎಂ.ವಿಜಯಕುಮಾರ್, ಲೀಲಮ್ಮ ಪಿಳ್ಳೇಗೌಡ, ವಿ.ಎಂ.ಶಿವಕುಮಾರ್,  ವೀರಾಪುರ ಗ್ರಾಮದ  ಮುಖಂಡರುಗಳಾದ ಪಿ.ಮುನಿಯಪ್ಪ, ಲಕ್ಷ್ಮೀನಾರಾಯಣ್, ಪಿಳ್ಳೇಗೌಡ, ಬಸವರಾಜು, ಹನುಮಂತಪ್ಪ,  ಮುನೇಗೌಡ, ಗಂಗಸಿದ್ದಪ್ಪ, ಸತ್ಯನಾರಾಯಣ್, ಪಿಕೆಬಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು, ಬೋಧಕೇತರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

36 minutes ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

9 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

11 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

14 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

15 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

18 hours ago