ವೀರಾಪುರ ಗ್ರಾಮದಲ್ಲಿ ಎನ್.ಎಸ್.ಎಸ್ ವಿಶೇಷ ಶಿಬಿರ: ಶಿಸ್ತುಬದ್ಧ ಜೀವನ ಶೈಲಿ‌ ವಿದ್ಯಾರ್ಥಿಗಳಿಗೆ ಬಹುಮುಖ್ಯ-ವಿಜಯ ಮಾರಹನುಮಯ್ಯ

ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಆಗುತ್ತವೆ ಎಂದು ಡಾ.ಅಂಬೇಡ್ಕರ್ ವಿದ್ಯಾಕೇಂದ್ರದ ಅಧ್ಯಕ್ಷೆ ವಿಜಯ ಮಾರಹನುಮಯ್ಯ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ವೀರಾಪುರ ಗ್ರಾಮದಲ್ಲಿ  ಮಾರಸಂದ್ರ ಪಿಕೆಬಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಸ್ತುಬದ್ದ ಜೀವನ ಶೈಲಿ‌ ವಿದ್ಯಾರ್ಥಿಗಳಿಗೆ ಬಹುಮುಖ್ಯ.   ದುರಾಭ್ಯಾಸಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತವೆ. ವಿದ್ಯಾರ್ಥಿಗಳು ಪಠ್ಯ ವಿಷಯಗಳಿಗೆ ಮಾತ್ರ ಸೀಮಿತ ಆಗಬಾರದು. ಪಠ್ಯೇತರ ಚಟುವಟಿಕೆಗಳಲ್ಲಿ  ತಮ್ಮ ಆಸಕ್ತಿಯನ್ನು ಹೊಂದಬೇಕು. ಗ್ತಾಮೀಣ ಪ್ರದೇಶದ  ಸಮಕಾಲೀನ ಸಾಮಾಜಿಕ ಮತ್ತು ಸಾಂಸ್ಕೃತಿಕ  ಪರಿಸ್ಥಿತಿಯನ್ನು ಅರಿಯಲು ವಿಶೇಷ ಶಿಬಿರಗಳಿಂದ ಅನುಕೂಲವಾಗುತ್ತದೆ ಎಂದರು.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ಸಾದಿಕ್ ಪಾಷ ಮಾತನಾಡಿ, ನಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛತೆಯಲ್ಲಿ ಇರುವಂತೆ ಮಾಡುವುದು  ಎಲ್ಲಾ ನಾಗರಿಕರ ಜವಾಬ್ದಾರಿ. ಶುಚಿತ್ವದಿಂದ ಆರೋಗ್ಯ ವೃದ್ದಿಸುತ್ತದೆ. ಸ್ವಚ್ಛತೆಯ ಮಹತ್ವ ಕುರಿತು ಜನಜಾಗೃತಿ ಹೆಚ್ಚಿನ‌ ಪ್ರಮಾಣದಲ್ಲಿ ಆಗಬೇಕಾಗಿದೆ. ವಿಶೇಷ ಸೇವಾ ಶಿಬಿಗಳಲ್ಲಿ ಭಾಗವಹಿಸಿದ್ದ. ಹಲವಾರು ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಜೀವನ ಶೈಲಿ ಬದಲಿಸಿಕೊಂಡಿದ್ದಾರೆ ಎಂದರು.

ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರೇವತಿ ಮಾತನಾಡಿ, ವಿದ್ಯಾರ್ಥಿ ಜೀವನದ ಹಂತದಲ್ಲಿಯೇ ಯುವಜನತೆಯು ವಿದ್ಯೆ, ಜ್ಞಾನ ಮತ್ತು ಕೌಶಲ್ಯದ ಮಹತ್ವವನ್ನು ಸಕಾಲದಲ್ಲಿ ಅರ್ಥ ಮಾಡಿಕೊಳ್ಳಬೇಕು.‌ ನಮ್ಮ ಸುತ್ತಲಿನ ಸಮಾಜದ ಒಳಿತಿಗಾಗಿ  ಬದುಕನ್ನು ಸಾರ್ಥಕಗೊಳಿಸಬೇಕು. ಮಹಾತ್ಮ ಗಾಂಧೀಜಿಯವರ ತತ್ತ್ವ ಮತ್ತು ಆದರ್ಶ ಚಿಂತನೆಗಳ‌ ಆಶಯದಂತೆ ರಾಷ್ಟ್ರೀಯ ಸೇವಾ ಯೋಜನೆ ಅಸ್ತಿತ್ವಕ್ಕೆ ಬಂದಿದೆ. ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನು  ಬದುಕಿನಲ್ಲಿ ಅಳವಡಿಸಿಕೊಂಡರೆ ಮಹಾತ್ಮ ಗಾಂಧೀಜಿ ಅವರ ಕನಸು ನನಸಾಗುತ್ತದೆ ಎಂದರು.

ಸಮಾರಂಭದಲ್ಲಿ ಆಡಳಿತಾಧಿಕಾರಿ ಟಿ.ಎಂ.ಕರಗಯ್ಯ, ಪಿಕೆಬಿ ಪದವಿ ಪೂರ್ವ ಕಾಲೇಜಿನ‌ ಪ್ರಾಂಶುಪಾಲ ಎಂ.ಆನಂದ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಎ.ಆರ್.ಗಂಗಾಧರೇಶ್ವರ, ಶಿಬಿರಾಧಿಕಾರಿ ಕೆ.ಆರ್.ಪ್ರಸನ್ನಕುಮಾರ್, ಮಜರಾ ಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ, ಉಪಾಧ್ಯಕ್ಷೆ ಮೀನಾ,  ಸದಸ್ಯರುಗಳಾದ ವಿಮಲಪಿಳ್ಳಾಂಜಪ್ಪ, ವಿ.ಎಂ.ವಿಜಯಕುಮಾರ್, ಲೀಲಮ್ಮ ಪಿಳ್ಳೇಗೌಡ, ವಿ.ಎಂ.ಶಿವಕುಮಾರ್,  ವೀರಾಪುರ ಗ್ರಾಮದ  ಮುಖಂಡರುಗಳಾದ ಪಿ.ಮುನಿಯಪ್ಪ, ಲಕ್ಷ್ಮೀನಾರಾಯಣ್, ಪಿಳ್ಳೇಗೌಡ, ಬಸವರಾಜು, ಹನುಮಂತಪ್ಪ,  ಮುನೇಗೌಡ, ಗಂಗಸಿದ್ದಪ್ಪ, ಸತ್ಯನಾರಾಯಣ್, ಪಿಕೆಬಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು, ಬೋಧಕೇತರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

46 minutes ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

11 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

12 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

13 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

14 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

16 hours ago