ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಆಗುತ್ತವೆ ಎಂದು ಡಾ.ಅಂಬೇಡ್ಕರ್ ವಿದ್ಯಾಕೇಂದ್ರದ ಅಧ್ಯಕ್ಷೆ ವಿಜಯ ಮಾರಹನುಮಯ್ಯ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ವೀರಾಪುರ ಗ್ರಾಮದಲ್ಲಿ ಮಾರಸಂದ್ರ ಪಿಕೆಬಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಸ್ತುಬದ್ದ ಜೀವನ ಶೈಲಿ ವಿದ್ಯಾರ್ಥಿಗಳಿಗೆ ಬಹುಮುಖ್ಯ. ದುರಾಭ್ಯಾಸಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತವೆ. ವಿದ್ಯಾರ್ಥಿಗಳು ಪಠ್ಯ ವಿಷಯಗಳಿಗೆ ಮಾತ್ರ ಸೀಮಿತ ಆಗಬಾರದು. ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮ ಆಸಕ್ತಿಯನ್ನು ಹೊಂದಬೇಕು. ಗ್ತಾಮೀಣ ಪ್ರದೇಶದ ಸಮಕಾಲೀನ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿಸ್ಥಿತಿಯನ್ನು ಅರಿಯಲು ವಿಶೇಷ ಶಿಬಿರಗಳಿಂದ ಅನುಕೂಲವಾಗುತ್ತದೆ ಎಂದರು.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ಸಾದಿಕ್ ಪಾಷ ಮಾತನಾಡಿ, ನಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛತೆಯಲ್ಲಿ ಇರುವಂತೆ ಮಾಡುವುದು ಎಲ್ಲಾ ನಾಗರಿಕರ ಜವಾಬ್ದಾರಿ. ಶುಚಿತ್ವದಿಂದ ಆರೋಗ್ಯ ವೃದ್ದಿಸುತ್ತದೆ. ಸ್ವಚ್ಛತೆಯ ಮಹತ್ವ ಕುರಿತು ಜನಜಾಗೃತಿ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕಾಗಿದೆ. ವಿಶೇಷ ಸೇವಾ ಶಿಬಿಗಳಲ್ಲಿ ಭಾಗವಹಿಸಿದ್ದ. ಹಲವಾರು ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಜೀವನ ಶೈಲಿ ಬದಲಿಸಿಕೊಂಡಿದ್ದಾರೆ ಎಂದರು.
ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರೇವತಿ ಮಾತನಾಡಿ, ವಿದ್ಯಾರ್ಥಿ ಜೀವನದ ಹಂತದಲ್ಲಿಯೇ ಯುವಜನತೆಯು ವಿದ್ಯೆ, ಜ್ಞಾನ ಮತ್ತು ಕೌಶಲ್ಯದ ಮಹತ್ವವನ್ನು ಸಕಾಲದಲ್ಲಿ ಅರ್ಥ ಮಾಡಿಕೊಳ್ಳಬೇಕು. ನಮ್ಮ ಸುತ್ತಲಿನ ಸಮಾಜದ ಒಳಿತಿಗಾಗಿ ಬದುಕನ್ನು ಸಾರ್ಥಕಗೊಳಿಸಬೇಕು. ಮಹಾತ್ಮ ಗಾಂಧೀಜಿಯವರ ತತ್ತ್ವ ಮತ್ತು ಆದರ್ಶ ಚಿಂತನೆಗಳ ಆಶಯದಂತೆ ರಾಷ್ಟ್ರೀಯ ಸೇವಾ ಯೋಜನೆ ಅಸ್ತಿತ್ವಕ್ಕೆ ಬಂದಿದೆ. ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಮಹಾತ್ಮ ಗಾಂಧೀಜಿ ಅವರ ಕನಸು ನನಸಾಗುತ್ತದೆ ಎಂದರು.
ಸಮಾರಂಭದಲ್ಲಿ ಆಡಳಿತಾಧಿಕಾರಿ ಟಿ.ಎಂ.ಕರಗಯ್ಯ, ಪಿಕೆಬಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಆನಂದ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಎ.ಆರ್.ಗಂಗಾಧರೇಶ್ವರ, ಶಿಬಿರಾಧಿಕಾರಿ ಕೆ.ಆರ್.ಪ್ರಸನ್ನಕುಮಾರ್, ಮಜರಾ ಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ, ಉಪಾಧ್ಯಕ್ಷೆ ಮೀನಾ, ಸದಸ್ಯರುಗಳಾದ ವಿಮಲಪಿಳ್ಳಾಂಜಪ್ಪ, ವಿ.ಎಂ.ವಿಜಯಕುಮಾರ್, ಲೀಲಮ್ಮ ಪಿಳ್ಳೇಗೌಡ, ವಿ.ಎಂ.ಶಿವಕುಮಾರ್, ವೀರಾಪುರ ಗ್ರಾಮದ ಮುಖಂಡರುಗಳಾದ ಪಿ.ಮುನಿಯಪ್ಪ, ಲಕ್ಷ್ಮೀನಾರಾಯಣ್, ಪಿಳ್ಳೇಗೌಡ, ಬಸವರಾಜು, ಹನುಮಂತಪ್ಪ, ಮುನೇಗೌಡ, ಗಂಗಸಿದ್ದಪ್ಪ, ಸತ್ಯನಾರಾಯಣ್, ಪಿಕೆಬಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು, ಬೋಧಕೇತರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…