ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಆಗುತ್ತವೆ ಎಂದು ಡಾ.ಅಂಬೇಡ್ಕರ್ ವಿದ್ಯಾಕೇಂದ್ರದ ಅಧ್ಯಕ್ಷೆ ವಿಜಯ ಮಾರಹನುಮಯ್ಯ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ವೀರಾಪುರ ಗ್ರಾಮದಲ್ಲಿ ಮಾರಸಂದ್ರ ಪಿಕೆಬಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಸ್ತುಬದ್ದ ಜೀವನ ಶೈಲಿ ವಿದ್ಯಾರ್ಥಿಗಳಿಗೆ ಬಹುಮುಖ್ಯ. ದುರಾಭ್ಯಾಸಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತವೆ. ವಿದ್ಯಾರ್ಥಿಗಳು ಪಠ್ಯ ವಿಷಯಗಳಿಗೆ ಮಾತ್ರ ಸೀಮಿತ ಆಗಬಾರದು. ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮ ಆಸಕ್ತಿಯನ್ನು ಹೊಂದಬೇಕು. ಗ್ತಾಮೀಣ ಪ್ರದೇಶದ ಸಮಕಾಲೀನ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿಸ್ಥಿತಿಯನ್ನು ಅರಿಯಲು ವಿಶೇಷ ಶಿಬಿರಗಳಿಂದ ಅನುಕೂಲವಾಗುತ್ತದೆ ಎಂದರು.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ಸಾದಿಕ್ ಪಾಷ ಮಾತನಾಡಿ, ನಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛತೆಯಲ್ಲಿ ಇರುವಂತೆ ಮಾಡುವುದು ಎಲ್ಲಾ ನಾಗರಿಕರ ಜವಾಬ್ದಾರಿ. ಶುಚಿತ್ವದಿಂದ ಆರೋಗ್ಯ ವೃದ್ದಿಸುತ್ತದೆ. ಸ್ವಚ್ಛತೆಯ ಮಹತ್ವ ಕುರಿತು ಜನಜಾಗೃತಿ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕಾಗಿದೆ. ವಿಶೇಷ ಸೇವಾ ಶಿಬಿಗಳಲ್ಲಿ ಭಾಗವಹಿಸಿದ್ದ. ಹಲವಾರು ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಜೀವನ ಶೈಲಿ ಬದಲಿಸಿಕೊಂಡಿದ್ದಾರೆ ಎಂದರು.
ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರೇವತಿ ಮಾತನಾಡಿ, ವಿದ್ಯಾರ್ಥಿ ಜೀವನದ ಹಂತದಲ್ಲಿಯೇ ಯುವಜನತೆಯು ವಿದ್ಯೆ, ಜ್ಞಾನ ಮತ್ತು ಕೌಶಲ್ಯದ ಮಹತ್ವವನ್ನು ಸಕಾಲದಲ್ಲಿ ಅರ್ಥ ಮಾಡಿಕೊಳ್ಳಬೇಕು. ನಮ್ಮ ಸುತ್ತಲಿನ ಸಮಾಜದ ಒಳಿತಿಗಾಗಿ ಬದುಕನ್ನು ಸಾರ್ಥಕಗೊಳಿಸಬೇಕು. ಮಹಾತ್ಮ ಗಾಂಧೀಜಿಯವರ ತತ್ತ್ವ ಮತ್ತು ಆದರ್ಶ ಚಿಂತನೆಗಳ ಆಶಯದಂತೆ ರಾಷ್ಟ್ರೀಯ ಸೇವಾ ಯೋಜನೆ ಅಸ್ತಿತ್ವಕ್ಕೆ ಬಂದಿದೆ. ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಮಹಾತ್ಮ ಗಾಂಧೀಜಿ ಅವರ ಕನಸು ನನಸಾಗುತ್ತದೆ ಎಂದರು.
ಸಮಾರಂಭದಲ್ಲಿ ಆಡಳಿತಾಧಿಕಾರಿ ಟಿ.ಎಂ.ಕರಗಯ್ಯ, ಪಿಕೆಬಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಆನಂದ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಎ.ಆರ್.ಗಂಗಾಧರೇಶ್ವರ, ಶಿಬಿರಾಧಿಕಾರಿ ಕೆ.ಆರ್.ಪ್ರಸನ್ನಕುಮಾರ್, ಮಜರಾ ಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ, ಉಪಾಧ್ಯಕ್ಷೆ ಮೀನಾ, ಸದಸ್ಯರುಗಳಾದ ವಿಮಲಪಿಳ್ಳಾಂಜಪ್ಪ, ವಿ.ಎಂ.ವಿಜಯಕುಮಾರ್, ಲೀಲಮ್ಮ ಪಿಳ್ಳೇಗೌಡ, ವಿ.ಎಂ.ಶಿವಕುಮಾರ್, ವೀರಾಪುರ ಗ್ರಾಮದ ಮುಖಂಡರುಗಳಾದ ಪಿ.ಮುನಿಯಪ್ಪ, ಲಕ್ಷ್ಮೀನಾರಾಯಣ್, ಪಿಳ್ಳೇಗೌಡ, ಬಸವರಾಜು, ಹನುಮಂತಪ್ಪ, ಮುನೇಗೌಡ, ಗಂಗಸಿದ್ದಪ್ಪ, ಸತ್ಯನಾರಾಯಣ್, ಪಿಕೆಬಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು, ಬೋಧಕೇತರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…
ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…
ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…
ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ್ಯಾಂಕ್ ಪಡೆದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…