ವೀರಾಪುರ ಗ್ರಾಮದಲ್ಲಿ ಎನ್.ಎಸ್.ಎಸ್ ವಿಶೇಷ ಶಿಬಿರ: ಶಿಸ್ತುಬದ್ಧ ಜೀವನ ಶೈಲಿ‌ ವಿದ್ಯಾರ್ಥಿಗಳಿಗೆ ಬಹುಮುಖ್ಯ-ವಿಜಯ ಮಾರಹನುಮಯ್ಯ

ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಆಗುತ್ತವೆ ಎಂದು ಡಾ.ಅಂಬೇಡ್ಕರ್ ವಿದ್ಯಾಕೇಂದ್ರದ ಅಧ್ಯಕ್ಷೆ ವಿಜಯ ಮಾರಹನುಮಯ್ಯ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ವೀರಾಪುರ ಗ್ರಾಮದಲ್ಲಿ  ಮಾರಸಂದ್ರ ಪಿಕೆಬಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಸ್ತುಬದ್ದ ಜೀವನ ಶೈಲಿ‌ ವಿದ್ಯಾರ್ಥಿಗಳಿಗೆ ಬಹುಮುಖ್ಯ.   ದುರಾಭ್ಯಾಸಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತವೆ. ವಿದ್ಯಾರ್ಥಿಗಳು ಪಠ್ಯ ವಿಷಯಗಳಿಗೆ ಮಾತ್ರ ಸೀಮಿತ ಆಗಬಾರದು. ಪಠ್ಯೇತರ ಚಟುವಟಿಕೆಗಳಲ್ಲಿ  ತಮ್ಮ ಆಸಕ್ತಿಯನ್ನು ಹೊಂದಬೇಕು. ಗ್ತಾಮೀಣ ಪ್ರದೇಶದ  ಸಮಕಾಲೀನ ಸಾಮಾಜಿಕ ಮತ್ತು ಸಾಂಸ್ಕೃತಿಕ  ಪರಿಸ್ಥಿತಿಯನ್ನು ಅರಿಯಲು ವಿಶೇಷ ಶಿಬಿರಗಳಿಂದ ಅನುಕೂಲವಾಗುತ್ತದೆ ಎಂದರು.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ಸಾದಿಕ್ ಪಾಷ ಮಾತನಾಡಿ, ನಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛತೆಯಲ್ಲಿ ಇರುವಂತೆ ಮಾಡುವುದು  ಎಲ್ಲಾ ನಾಗರಿಕರ ಜವಾಬ್ದಾರಿ. ಶುಚಿತ್ವದಿಂದ ಆರೋಗ್ಯ ವೃದ್ದಿಸುತ್ತದೆ. ಸ್ವಚ್ಛತೆಯ ಮಹತ್ವ ಕುರಿತು ಜನಜಾಗೃತಿ ಹೆಚ್ಚಿನ‌ ಪ್ರಮಾಣದಲ್ಲಿ ಆಗಬೇಕಾಗಿದೆ. ವಿಶೇಷ ಸೇವಾ ಶಿಬಿಗಳಲ್ಲಿ ಭಾಗವಹಿಸಿದ್ದ. ಹಲವಾರು ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಜೀವನ ಶೈಲಿ ಬದಲಿಸಿಕೊಂಡಿದ್ದಾರೆ ಎಂದರು.

ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರೇವತಿ ಮಾತನಾಡಿ, ವಿದ್ಯಾರ್ಥಿ ಜೀವನದ ಹಂತದಲ್ಲಿಯೇ ಯುವಜನತೆಯು ವಿದ್ಯೆ, ಜ್ಞಾನ ಮತ್ತು ಕೌಶಲ್ಯದ ಮಹತ್ವವನ್ನು ಸಕಾಲದಲ್ಲಿ ಅರ್ಥ ಮಾಡಿಕೊಳ್ಳಬೇಕು.‌ ನಮ್ಮ ಸುತ್ತಲಿನ ಸಮಾಜದ ಒಳಿತಿಗಾಗಿ  ಬದುಕನ್ನು ಸಾರ್ಥಕಗೊಳಿಸಬೇಕು. ಮಹಾತ್ಮ ಗಾಂಧೀಜಿಯವರ ತತ್ತ್ವ ಮತ್ತು ಆದರ್ಶ ಚಿಂತನೆಗಳ‌ ಆಶಯದಂತೆ ರಾಷ್ಟ್ರೀಯ ಸೇವಾ ಯೋಜನೆ ಅಸ್ತಿತ್ವಕ್ಕೆ ಬಂದಿದೆ. ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನು  ಬದುಕಿನಲ್ಲಿ ಅಳವಡಿಸಿಕೊಂಡರೆ ಮಹಾತ್ಮ ಗಾಂಧೀಜಿ ಅವರ ಕನಸು ನನಸಾಗುತ್ತದೆ ಎಂದರು.

ಸಮಾರಂಭದಲ್ಲಿ ಆಡಳಿತಾಧಿಕಾರಿ ಟಿ.ಎಂ.ಕರಗಯ್ಯ, ಪಿಕೆಬಿ ಪದವಿ ಪೂರ್ವ ಕಾಲೇಜಿನ‌ ಪ್ರಾಂಶುಪಾಲ ಎಂ.ಆನಂದ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಎ.ಆರ್.ಗಂಗಾಧರೇಶ್ವರ, ಶಿಬಿರಾಧಿಕಾರಿ ಕೆ.ಆರ್.ಪ್ರಸನ್ನಕುಮಾರ್, ಮಜರಾ ಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ, ಉಪಾಧ್ಯಕ್ಷೆ ಮೀನಾ,  ಸದಸ್ಯರುಗಳಾದ ವಿಮಲಪಿಳ್ಳಾಂಜಪ್ಪ, ವಿ.ಎಂ.ವಿಜಯಕುಮಾರ್, ಲೀಲಮ್ಮ ಪಿಳ್ಳೇಗೌಡ, ವಿ.ಎಂ.ಶಿವಕುಮಾರ್,  ವೀರಾಪುರ ಗ್ರಾಮದ  ಮುಖಂಡರುಗಳಾದ ಪಿ.ಮುನಿಯಪ್ಪ, ಲಕ್ಷ್ಮೀನಾರಾಯಣ್, ಪಿಳ್ಳೇಗೌಡ, ಬಸವರಾಜು, ಹನುಮಂತಪ್ಪ,  ಮುನೇಗೌಡ, ಗಂಗಸಿದ್ದಪ್ಪ, ಸತ್ಯನಾರಾಯಣ್, ಪಿಕೆಬಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು, ಬೋಧಕೇತರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

8 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

9 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

12 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

12 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

17 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

21 hours ago