ವೀರಾಪುರ ಗ್ರಾಮದಲ್ಲಿ ಎನ್.ಎಸ್.ಎಸ್ ವಿಶೇಷ ಶಿಬಿರ: ಶಿಸ್ತುಬದ್ಧ ಜೀವನ ಶೈಲಿ‌ ವಿದ್ಯಾರ್ಥಿಗಳಿಗೆ ಬಹುಮುಖ್ಯ-ವಿಜಯ ಮಾರಹನುಮಯ್ಯ

ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಆಗುತ್ತವೆ ಎಂದು ಡಾ.ಅಂಬೇಡ್ಕರ್ ವಿದ್ಯಾಕೇಂದ್ರದ ಅಧ್ಯಕ್ಷೆ ವಿಜಯ ಮಾರಹನುಮಯ್ಯ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ವೀರಾಪುರ ಗ್ರಾಮದಲ್ಲಿ  ಮಾರಸಂದ್ರ ಪಿಕೆಬಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಸ್ತುಬದ್ದ ಜೀವನ ಶೈಲಿ‌ ವಿದ್ಯಾರ್ಥಿಗಳಿಗೆ ಬಹುಮುಖ್ಯ.   ದುರಾಭ್ಯಾಸಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತವೆ. ವಿದ್ಯಾರ್ಥಿಗಳು ಪಠ್ಯ ವಿಷಯಗಳಿಗೆ ಮಾತ್ರ ಸೀಮಿತ ಆಗಬಾರದು. ಪಠ್ಯೇತರ ಚಟುವಟಿಕೆಗಳಲ್ಲಿ  ತಮ್ಮ ಆಸಕ್ತಿಯನ್ನು ಹೊಂದಬೇಕು. ಗ್ತಾಮೀಣ ಪ್ರದೇಶದ  ಸಮಕಾಲೀನ ಸಾಮಾಜಿಕ ಮತ್ತು ಸಾಂಸ್ಕೃತಿಕ  ಪರಿಸ್ಥಿತಿಯನ್ನು ಅರಿಯಲು ವಿಶೇಷ ಶಿಬಿರಗಳಿಂದ ಅನುಕೂಲವಾಗುತ್ತದೆ ಎಂದರು.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ಸಾದಿಕ್ ಪಾಷ ಮಾತನಾಡಿ, ನಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛತೆಯಲ್ಲಿ ಇರುವಂತೆ ಮಾಡುವುದು  ಎಲ್ಲಾ ನಾಗರಿಕರ ಜವಾಬ್ದಾರಿ. ಶುಚಿತ್ವದಿಂದ ಆರೋಗ್ಯ ವೃದ್ದಿಸುತ್ತದೆ. ಸ್ವಚ್ಛತೆಯ ಮಹತ್ವ ಕುರಿತು ಜನಜಾಗೃತಿ ಹೆಚ್ಚಿನ‌ ಪ್ರಮಾಣದಲ್ಲಿ ಆಗಬೇಕಾಗಿದೆ. ವಿಶೇಷ ಸೇವಾ ಶಿಬಿಗಳಲ್ಲಿ ಭಾಗವಹಿಸಿದ್ದ. ಹಲವಾರು ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಜೀವನ ಶೈಲಿ ಬದಲಿಸಿಕೊಂಡಿದ್ದಾರೆ ಎಂದರು.

ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರೇವತಿ ಮಾತನಾಡಿ, ವಿದ್ಯಾರ್ಥಿ ಜೀವನದ ಹಂತದಲ್ಲಿಯೇ ಯುವಜನತೆಯು ವಿದ್ಯೆ, ಜ್ಞಾನ ಮತ್ತು ಕೌಶಲ್ಯದ ಮಹತ್ವವನ್ನು ಸಕಾಲದಲ್ಲಿ ಅರ್ಥ ಮಾಡಿಕೊಳ್ಳಬೇಕು.‌ ನಮ್ಮ ಸುತ್ತಲಿನ ಸಮಾಜದ ಒಳಿತಿಗಾಗಿ  ಬದುಕನ್ನು ಸಾರ್ಥಕಗೊಳಿಸಬೇಕು. ಮಹಾತ್ಮ ಗಾಂಧೀಜಿಯವರ ತತ್ತ್ವ ಮತ್ತು ಆದರ್ಶ ಚಿಂತನೆಗಳ‌ ಆಶಯದಂತೆ ರಾಷ್ಟ್ರೀಯ ಸೇವಾ ಯೋಜನೆ ಅಸ್ತಿತ್ವಕ್ಕೆ ಬಂದಿದೆ. ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನು  ಬದುಕಿನಲ್ಲಿ ಅಳವಡಿಸಿಕೊಂಡರೆ ಮಹಾತ್ಮ ಗಾಂಧೀಜಿ ಅವರ ಕನಸು ನನಸಾಗುತ್ತದೆ ಎಂದರು.

ಸಮಾರಂಭದಲ್ಲಿ ಆಡಳಿತಾಧಿಕಾರಿ ಟಿ.ಎಂ.ಕರಗಯ್ಯ, ಪಿಕೆಬಿ ಪದವಿ ಪೂರ್ವ ಕಾಲೇಜಿನ‌ ಪ್ರಾಂಶುಪಾಲ ಎಂ.ಆನಂದ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಎ.ಆರ್.ಗಂಗಾಧರೇಶ್ವರ, ಶಿಬಿರಾಧಿಕಾರಿ ಕೆ.ಆರ್.ಪ್ರಸನ್ನಕುಮಾರ್, ಮಜರಾ ಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ, ಉಪಾಧ್ಯಕ್ಷೆ ಮೀನಾ,  ಸದಸ್ಯರುಗಳಾದ ವಿಮಲಪಿಳ್ಳಾಂಜಪ್ಪ, ವಿ.ಎಂ.ವಿಜಯಕುಮಾರ್, ಲೀಲಮ್ಮ ಪಿಳ್ಳೇಗೌಡ, ವಿ.ಎಂ.ಶಿವಕುಮಾರ್,  ವೀರಾಪುರ ಗ್ರಾಮದ  ಮುಖಂಡರುಗಳಾದ ಪಿ.ಮುನಿಯಪ್ಪ, ಲಕ್ಷ್ಮೀನಾರಾಯಣ್, ಪಿಳ್ಳೇಗೌಡ, ಬಸವರಾಜು, ಹನುಮಂತಪ್ಪ,  ಮುನೇಗೌಡ, ಗಂಗಸಿದ್ದಪ್ಪ, ಸತ್ಯನಾರಾಯಣ್, ಪಿಕೆಬಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು, ಬೋಧಕೇತರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

2 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

4 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

5 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

10 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

11 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

18 hours ago