‘ವೀರ ಸಾವರ್ಕರ್’ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ NSUI ಕಾರ್ಯಕರ್ತರು: ಘಟನೆ ಖಂಡಿಸಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಪ್ರತಿಭಟನೆ

‘ವೀರ ಸಾವರ್ಕರ್’ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ NSUI ಕಾರ್ಯಕರ್ತರು: ಘಟನೆ ಖಂಡಿಸಿ ಶಾಸಕ ಎಸ್.ಆರ್.ವಿಶ್ವನಾಥ್ ಪ್ರತಿಭಟನೆ

ಯಲಹಂಕ ಉಪನಗರದಲ್ಲಿರುವ ವೀರ ಸಾವರ್ಕರ್ ಮೇಲ್ಸೇತುವೆಗೆ NSUI ಕಾರ್ಯಕರ್ತರು ಮಸಿ ಬಳಿದಿರುವ ಪ್ರಕರಣ ನಡೆದಿದೆ.

ಇಂದು ಬೆಳಗ್ಗೆ ಟ್ರಾಫಿಕ್ ಬ್ಲಾಕ್ ಮಾಡಿ ಮೇಲ್ಸೇತುವೆ ನೇಮ್ ಬೋರ್ಡ್ ಗೆ ಮಸಿ ಬಳಿಯಲಾಗಿದೆ. ವೀರ ಸಾವರ್ಕರ್ ಹೆಸರಿಗೆ ಮಸಿ ಬಳಿದು ಭಗತ್ ಸಿಂಗ್ ಹೆಸರಿಡಲು NSUI ಕಾರ್ಯಕರ್ತರು ಬೇಡಿಕೆಯನ್ನು ಇಟ್ಟಿದ್ದಾರೆ.

ವೀರ ಸಾವರ್ಕರ್ ಮೇಲ್ಸೇತುವೆಗೆ ಮಸಿ ಬಳಿದಿರುವುದನ್ನು ಖಂಡಿಸಿ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಬಿಜೆಪಿ ಕಾರ್ಯಕರ್ತರು, ಭಜರಂಗದಳ ಮುಖಂಡರು ಯಲಹಂಕ ಉಪನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಯಿತು.

ವೀರ ಸಾವರ್ಕರ್ ಇತಿಹಾಸವನ್ನು ಕಾಂಗ್ರೆಸ್ ನವರು ತಿಳಿದುಕೊಳ್ಳಲಿ. ಕಾಂಗ್ರೆಸ್ ನಾಯಕರ ಫೋಟೋಗಳು ಯಲಹಂಕದಲ್ಲಿವೆ. ನಾವು ಯಾವುದೇ ಆ ಫೋಟೋಗಳಿಗೆ ಮಸಿ ಬಳಿದಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಮಸಿ ಬಳಿದವರಲ್ಲಿ ಮೂರು ಜನರನ್ನ ಬಂಧನ ಮಾಡಲಾಗಿದೆ. ಉಳಿದವರನ್ನು ಶೀಘ್ರವಾಗಿ ಬಂಧನ ಮಾಡಬೇಕು‌ ಇಲ್ಲದೇ ಹೋದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ. ಸ್ವಯಂ ಪ್ರೇರಿತವಾಗಿ ಯಲಹಂಕ ಬಂದ್ ಕೂಡ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

ಶೀಘ್ರವಾಗಿ ಹೆಸರು ಸರಿಪಡಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಶಾಸಕ ಎಸ್.ಆರ್.ವಿಶ್ವನಾಥ್ ಅವರು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸ್ಥಳಕ್ಕೆ ಬಿಬಿಎಂಪಿ‌ ಸಿಬ್ಬಂದಿ ದೌಡಾಯಿಸಿ, ಮಸಿ ತೆರವುಗೊಳಿಸಿ ಹೆಸರು ಸರಿಪಡಿಸಿದರು.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

4 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

4 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

8 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

10 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

13 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

17 hours ago