‘ವೀರ ಸಾವರ್ಕರ್’ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ NSUI ಕಾರ್ಯಕರ್ತರು: ಘಟನೆ ಖಂಡಿಸಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಪ್ರತಿಭಟನೆ

‘ವೀರ ಸಾವರ್ಕರ್’ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ NSUI ಕಾರ್ಯಕರ್ತರು: ಘಟನೆ ಖಂಡಿಸಿ ಶಾಸಕ ಎಸ್.ಆರ್.ವಿಶ್ವನಾಥ್ ಪ್ರತಿಭಟನೆ

ಯಲಹಂಕ ಉಪನಗರದಲ್ಲಿರುವ ವೀರ ಸಾವರ್ಕರ್ ಮೇಲ್ಸೇತುವೆಗೆ NSUI ಕಾರ್ಯಕರ್ತರು ಮಸಿ ಬಳಿದಿರುವ ಪ್ರಕರಣ ನಡೆದಿದೆ.

ಇಂದು ಬೆಳಗ್ಗೆ ಟ್ರಾಫಿಕ್ ಬ್ಲಾಕ್ ಮಾಡಿ ಮೇಲ್ಸೇತುವೆ ನೇಮ್ ಬೋರ್ಡ್ ಗೆ ಮಸಿ ಬಳಿಯಲಾಗಿದೆ. ವೀರ ಸಾವರ್ಕರ್ ಹೆಸರಿಗೆ ಮಸಿ ಬಳಿದು ಭಗತ್ ಸಿಂಗ್ ಹೆಸರಿಡಲು NSUI ಕಾರ್ಯಕರ್ತರು ಬೇಡಿಕೆಯನ್ನು ಇಟ್ಟಿದ್ದಾರೆ.

ವೀರ ಸಾವರ್ಕರ್ ಮೇಲ್ಸೇತುವೆಗೆ ಮಸಿ ಬಳಿದಿರುವುದನ್ನು ಖಂಡಿಸಿ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಬಿಜೆಪಿ ಕಾರ್ಯಕರ್ತರು, ಭಜರಂಗದಳ ಮುಖಂಡರು ಯಲಹಂಕ ಉಪನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಯಿತು.

ವೀರ ಸಾವರ್ಕರ್ ಇತಿಹಾಸವನ್ನು ಕಾಂಗ್ರೆಸ್ ನವರು ತಿಳಿದುಕೊಳ್ಳಲಿ. ಕಾಂಗ್ರೆಸ್ ನಾಯಕರ ಫೋಟೋಗಳು ಯಲಹಂಕದಲ್ಲಿವೆ. ನಾವು ಯಾವುದೇ ಆ ಫೋಟೋಗಳಿಗೆ ಮಸಿ ಬಳಿದಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಮಸಿ ಬಳಿದವರಲ್ಲಿ ಮೂರು ಜನರನ್ನ ಬಂಧನ ಮಾಡಲಾಗಿದೆ. ಉಳಿದವರನ್ನು ಶೀಘ್ರವಾಗಿ ಬಂಧನ ಮಾಡಬೇಕು‌ ಇಲ್ಲದೇ ಹೋದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ. ಸ್ವಯಂ ಪ್ರೇರಿತವಾಗಿ ಯಲಹಂಕ ಬಂದ್ ಕೂಡ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

ಶೀಘ್ರವಾಗಿ ಹೆಸರು ಸರಿಪಡಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಶಾಸಕ ಎಸ್.ಆರ್.ವಿಶ್ವನಾಥ್ ಅವರು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸ್ಥಳಕ್ಕೆ ಬಿಬಿಎಂಪಿ‌ ಸಿಬ್ಬಂದಿ ದೌಡಾಯಿಸಿ, ಮಸಿ ತೆರವುಗೊಳಿಸಿ ಹೆಸರು ಸರಿಪಡಿಸಿದರು.

Ramesh Babu

Journalist

Recent Posts

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 hour ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

1 hour ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

9 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago