‘ವೀರ ಸಾವರ್ಕರ್’ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ NSUI ಕಾರ್ಯಕರ್ತರು: ಘಟನೆ ಖಂಡಿಸಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಪ್ರತಿಭಟನೆ

‘ವೀರ ಸಾವರ್ಕರ್’ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ NSUI ಕಾರ್ಯಕರ್ತರು: ಘಟನೆ ಖಂಡಿಸಿ ಶಾಸಕ ಎಸ್.ಆರ್.ವಿಶ್ವನಾಥ್ ಪ್ರತಿಭಟನೆ

ಯಲಹಂಕ ಉಪನಗರದಲ್ಲಿರುವ ವೀರ ಸಾವರ್ಕರ್ ಮೇಲ್ಸೇತುವೆಗೆ NSUI ಕಾರ್ಯಕರ್ತರು ಮಸಿ ಬಳಿದಿರುವ ಪ್ರಕರಣ ನಡೆದಿದೆ.

ಇಂದು ಬೆಳಗ್ಗೆ ಟ್ರಾಫಿಕ್ ಬ್ಲಾಕ್ ಮಾಡಿ ಮೇಲ್ಸೇತುವೆ ನೇಮ್ ಬೋರ್ಡ್ ಗೆ ಮಸಿ ಬಳಿಯಲಾಗಿದೆ. ವೀರ ಸಾವರ್ಕರ್ ಹೆಸರಿಗೆ ಮಸಿ ಬಳಿದು ಭಗತ್ ಸಿಂಗ್ ಹೆಸರಿಡಲು NSUI ಕಾರ್ಯಕರ್ತರು ಬೇಡಿಕೆಯನ್ನು ಇಟ್ಟಿದ್ದಾರೆ.

ವೀರ ಸಾವರ್ಕರ್ ಮೇಲ್ಸೇತುವೆಗೆ ಮಸಿ ಬಳಿದಿರುವುದನ್ನು ಖಂಡಿಸಿ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಬಿಜೆಪಿ ಕಾರ್ಯಕರ್ತರು, ಭಜರಂಗದಳ ಮುಖಂಡರು ಯಲಹಂಕ ಉಪನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಯಿತು.

ವೀರ ಸಾವರ್ಕರ್ ಇತಿಹಾಸವನ್ನು ಕಾಂಗ್ರೆಸ್ ನವರು ತಿಳಿದುಕೊಳ್ಳಲಿ. ಕಾಂಗ್ರೆಸ್ ನಾಯಕರ ಫೋಟೋಗಳು ಯಲಹಂಕದಲ್ಲಿವೆ. ನಾವು ಯಾವುದೇ ಆ ಫೋಟೋಗಳಿಗೆ ಮಸಿ ಬಳಿದಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಮಸಿ ಬಳಿದವರಲ್ಲಿ ಮೂರು ಜನರನ್ನ ಬಂಧನ ಮಾಡಲಾಗಿದೆ. ಉಳಿದವರನ್ನು ಶೀಘ್ರವಾಗಿ ಬಂಧನ ಮಾಡಬೇಕು‌ ಇಲ್ಲದೇ ಹೋದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ. ಸ್ವಯಂ ಪ್ರೇರಿತವಾಗಿ ಯಲಹಂಕ ಬಂದ್ ಕೂಡ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

ಶೀಘ್ರವಾಗಿ ಹೆಸರು ಸರಿಪಡಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಶಾಸಕ ಎಸ್.ಆರ್.ವಿಶ್ವನಾಥ್ ಅವರು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸ್ಥಳಕ್ಕೆ ಬಿಬಿಎಂಪಿ‌ ಸಿಬ್ಬಂದಿ ದೌಡಾಯಿಸಿ, ಮಸಿ ತೆರವುಗೊಳಿಸಿ ಹೆಸರು ಸರಿಪಡಿಸಿದರು.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

3 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

6 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

8 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

19 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

20 hours ago