‘ವೀರ ಸಾವರ್ಕರ್’ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ NSUI ಕಾರ್ಯಕರ್ತರು: ಘಟನೆ ಖಂಡಿಸಿ ಶಾಸಕ ಎಸ್.ಆರ್.ವಿಶ್ವನಾಥ್ ಪ್ರತಿಭಟನೆ
ಯಲಹಂಕ ಉಪನಗರದಲ್ಲಿರುವ ವೀರ ಸಾವರ್ಕರ್ ಮೇಲ್ಸೇತುವೆಗೆ NSUI ಕಾರ್ಯಕರ್ತರು ಮಸಿ ಬಳಿದಿರುವ ಪ್ರಕರಣ ನಡೆದಿದೆ.
ಇಂದು ಬೆಳಗ್ಗೆ ಟ್ರಾಫಿಕ್ ಬ್ಲಾಕ್ ಮಾಡಿ ಮೇಲ್ಸೇತುವೆ ನೇಮ್ ಬೋರ್ಡ್ ಗೆ ಮಸಿ ಬಳಿಯಲಾಗಿದೆ. ವೀರ ಸಾವರ್ಕರ್ ಹೆಸರಿಗೆ ಮಸಿ ಬಳಿದು ಭಗತ್ ಸಿಂಗ್ ಹೆಸರಿಡಲು NSUI ಕಾರ್ಯಕರ್ತರು ಬೇಡಿಕೆಯನ್ನು ಇಟ್ಟಿದ್ದಾರೆ.
ವೀರ ಸಾವರ್ಕರ್ ಮೇಲ್ಸೇತುವೆಗೆ ಮಸಿ ಬಳಿದಿರುವುದನ್ನು ಖಂಡಿಸಿ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಬಿಜೆಪಿ ಕಾರ್ಯಕರ್ತರು, ಭಜರಂಗದಳ ಮುಖಂಡರು ಯಲಹಂಕ ಉಪನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಯಿತು.
ಮಸಿ ಬಳಿದವರಲ್ಲಿ ಮೂರು ಜನರನ್ನ ಬಂಧನ ಮಾಡಲಾಗಿದೆ. ಉಳಿದವರನ್ನು ಶೀಘ್ರವಾಗಿ ಬಂಧನ ಮಾಡಬೇಕು ಇಲ್ಲದೇ ಹೋದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ. ಸ್ವಯಂ ಪ್ರೇರಿತವಾಗಿ ಯಲಹಂಕ ಬಂದ್ ಕೂಡ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ಶೀಘ್ರವಾಗಿ ಹೆಸರು ಸರಿಪಡಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…