‘ವೀರ ಸಾವರ್ಕರ್’ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ NSUI ಕಾರ್ಯಕರ್ತರು: ಘಟನೆ ಖಂಡಿಸಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಪ್ರತಿಭಟನೆ

‘ವೀರ ಸಾವರ್ಕರ್’ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ NSUI ಕಾರ್ಯಕರ್ತರು: ಘಟನೆ ಖಂಡಿಸಿ ಶಾಸಕ ಎಸ್.ಆರ್.ವಿಶ್ವನಾಥ್ ಪ್ರತಿಭಟನೆ

ಯಲಹಂಕ ಉಪನಗರದಲ್ಲಿರುವ ವೀರ ಸಾವರ್ಕರ್ ಮೇಲ್ಸೇತುವೆಗೆ NSUI ಕಾರ್ಯಕರ್ತರು ಮಸಿ ಬಳಿದಿರುವ ಪ್ರಕರಣ ನಡೆದಿದೆ.

ಇಂದು ಬೆಳಗ್ಗೆ ಟ್ರಾಫಿಕ್ ಬ್ಲಾಕ್ ಮಾಡಿ ಮೇಲ್ಸೇತುವೆ ನೇಮ್ ಬೋರ್ಡ್ ಗೆ ಮಸಿ ಬಳಿಯಲಾಗಿದೆ. ವೀರ ಸಾವರ್ಕರ್ ಹೆಸರಿಗೆ ಮಸಿ ಬಳಿದು ಭಗತ್ ಸಿಂಗ್ ಹೆಸರಿಡಲು NSUI ಕಾರ್ಯಕರ್ತರು ಬೇಡಿಕೆಯನ್ನು ಇಟ್ಟಿದ್ದಾರೆ.

ವೀರ ಸಾವರ್ಕರ್ ಮೇಲ್ಸೇತುವೆಗೆ ಮಸಿ ಬಳಿದಿರುವುದನ್ನು ಖಂಡಿಸಿ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಬಿಜೆಪಿ ಕಾರ್ಯಕರ್ತರು, ಭಜರಂಗದಳ ಮುಖಂಡರು ಯಲಹಂಕ ಉಪನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಯಿತು.

ವೀರ ಸಾವರ್ಕರ್ ಇತಿಹಾಸವನ್ನು ಕಾಂಗ್ರೆಸ್ ನವರು ತಿಳಿದುಕೊಳ್ಳಲಿ. ಕಾಂಗ್ರೆಸ್ ನಾಯಕರ ಫೋಟೋಗಳು ಯಲಹಂಕದಲ್ಲಿವೆ. ನಾವು ಯಾವುದೇ ಆ ಫೋಟೋಗಳಿಗೆ ಮಸಿ ಬಳಿದಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಮಸಿ ಬಳಿದವರಲ್ಲಿ ಮೂರು ಜನರನ್ನ ಬಂಧನ ಮಾಡಲಾಗಿದೆ. ಉಳಿದವರನ್ನು ಶೀಘ್ರವಾಗಿ ಬಂಧನ ಮಾಡಬೇಕು‌ ಇಲ್ಲದೇ ಹೋದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ. ಸ್ವಯಂ ಪ್ರೇರಿತವಾಗಿ ಯಲಹಂಕ ಬಂದ್ ಕೂಡ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

ಶೀಘ್ರವಾಗಿ ಹೆಸರು ಸರಿಪಡಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಶಾಸಕ ಎಸ್.ಆರ್.ವಿಶ್ವನಾಥ್ ಅವರು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸ್ಥಳಕ್ಕೆ ಬಿಬಿಎಂಪಿ‌ ಸಿಬ್ಬಂದಿ ದೌಡಾಯಿಸಿ, ಮಸಿ ತೆರವುಗೊಳಿಸಿ ಹೆಸರು ಸರಿಪಡಿಸಿದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

8 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

10 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

15 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

17 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

20 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago