‘ವೀರ ಸಾವರ್ಕರ್’ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ NSUI ಕಾರ್ಯಕರ್ತರು: ಘಟನೆ ಖಂಡಿಸಿ ಶಾಸಕ ಎಸ್.ಆರ್.ವಿಶ್ವನಾಥ್ ಪ್ರತಿಭಟನೆ
ಯಲಹಂಕ ಉಪನಗರದಲ್ಲಿರುವ ವೀರ ಸಾವರ್ಕರ್ ಮೇಲ್ಸೇತುವೆಗೆ NSUI ಕಾರ್ಯಕರ್ತರು ಮಸಿ ಬಳಿದಿರುವ ಪ್ರಕರಣ ನಡೆದಿದೆ.
ಇಂದು ಬೆಳಗ್ಗೆ ಟ್ರಾಫಿಕ್ ಬ್ಲಾಕ್ ಮಾಡಿ ಮೇಲ್ಸೇತುವೆ ನೇಮ್ ಬೋರ್ಡ್ ಗೆ ಮಸಿ ಬಳಿಯಲಾಗಿದೆ. ವೀರ ಸಾವರ್ಕರ್ ಹೆಸರಿಗೆ ಮಸಿ ಬಳಿದು ಭಗತ್ ಸಿಂಗ್ ಹೆಸರಿಡಲು NSUI ಕಾರ್ಯಕರ್ತರು ಬೇಡಿಕೆಯನ್ನು ಇಟ್ಟಿದ್ದಾರೆ.
ವೀರ ಸಾವರ್ಕರ್ ಮೇಲ್ಸೇತುವೆಗೆ ಮಸಿ ಬಳಿದಿರುವುದನ್ನು ಖಂಡಿಸಿ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಬಿಜೆಪಿ ಕಾರ್ಯಕರ್ತರು, ಭಜರಂಗದಳ ಮುಖಂಡರು ಯಲಹಂಕ ಉಪನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಯಿತು.
ಮಸಿ ಬಳಿದವರಲ್ಲಿ ಮೂರು ಜನರನ್ನ ಬಂಧನ ಮಾಡಲಾಗಿದೆ. ಉಳಿದವರನ್ನು ಶೀಘ್ರವಾಗಿ ಬಂಧನ ಮಾಡಬೇಕು ಇಲ್ಲದೇ ಹೋದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ. ಸ್ವಯಂ ಪ್ರೇರಿತವಾಗಿ ಯಲಹಂಕ ಬಂದ್ ಕೂಡ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ಶೀಘ್ರವಾಗಿ ಹೆಸರು ಸರಿಪಡಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…