Categories: ಲೇಖನಗಳು

ವೃತ್ತಿ ನಿರತರ ವೃತ್ತಿ ಧರ್ಮ…… ಮಾನವೀಯ ಮೌಲ್ಯಗಳ ಉಳಿವಿಗಾಗಿ ಪ್ರಯತ್ನಿಸೋಣ..

ಪತ್ರಕರ್ತರು

ಕೇವಲ ನಿರೂಪಕರಲ್ಲ-ಮನರಂಜನೆ ನೀಡುವವರಲ್ಲ-ಜನರನ್ನು ಆಕರ್ಷಿಸುವವರಲ್ಲ – ವ್ಯಾಪಾರಿಗಳಲ್ಲ – ಜನಪ್ರಿಯತೆಯ ಹಿಂದೆ ಹೋಗುವವರಲ್ಲ- ಜನರನ್ನು ಮೆಚ್ಚಿಸುವವರು ಮಾತ್ರವಲ್ಲ…….

ಜೊತೆಗೆ ಮುಖ್ಯವಾಗಿ,

ವಿವೇಚನೆಯಿಂದ ಪರಿಶೀಲಿಸಿ ಎಷ್ಟೇ ಕಷ್ಟವಾದರೂ ಸತ್ಯವನ್ನು ಧೈರ್ಯವಾಗಿ ಹೇಳುವವರು.

ಪೊಲೀಸರು

ಕೇವಲ ಭಯ ಪಡಿಸುವವರಲ್ಲ – ಹೊಡೆಯುವವರಲ್ಲ – ಕೊಲ್ಲುವವರಲ್ಲ – ಬಂಧಿಸುವವರಲ್ಲ – ನಿಯಂತ್ರಿಸಿವವರಲ್ಲ-ಎಚ್ಚರಿಸುವವರಲ್ಲ – ರಕ್ಷಿಸುವವರು ಮಾತ್ರವಲ್ಲ…..

ಜೊತೆಗೆ ಮುಖ್ಯವಾಗಿ,

ನ್ಯಾಯವನ್ನು – ಸತ್ಯವನ್ನು – ಕಾನೂನನ್ನು ಅವಶ್ಯವಿರುವ ಜನರಿಗೆ ನಿಷ್ಪಕ್ಷಪಾತವಾಗಿ ತಲುಪಿಸುವವರು.

ವಕೀಲರು

ಕೇವಲ ವೃತ್ತಿಪರರಲ್ಲ – ಹೊಟ್ಟೆ ಪಾಡಿನ ಕೆಲಸದವರಲ್ಲ – ಕಾನೂನು ಅರ್ಥೈಸುವವರಲ್ಲ – ಕಕ್ಷಿದಾರರ ಹಿತಾಸಕ್ತಿ ಕಾಪಾಡುವವರಲ್ಲ – ಚಾಣಾಕ್ಷತನದಿಂದ ವಾದ ಮಾಡುವವರು ಮಾತ್ರವಲ್ಲ….

ಜೊತೆಗೆ ಮುಖ್ಯವಾಗಿ,

ಶೋಷಿತರಿಗೆ – ಧಮನಿತರಿಗೆ – ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಕೊಡಿಸುವವರು.

ಬರಹಗಾರರು

ಕೇವಲ ಅಕ್ಷರಗಳನ್ನು ಜೋಡಿಸುವವರಲ್ಲ – ಪದ ಲಾಲಿತ್ಯ ಹೊರಡಿಸುವವರಲ್ಲ – ವಾಕ್ಯಗಳ ಆಕರ್ಷಕ ನಿರೂಪಣೆ ಮಾಡುವವರಲ್ಲ – ಭಾವನೆಗಳನ್ನು ವ್ಯಕ್ತಪಡಿಸುವವರಲ್ಲ – ಪುಸ್ತಕ ಪ್ರಕಟಿಸುವವರಲ್ಲ – ಪ್ರಶಸ್ತಿ ಪಡೆಯುವವರಲ್ಲ – ಅಧ್ಯಕ್ಷತೆ ವಹಿಸುವವರು ಮಾತ್ರವಲ್ಲ …

ಜೊತೆಗೆ ಮುಖ್ಯವಾಗಿ,

ಸತ್ಯದ ಹುಡುಕಾಟಗಾರರು ಮತ್ತು ನಿರ್ಭಯವಾಗಿ ಅದನ್ನು ದಾಖಲಿಸುವವರು.

ವೈದ್ಯರು

ಕೇವಲ ರೋಗ ಗುಣಪಡಿಸುವವರಲ್ಲ – ವೃತ್ತಿಪರರಲ್ಲ – ಆರೋಗ್ಯದ ಮಾಹಿತಿ ನೀಡುವವರಲ್ಲ –

ಅತಿಮಾನುಷರಲ್ಲ – ಜೀವ ನೀಡುವವರು ಉಳಿಸುವವರು ಮಾತ್ರವಲ್ಲ….

ಜೊತೆಗೆ ಮುಖ್ಯವಾಗಿ,

ಜನರಲ್ಲಿ ಬದುಕಿನ ಆತ್ಮವಿಶ್ವಾಸ ಮೂಡಿಸುವವರು.

ಶಿಕ್ಷಕರು

ಕೇವಲ ಅಕ್ಷರ ಕಲಿಸುವವರಲ್ಲ – ಪಾಠ ಮಾಡುವವರಲ್ಲ – ಬುದ್ದಿವಾದ ಹೇಳುವವರಲ್ಲ – ಪದವಿ ನೀಡುವವರಲ್ಲ – ಉದ್ಯೋಗ ಕೊಡಿಸುವವರು ಮಾತ್ರವಲ್ಲ…..

ಜೊತೆಗೆ ಮುಖ್ಯವಾಗಿ,

ಬದುಕಲು ಕಲಿಸುವವರು, ಯೋಚಿಸಲು ಪ್ರೇರೇಪಿಸುವವರು.

ರಾಜಕಾರಣಿಗಳು

ಕೇವಲ ರಸ್ತೆ ಮಾಡಿಸುವವರಲ್ಲ – ವಿದ್ಯುತ್ ಹರಿಸುವವರಲ್ಲ – ಕಾನೂನು ಮಾಡುವವರಲ್ಲ – ಆಡಳಿತ ನಡೆಸುವವರಲ್ಲ -ರಕ್ಷಣೆ ಮಾಡುವವರು ಮಾತ್ರವಲ್ಲ…..

ಜೊತೆಗೆ ಮುಖ್ಯವಾಗಿ,

ಜನರ ಜೀವನಮಟ್ಟ ಸುಧಾರಿಸುವವರು.

ಧರ್ಮದ ಪೀಠಾಧಿಪತಿಗಳು

ಕೇವಲ ಭೋದನೆ ಮಾಡುವವರಲ್ಲ – ಉಪನ್ಯಾಸ ನೀಡುವವರಲ್ಲ – ಆಶ್ರಯ ಅನ್ನ ಶಿಕ್ಷಣ ನೀಡುವವರಲ್ಲ – ಧರ್ಮ ಪ್ರಚಾರಕರಲ್ಲ – ಭಕ್ತಿ ಭಾವ ಮೂಡಿಸುವವರು ಮಾತ್ರವಲ್ಲ…..

ಜೊತೆಗೆ ಮುಖ್ಯವಾಗಿ,

ಜ್ಞಾನದ ಬಲದಿಂದ ಜನರ ನೋವು ಸಂಕಷ್ಟ ಕಡಿಮೆ ಮಾಡುವವರು.

ಕಲಾವಿದರು

ಕೇವಲ ಮನರಂಜನೆ ನೀಡುವವರಲ್ಲ – ಭಾವಾತಿರೇಕಗಳನ್ನು ವ್ಯಕ್ತಪಡಿಸುವವರಲ್ಲ – ಜನರನ್ನು ಭ್ರಮಾಲೋಕಕ್ಕೆ ಒಯ್ಯುವವರಲ್ಲ – ಜನಪ್ರಿಯತೆ ಗಳಿಸುವವರಲ್ಲ – ದುಡ್ಡು ಮಾಡುವವರು ಮಾತ್ರವಲ್ಲ…..

ಜೊತೆಗೆ ಮುಖ್ಯವಾಗಿ,

ಜವಾಬ್ದಾರಿಯಿಂದ ಜನರನ್ನು ಒಳ್ಳೆಯ ನಡತೆ ಅಳವಡಿಸಿಕೊಳ್ಳಲು, ಜೀವನೋತ್ಸಾಹ ಹೆಚ್ಚಿಸಿಕೊಳ್ಳಲು ಪ್ರೇರೇಪಿಸುವವರು.

ಇನ್ನೂ ಮುಂತಾದ ಸೇವಾ ವಲಯಗಳಲ್ಲಿ ಈ ರೀತಿಯ ಮೌಲ್ಯಗಳು ಪುನರ್ ಸ್ಥಾಪನೆಯಾಗಬೇಕಾದ ಅವಶ್ಯಕತೆ ಮತ್ತು ಅನಿವಾರ್ಯತೆ ಈಗ ತುರ್ತಾಗಿ ಆಗಬೇಕಿದೆ.

ಇದನ್ನು ಹೊರತುಪಡಿಸಿ ಬೆವರು ಸುರಿಸುವ ರಕ್ತ ಬಸಿಯುವ ಅನೇಕ ಶ್ರಮಜೀವಿಗಳು ನಮ್ಮ ನಡುವೆ ಇದ್ದಾರೆ. ಆದರೆ ಅವರಲ್ಲಿ ಬಹುತೇಕರಿಗೆ ಆಯ್ಕೆಯ ಸ್ವಾತಂತ್ರ್ಯವೇ ಇಲ್ಲ. ಹೊಟ್ಟೆ ಪಾಡಿನ ಕೌಟುಂಬಿಕ ನಿರ್ವಹಣೆಯ ಮೂಲಭೂತ ಅವಶ್ಯಕತೆಗಳಿಗೇ ಕೊರತೆ ಇರುವಾಗ ಸದ್ಯದ ಪರಿಸ್ಥಿತಿಯಲ್ಲಿ ಅವರಲ್ಲಿ ಆದರ್ಶಗಳನ್ನು ಹುಡುಕುವುದು ತುಂಬಾ ಕಷ್ಟ.

ಸಾಮಾನ್ಯರಾದ ನಾವು ಮಾನವೀಯ ಮೌಲ್ಯಗಳ ಉಳಿವಿಗಾಗಿ ಸಾಧ್ಯವಾದಷ್ಟು ಈಗಿನಿಂದಲೇ ಪ್ರಯತ್ನಿಸೋಣ.

ಇದು ಸಾಧ್ಯವಿಲ್ಲ. ಈ ಸಮಾಜ ಸರಿಪಡಿಸಲಾಗದಷ್ಟು ಕೆಟ್ಟು ಹೋಗಿದೆ ಎಂಬ ಸಿನಿಕತನ ಬೇಡ. ಒಳ್ಳೆಯದಾಗಲಿ….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ, ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ – ಮನೆಗಳಲ್ಲಿ – ಮಾತುಗಳಲ್ಲಿ – ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

7 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

11 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

20 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago