ವೃತ್ತಿ ಪ್ರೋತ್ಸಾಹ ಯೋಜನೆಯಡಿ ಸಾಲ ಪಡೆಯಲು ಅಲ್ಪಸಂಖ್ಯಾತ ಸಮುದಾಯದಿಂದ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವೃತ್ತಿ ಪ್ರೋತ್ಸಾಹ ಯೋಜನೆಯಡಿ ಸಾಲ ನೀಡಲು ಅಲ್ಪಸಂಖ್ಯಾತ ಸಮುದಾಯದ ಕ್ರೈಸ್ತರು, ಮುಸಲ್ಮಾನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ಅನ್ವಯವಾಗುವಂತೆ ಬ್ಯಾಂಕ್‌ ಸಾಲದ ಬದಲಾಗಿ ಕೆ.ಎಂ.ಡಿ.ಸಿ. ನಿಗಮದ ವತಿಯಿಂದಲೇ ಒಟ್ಟು ಸಾಲದ ಮೊತ್ತ ರೂ.1.00 ಲಕ್ಷ (ಒಂದು ಲಕ್ಷ ರೂಪಾಯಿಗಳು) ಅದರಲ್ಲಿ ಶೇ.50ರಷ್ಟು ಸಾಲ, ಶೇ.50ರಷ್ಟು ಸಹಾಯಧನದೊಂದಿಗೆ ವೃತ್ತಿ ಪ್ರೋತ್ಸಾಹ ಯೋಜನೆಯನ್ನು ಪರತ್ತುಗಳಿಗೊಳಪಟ್ಟು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಷರತ್ತುಗಳು :-

1. ಈ ಸಾಲ ಸೌಲಭ್ಯವನ್ನು ಮತೀಯ ಅಲ್ಪಸಂಖ್ಯಾತರ ಸಮುದಾಯದ ಅರ್ಹ ಫಲಾನುಭವಿಗಳಿಗೆ ನೀಡತಕ್ಕದ್ದು
2. ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಗಳಾಗಿರತಕ್ಕದ್ದು.
3. ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷಗಳು.
4. ಮತೀಯ ಅಲ್ಪಸಂಖ್ಯಾತರ ಸಮುದಾಯದ ಮಹಿಳೆಯರಿಗೆ ಆದ್ಯತೆ ನೀಡುವುದು.
5. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಮಿತಿಯು ರೂ.1,03,000/-(ನಗರ ಪ್ರದೇಶ) ಮತ್ತು ರೂ.81,000/- (ಗ್ರಾಮೀಣ ಪ್ರದೇಶ) ಮೀರಿರಬಾರದು.
6. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ರಾಜ್ಯ/ಕೇಂದ್ರ ಸರ್ಕಾರದ ಸೇವೆಯಲ್ಲಿರಬಾರದು.
7. ಈ ಯೋಜನೆಗೆ ಅರ್ಜಿ ಸಲ್ಲಿಸುವ ಯಾವುದೇ ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ಈ ಹಿಂದೆ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆದಿರಬಾರದು. (ಅರಿವು ಯೋಜನೆ ಹೊರತುಪಡಿಸಿ)
8.ಯೋಜನೆಯ ಸಾಲ ಮತ್ತು ಸಹಾಯಧನವನ್ನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದಲೇ ಬಿಡುಗಡೆಗೊಳಿಸಲಾಗುವುದು.

ಯೋಜನೆಯಡಿ ಈ ಕೆಳಗಿನ ಚಟುವಟಿಕೆ ಕೈಗೆತ್ತಿಕೊಳ್ಳಲು ಸಾಲ ಮತ್ತು ಸಹಾಯಧನ ಒದಗಿಸಲಾಗುವುದು.

1. ಹಣ್ಣು ಹಂಪಲು, ತರಕಾರಿ, ಕೋಳಿ ಮತ್ತು ಮೀನು ಮಾರಾಟ
2. ಎಳನೀರು, ಕಬ್ಬಿನ ಹಾಲು, ತಂಪುಪಾನೀಯ ಮಾರಾಟ
3. ಬೇಕರಿ, ಲಾಂಡ್ರಿ, ಡ್ರೈಕ್ಲೀನಿಂಗ್, ಹೇರ್ ಡ್ರೆಸಿಂಗ್ ಸಲೂನಿ, ಬ್ಯೂಟಿ ಪಾರ್ಲರ್
4. ವಾಟರ್ ವಾಷ್ ಸರ್ವೀಸ್, ಪಂಚ‌ ಶಾಪ್, ಮೆಕಾನಿಕ್ ಶಾಪ್, ದ್ವಿಚಕ್ರ, ತ್ರಿಚಕ್ರ ವಾಹನ ರಿಪೇರಿ
5. ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ ರಿಪೇರಿ, ರೆಫ್ರಿಜರೇಟರ್ ಮೋ‌ರಿವೇಂಡಿಂಗ್ ವರ್ಕ್ಸ್
6. ಬಿದರಿ ವೇರ್ ಕೆಲಸ, ರೇಷ್ಮೆ ರೀಲಿಂಗ್ ಮತ್ತು ಟ್ವಿಸ್ಟಿಂಗ್, ಆಟಿಕೆಗೊಂಬೆ ತಯಾರಿಕೆ
7. ಈ ಯೋಜನೆಯ ಒಟ್ಟು ಸಾಲದ ಮೊತ್ತ ರೂ.1.00 ಲಕ್ಷ ಇದರಲ್ಲಿ ಶೇ.50 ರಷ್ಟು ಸಾಲ, ಶೇ.50 ರಷ್ಟು ಸಹಾಯಧನವಾಗಿರುತ್ತದೆ.

ಅರ್ಜಿಯನ್ನು ಆನ್ ಲೈನ್ ವೆಬ್ ಸೈಟ್ https://kmdconline.karnataka.gov.in ಮೂಲಕ ದಿನಾಂಕ 22.08.2023 ರಿಂದ 25.09.2023 ರ ಒಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ (ರಜಾ ದಿನವನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:-ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ
ನಂ.1599, ವೈ.ಎನ್.ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ,
ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಛೇರಿ: 080-276817867, Gmail: kmdcbrural@gmail.com
ಸಹಾಯವಾಣಿ ಸಂಖ್ಯೆ:-8277799990 (24*7) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

17 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago