ವೃತ್ತಿ ಪ್ರೋತ್ಸಾಹ ಯೋಜನೆಯಡಿ ಸಾಲ ಪಡೆಯಲು ಅಲ್ಪಸಂಖ್ಯಾತ ಸಮುದಾಯದಿಂದ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವೃತ್ತಿ ಪ್ರೋತ್ಸಾಹ ಯೋಜನೆಯಡಿ ಸಾಲ ನೀಡಲು ಅಲ್ಪಸಂಖ್ಯಾತ ಸಮುದಾಯದ ಕ್ರೈಸ್ತರು, ಮುಸಲ್ಮಾನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ಅನ್ವಯವಾಗುವಂತೆ ಬ್ಯಾಂಕ್‌ ಸಾಲದ ಬದಲಾಗಿ ಕೆ.ಎಂ.ಡಿ.ಸಿ. ನಿಗಮದ ವತಿಯಿಂದಲೇ ಒಟ್ಟು ಸಾಲದ ಮೊತ್ತ ರೂ.1.00 ಲಕ್ಷ (ಒಂದು ಲಕ್ಷ ರೂಪಾಯಿಗಳು) ಅದರಲ್ಲಿ ಶೇ.50ರಷ್ಟು ಸಾಲ, ಶೇ.50ರಷ್ಟು ಸಹಾಯಧನದೊಂದಿಗೆ ವೃತ್ತಿ ಪ್ರೋತ್ಸಾಹ ಯೋಜನೆಯನ್ನು ಪರತ್ತುಗಳಿಗೊಳಪಟ್ಟು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಷರತ್ತುಗಳು :-

1. ಈ ಸಾಲ ಸೌಲಭ್ಯವನ್ನು ಮತೀಯ ಅಲ್ಪಸಂಖ್ಯಾತರ ಸಮುದಾಯದ ಅರ್ಹ ಫಲಾನುಭವಿಗಳಿಗೆ ನೀಡತಕ್ಕದ್ದು
2. ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಗಳಾಗಿರತಕ್ಕದ್ದು.
3. ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷಗಳು.
4. ಮತೀಯ ಅಲ್ಪಸಂಖ್ಯಾತರ ಸಮುದಾಯದ ಮಹಿಳೆಯರಿಗೆ ಆದ್ಯತೆ ನೀಡುವುದು.
5. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಮಿತಿಯು ರೂ.1,03,000/-(ನಗರ ಪ್ರದೇಶ) ಮತ್ತು ರೂ.81,000/- (ಗ್ರಾಮೀಣ ಪ್ರದೇಶ) ಮೀರಿರಬಾರದು.
6. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ರಾಜ್ಯ/ಕೇಂದ್ರ ಸರ್ಕಾರದ ಸೇವೆಯಲ್ಲಿರಬಾರದು.
7. ಈ ಯೋಜನೆಗೆ ಅರ್ಜಿ ಸಲ್ಲಿಸುವ ಯಾವುದೇ ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ಈ ಹಿಂದೆ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆದಿರಬಾರದು. (ಅರಿವು ಯೋಜನೆ ಹೊರತುಪಡಿಸಿ)
8.ಯೋಜನೆಯ ಸಾಲ ಮತ್ತು ಸಹಾಯಧನವನ್ನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದಲೇ ಬಿಡುಗಡೆಗೊಳಿಸಲಾಗುವುದು.

ಯೋಜನೆಯಡಿ ಈ ಕೆಳಗಿನ ಚಟುವಟಿಕೆ ಕೈಗೆತ್ತಿಕೊಳ್ಳಲು ಸಾಲ ಮತ್ತು ಸಹಾಯಧನ ಒದಗಿಸಲಾಗುವುದು.

1. ಹಣ್ಣು ಹಂಪಲು, ತರಕಾರಿ, ಕೋಳಿ ಮತ್ತು ಮೀನು ಮಾರಾಟ
2. ಎಳನೀರು, ಕಬ್ಬಿನ ಹಾಲು, ತಂಪುಪಾನೀಯ ಮಾರಾಟ
3. ಬೇಕರಿ, ಲಾಂಡ್ರಿ, ಡ್ರೈಕ್ಲೀನಿಂಗ್, ಹೇರ್ ಡ್ರೆಸಿಂಗ್ ಸಲೂನಿ, ಬ್ಯೂಟಿ ಪಾರ್ಲರ್
4. ವಾಟರ್ ವಾಷ್ ಸರ್ವೀಸ್, ಪಂಚ‌ ಶಾಪ್, ಮೆಕಾನಿಕ್ ಶಾಪ್, ದ್ವಿಚಕ್ರ, ತ್ರಿಚಕ್ರ ವಾಹನ ರಿಪೇರಿ
5. ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ ರಿಪೇರಿ, ರೆಫ್ರಿಜರೇಟರ್ ಮೋ‌ರಿವೇಂಡಿಂಗ್ ವರ್ಕ್ಸ್
6. ಬಿದರಿ ವೇರ್ ಕೆಲಸ, ರೇಷ್ಮೆ ರೀಲಿಂಗ್ ಮತ್ತು ಟ್ವಿಸ್ಟಿಂಗ್, ಆಟಿಕೆಗೊಂಬೆ ತಯಾರಿಕೆ
7. ಈ ಯೋಜನೆಯ ಒಟ್ಟು ಸಾಲದ ಮೊತ್ತ ರೂ.1.00 ಲಕ್ಷ ಇದರಲ್ಲಿ ಶೇ.50 ರಷ್ಟು ಸಾಲ, ಶೇ.50 ರಷ್ಟು ಸಹಾಯಧನವಾಗಿರುತ್ತದೆ.

ಅರ್ಜಿಯನ್ನು ಆನ್ ಲೈನ್ ವೆಬ್ ಸೈಟ್ https://kmdconline.karnataka.gov.in ಮೂಲಕ ದಿನಾಂಕ 22.08.2023 ರಿಂದ 25.09.2023 ರ ಒಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ (ರಜಾ ದಿನವನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:-ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ
ನಂ.1599, ವೈ.ಎನ್.ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ,
ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಛೇರಿ: 080-276817867, Gmail: kmdcbrural@gmail.com
ಸಹಾಯವಾಣಿ ಸಂಖ್ಯೆ:-8277799990 (24*7) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

3 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

11 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

12 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago