ವೃತ್ತಿ ಪ್ರೋತ್ಸಾಹ ಯೋಜನೆಯಡಿ ಸಾಲ ಪಡೆಯಲು ಅಲ್ಪಸಂಖ್ಯಾತ ಸಮುದಾಯದಿಂದ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವೃತ್ತಿ ಪ್ರೋತ್ಸಾಹ ಯೋಜನೆಯಡಿ ಸಾಲ ನೀಡಲು ಅಲ್ಪಸಂಖ್ಯಾತ ಸಮುದಾಯದ ಕ್ರೈಸ್ತರು, ಮುಸಲ್ಮಾನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ಅನ್ವಯವಾಗುವಂತೆ ಬ್ಯಾಂಕ್‌ ಸಾಲದ ಬದಲಾಗಿ ಕೆ.ಎಂ.ಡಿ.ಸಿ. ನಿಗಮದ ವತಿಯಿಂದಲೇ ಒಟ್ಟು ಸಾಲದ ಮೊತ್ತ ರೂ.1.00 ಲಕ್ಷ (ಒಂದು ಲಕ್ಷ ರೂಪಾಯಿಗಳು) ಅದರಲ್ಲಿ ಶೇ.50ರಷ್ಟು ಸಾಲ, ಶೇ.50ರಷ್ಟು ಸಹಾಯಧನದೊಂದಿಗೆ ವೃತ್ತಿ ಪ್ರೋತ್ಸಾಹ ಯೋಜನೆಯನ್ನು ಪರತ್ತುಗಳಿಗೊಳಪಟ್ಟು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಷರತ್ತುಗಳು :-

1. ಈ ಸಾಲ ಸೌಲಭ್ಯವನ್ನು ಮತೀಯ ಅಲ್ಪಸಂಖ್ಯಾತರ ಸಮುದಾಯದ ಅರ್ಹ ಫಲಾನುಭವಿಗಳಿಗೆ ನೀಡತಕ್ಕದ್ದು
2. ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಗಳಾಗಿರತಕ್ಕದ್ದು.
3. ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷಗಳು.
4. ಮತೀಯ ಅಲ್ಪಸಂಖ್ಯಾತರ ಸಮುದಾಯದ ಮಹಿಳೆಯರಿಗೆ ಆದ್ಯತೆ ನೀಡುವುದು.
5. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಮಿತಿಯು ರೂ.1,03,000/-(ನಗರ ಪ್ರದೇಶ) ಮತ್ತು ರೂ.81,000/- (ಗ್ರಾಮೀಣ ಪ್ರದೇಶ) ಮೀರಿರಬಾರದು.
6. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ರಾಜ್ಯ/ಕೇಂದ್ರ ಸರ್ಕಾರದ ಸೇವೆಯಲ್ಲಿರಬಾರದು.
7. ಈ ಯೋಜನೆಗೆ ಅರ್ಜಿ ಸಲ್ಲಿಸುವ ಯಾವುದೇ ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ಈ ಹಿಂದೆ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆದಿರಬಾರದು. (ಅರಿವು ಯೋಜನೆ ಹೊರತುಪಡಿಸಿ)
8.ಯೋಜನೆಯ ಸಾಲ ಮತ್ತು ಸಹಾಯಧನವನ್ನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದಲೇ ಬಿಡುಗಡೆಗೊಳಿಸಲಾಗುವುದು.

ಯೋಜನೆಯಡಿ ಈ ಕೆಳಗಿನ ಚಟುವಟಿಕೆ ಕೈಗೆತ್ತಿಕೊಳ್ಳಲು ಸಾಲ ಮತ್ತು ಸಹಾಯಧನ ಒದಗಿಸಲಾಗುವುದು.

1. ಹಣ್ಣು ಹಂಪಲು, ತರಕಾರಿ, ಕೋಳಿ ಮತ್ತು ಮೀನು ಮಾರಾಟ
2. ಎಳನೀರು, ಕಬ್ಬಿನ ಹಾಲು, ತಂಪುಪಾನೀಯ ಮಾರಾಟ
3. ಬೇಕರಿ, ಲಾಂಡ್ರಿ, ಡ್ರೈಕ್ಲೀನಿಂಗ್, ಹೇರ್ ಡ್ರೆಸಿಂಗ್ ಸಲೂನಿ, ಬ್ಯೂಟಿ ಪಾರ್ಲರ್
4. ವಾಟರ್ ವಾಷ್ ಸರ್ವೀಸ್, ಪಂಚ‌ ಶಾಪ್, ಮೆಕಾನಿಕ್ ಶಾಪ್, ದ್ವಿಚಕ್ರ, ತ್ರಿಚಕ್ರ ವಾಹನ ರಿಪೇರಿ
5. ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ ರಿಪೇರಿ, ರೆಫ್ರಿಜರೇಟರ್ ಮೋ‌ರಿವೇಂಡಿಂಗ್ ವರ್ಕ್ಸ್
6. ಬಿದರಿ ವೇರ್ ಕೆಲಸ, ರೇಷ್ಮೆ ರೀಲಿಂಗ್ ಮತ್ತು ಟ್ವಿಸ್ಟಿಂಗ್, ಆಟಿಕೆಗೊಂಬೆ ತಯಾರಿಕೆ
7. ಈ ಯೋಜನೆಯ ಒಟ್ಟು ಸಾಲದ ಮೊತ್ತ ರೂ.1.00 ಲಕ್ಷ ಇದರಲ್ಲಿ ಶೇ.50 ರಷ್ಟು ಸಾಲ, ಶೇ.50 ರಷ್ಟು ಸಹಾಯಧನವಾಗಿರುತ್ತದೆ.

ಅರ್ಜಿಯನ್ನು ಆನ್ ಲೈನ್ ವೆಬ್ ಸೈಟ್ https://kmdconline.karnataka.gov.in ಮೂಲಕ ದಿನಾಂಕ 22.08.2023 ರಿಂದ 25.09.2023 ರ ಒಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ (ರಜಾ ದಿನವನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:-ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ
ನಂ.1599, ವೈ.ಎನ್.ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ, ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಚೇರಿ: 080-276817867, Gmail: kmdcbrural@gmail.com
ಸಹಾಯವಾಣಿ ಸಂಖ್ಯೆ:-8277799990 (24*7) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

11 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago