ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವೃತ್ತಿ ಪ್ರೋತ್ಸಾಹ ಯೋಜನೆಯಡಿ ಸಾಲ ನೀಡಲು ಅಲ್ಪಸಂಖ್ಯಾತ ಸಮುದಾಯದ ಕ್ರೈಸ್ತರು, ಮುಸಲ್ಮಾನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ಅನ್ವಯವಾಗುವಂತೆ ಬ್ಯಾಂಕ್ ಸಾಲದ ಬದಲಾಗಿ ಕೆ.ಎಂ.ಡಿ.ಸಿ. ನಿಗಮದ ವತಿಯಿಂದಲೇ ಒಟ್ಟು ಸಾಲದ ಮೊತ್ತ ರೂ.1.00 ಲಕ್ಷ (ಒಂದು ಲಕ್ಷ ರೂಪಾಯಿಗಳು) ಅದರಲ್ಲಿ ಶೇ.50ರಷ್ಟು ಸಾಲ, ಶೇ.50ರಷ್ಟು ಸಹಾಯಧನದೊಂದಿಗೆ ವೃತ್ತಿ ಪ್ರೋತ್ಸಾಹ ಯೋಜನೆಯನ್ನು ಪರತ್ತುಗಳಿಗೊಳಪಟ್ಟು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಷರತ್ತುಗಳು :-
1. ಈ ಸಾಲ ಸೌಲಭ್ಯವನ್ನು ಮತೀಯ ಅಲ್ಪಸಂಖ್ಯಾತರ ಸಮುದಾಯದ ಅರ್ಹ ಫಲಾನುಭವಿಗಳಿಗೆ ನೀಡತಕ್ಕದ್ದು
2. ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಗಳಾಗಿರತಕ್ಕದ್ದು.
3. ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷಗಳು.
4. ಮತೀಯ ಅಲ್ಪಸಂಖ್ಯಾತರ ಸಮುದಾಯದ ಮಹಿಳೆಯರಿಗೆ ಆದ್ಯತೆ ನೀಡುವುದು.
5. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಮಿತಿಯು ರೂ.1,03,000/-(ನಗರ ಪ್ರದೇಶ) ಮತ್ತು ರೂ.81,000/- (ಗ್ರಾಮೀಣ ಪ್ರದೇಶ) ಮೀರಿರಬಾರದು.
6. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ರಾಜ್ಯ/ಕೇಂದ್ರ ಸರ್ಕಾರದ ಸೇವೆಯಲ್ಲಿರಬಾರದು.
7. ಈ ಯೋಜನೆಗೆ ಅರ್ಜಿ ಸಲ್ಲಿಸುವ ಯಾವುದೇ ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ಈ ಹಿಂದೆ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆದಿರಬಾರದು. (ಅರಿವು ಯೋಜನೆ ಹೊರತುಪಡಿಸಿ)
8.ಯೋಜನೆಯ ಸಾಲ ಮತ್ತು ಸಹಾಯಧನವನ್ನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದಲೇ ಬಿಡುಗಡೆಗೊಳಿಸಲಾಗುವುದು.
ಯೋಜನೆಯಡಿ ಈ ಕೆಳಗಿನ ಚಟುವಟಿಕೆ ಕೈಗೆತ್ತಿಕೊಳ್ಳಲು ಸಾಲ ಮತ್ತು ಸಹಾಯಧನ ಒದಗಿಸಲಾಗುವುದು.
1. ಹಣ್ಣು ಹಂಪಲು, ತರಕಾರಿ, ಕೋಳಿ ಮತ್ತು ಮೀನು ಮಾರಾಟ
2. ಎಳನೀರು, ಕಬ್ಬಿನ ಹಾಲು, ತಂಪುಪಾನೀಯ ಮಾರಾಟ
3. ಬೇಕರಿ, ಲಾಂಡ್ರಿ, ಡ್ರೈಕ್ಲೀನಿಂಗ್, ಹೇರ್ ಡ್ರೆಸಿಂಗ್ ಸಲೂನಿ, ಬ್ಯೂಟಿ ಪಾರ್ಲರ್
4. ವಾಟರ್ ವಾಷ್ ಸರ್ವೀಸ್, ಪಂಚ ಶಾಪ್, ಮೆಕಾನಿಕ್ ಶಾಪ್, ದ್ವಿಚಕ್ರ, ತ್ರಿಚಕ್ರ ವಾಹನ ರಿಪೇರಿ
5. ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ ರಿಪೇರಿ, ರೆಫ್ರಿಜರೇಟರ್ ಮೋರಿವೇಂಡಿಂಗ್ ವರ್ಕ್ಸ್
6. ಬಿದರಿ ವೇರ್ ಕೆಲಸ, ರೇಷ್ಮೆ ರೀಲಿಂಗ್ ಮತ್ತು ಟ್ವಿಸ್ಟಿಂಗ್, ಆಟಿಕೆಗೊಂಬೆ ತಯಾರಿಕೆ
7. ಈ ಯೋಜನೆಯ ಒಟ್ಟು ಸಾಲದ ಮೊತ್ತ ರೂ.1.00 ಲಕ್ಷ ಇದರಲ್ಲಿ ಶೇ.50 ರಷ್ಟು ಸಾಲ, ಶೇ.50 ರಷ್ಟು ಸಹಾಯಧನವಾಗಿರುತ್ತದೆ.
ಅರ್ಜಿಯನ್ನು ಆನ್ ಲೈನ್ ವೆಬ್ ಸೈಟ್ https://kmdconline.karnataka.gov.in ಮೂಲಕ ದಿನಾಂಕ 22.08.2023 ರಿಂದ 25.09.2023 ರ ಒಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ (ರಜಾ ದಿನವನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:-ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ
ನಂ.1599, ವೈ.ಎನ್.ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ, ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಚೇರಿ: 080-276817867, Gmail: kmdcbrural@gmail.com
ಸಹಾಯವಾಣಿ ಸಂಖ್ಯೆ:-8277799990 (24*7) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…