ಚಿಂತಾಮಣಿ:ತಲೆ ಕಡಿದು ಕಸಕ್ಕೆ ಎಸಿದಿರುವ ಘಟನೆ ಚಿಂತಾಮಣಿ ನಗರ ಠಾಣಾ ವ್ಯಾಪ್ತಿಯ ಎನ್ ಆರ್ ಬಡವಣೆಯಲ್ಲಿ ಕಳೆದ ರಾತ್ರಿ ನಡೆದಿದೆ.
ಯಾಜ್ಞವಲ್ಕ್ಯ ದೇವಸ್ಥಾನದ ಬಳಿ ರಸ್ತೆಯ ಪಕ್ಕದಲ್ಲಿ ಕಸ ಹಾಕುವ ಜಾಗದಲ್ಲಿ ವ್ಯಕ್ತಿಯ ತಲೆ ಕಡಿದು ಭೀಕರ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
65 ವರ್ಷದ ಮುನಿಯಪ್ಪ ಮೃತ ದುರ್ದೈವಿ ಎಂದು ಗೊತ್ತಾಗಿದೆ. ಆತ ಶ್ರೀನಿವಾಸಪುರ ತಾಲೂಕಿನ ಗೌಡನತಾತಗಡ್ಡ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ.
ರುಂಡ ಮುಂಡ ಬೇರ್ಪಡಿಸಿ ಭೀಕರ ಕೊಲೆ ಮಾಡಿರುವ ಕಿರಾತಕರು ತಲೆಯನ್ನು ನಾಯಿಗಳು ಎಳೆದಾಡುವ ವೇಳೆ ಸಾರ್ವಜನಿಕರು ನೋಡಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದು.
ಸ್ಥಳಕ್ಕೆ ಡಿವೈಎಸ್ಪಿ ಮುರುಳಿಧರ್ ನಗರಠಾಣೆ ಇನ್ಸ್ಪೆಕ್ಟರ್ ವಿಜಿ ಕುಮಾರ,ಬೆರಳಚ್ಚು ತಜ್ಞರ ಭೇಟಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇನ್ನೂ ಮುನಿಯಪ್ಪಗೆ ಇಬ್ಬರು ಹೆಂಡತಿಯರಿದ್ದು ಕಳೆದ ರಾತ್ರಿ ಜಗಳವಾಗಿ ಅವರೇ ಕೊಲೆ ಮಾಡಿರಬಹುದು ಎಂದು ಅವರ ಪುತ್ರ ಮಾಧ್ಯಮದವರಿಗೆ ಹೇಳಿಕೆ ಕೊಟ್ಟಿದ್ದಾನೆ.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…