ವೃದ್ಧೆ ಕೊರಳಲ್ಲಿದ್ದ ಚಿನ್ನದ ಸರವನ್ನು ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ತಾಲೂಕಿನ ಅರಳುಮಲ್ಲಿಗೆ ಬಳಿ ಇಂದು ಮಧ್ಯಾಹ್ನ ನಡೆದಿದೆ.
ಯಶೋಧಮ್ಮ (75), ಚಿನ್ನದ ಮಾಂಗಲ್ಯ ಸರ ಕಳೆದುಕೊಂಡ ವೃದ್ಧೆ.
ಪೆಟ್ಟಿ ಅಂಗಡಿಯಲ್ಲಿ ವೃದ್ಧೆ ತನ್ನ ಪಾಡಿಗೆ ತಾನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು. ಅಜ್ಜಿಯ ಕೊರಳಲ್ಲಿ ಸುಮಾರು 100 ಗ್ರಾಂ ಮಾಂಗಲ್ಯ ಸರ ಇತ್ತು ಎನ್ನಲಾಗಿದೆ. ಇದನ್ನು ಗಮನಿಸಿದ ಖದೀಮರು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬೈಕ್ ನಲ್ಲಿ ಅಂಗಡಿ ಬಳಿ ಬರುತ್ತಾರೆ. ಅಂಗಡಿ ಬಳಿ ಬಂದು 10 ರೂಪಾಯಿ ಕೊಟ್ಟು 5 ರೂಪಾಯಿಯ ಚಾಕಲೇಟ್ ಖರೀದಿ ಮಾಡುತ್ತಾರೆ. ಇನ್ನು 5 ರೂಪಾಯಿ ಚಿಲ್ಲರೆ ವಾಪಸ್ ಕೊಡಲು ಅಜ್ಜಿ ಬಂದಾಗ ಕಳ್ಳರು ನೇರವಾಗಿ ಅಜ್ಜಿಯ ಕೊರಳಿಗೆ ಕೈ ಹಾಕಿ ಚೈನ್ ಕದಿಯಲು ಮುಂದಾಗುತ್ತಾರೆ. ಅಜ್ಜಿ ಕೂಡಲೇ ಎಚ್ಚೆತ್ತುಕೊಂಡು ತನ್ನ ಚೈನನ್ನು ಬಿಗಿಯಾಗಿ ಹಿಡಿದುಕೊಳ್ಳುತ್ತಾರೆ. ಯಶೋಧಮ್ಮ ಕೊರಳಿನಿಂದ ಸರವನ್ನ ಕಿತ್ತಿಕೊಳ್ಳುವಾಗ ಸರ ತುಂಡಾಗಿ, ಅರ್ಧ ಸರ ಮಾತ್ರ ಕಳ್ಳರಿಗೆ ಕೈಗೆ ಸಿಕ್ಕಿದೆ ಎನ್ನಲಾಗಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…