ತಾಲೂಕಿನ ತೂಬಗೆರೆ ಹೋಬಳಿಯ ಕರೇನಹಳ್ಳಿ ಗ್ರಾಮದ ಹೊರವಲಯದಲ್ಲಿ ತನ್ನ ಜಮೀನಿನಲ್ಲಿ ಮಾರ್ಚ್ 09ರ ಮಧ್ಯಾಹ್ನ ಸುಮಾರು 3ಗಂಟೆ ಸಮಯದಲ್ಲಿ ಹೊಂಗೆ ಮರದಡಿಯಲ್ಲಿ ಹೊಂಗೆಕಾಯಿ ಆಯ್ದುಕೊಳ್ಳುತ್ತಿದ್ದ ವೃದ್ಧೆಯ ಮಾಂಗಲ್ಯ ಸರ ಕಿತ್ತು ಕಳ್ಳರು ಪರಾರಿಯಾಗಿದ್ದಾರೆ.
ಸುಮಾರು 72 ವರ್ಷದ ವೃದ್ಧೆ ನಾರಾಯಣಮ್ಮ ತನ್ನ ಜಮೀನಿನಲ್ಲಿದ್ದ ಹೊಂಗೆ ಮರಗಳಡಿಯಲ್ಲಿ ಹೊಂಗೆಕಾಯಿ ಆಯ್ದುಕೊಳ್ಳುವ ಸಮಯದಲ್ಲಿ ಇಬ್ಬರು ಯುವಕರು ಬೈಕ್ ನಲ್ಲಿ ಬಂದಿದ್ದಾರೆ. ಮೊದಲಿಗೆ ಒಬ್ಬ ಸ್ವಲ್ಪ ದೂರದಲ್ಲೇ ಇಳಿದುಕೊಂಡು ಇನ್ನೊಬ್ಬ ಅಜ್ಜಿ ಬಳಿ ಬಂದು ಹೊಂಗೆಕಾಯಿಯನ್ನು ಮರದಿಂದ ಕೀಳುವುದಾಗಿ ಹೇಳಿದ್ದಾನೆ. ಬಳಿಕ ಮರವನ್ನು ಹತ್ತಿ ಸುತ್ತಲೂ ನೋಡಿ ಯಾರೂ ಇಲ್ಲದ ಸಮಯದಲ್ಲಿ ಅಜ್ಜಿಯ ಬಾಯಿಗೆ ಬಟ್ಟೆ ಸುತ್ತಿ ತಾಳಿ, 2 ಲಕ್ಷ್ಮಿ ಕಾಸು, ಕರಿಮಣಿ, ಚಿನ್ನದ ಗುಂಡುಗಳಿದ್ದ 45ಗ್ರಾಂ ತೂಕದ ಮಾಂಗಲ್ಯ ಸರ ಕಸಿದುಕೊಂಡು ಬೈಕ್ ನಲ್ಲಿ ಎಸ್ಕೇಪ್ ಆಗಿದ್ದಾರೆ.
ಅಜ್ಜಿ ಪ್ರತಿದಿನ ತನ್ನ ಬಳಿ ಇದ್ದ ಮೂರು ಮೇಕೆಗಳನ್ನು ಮೇಯಿಸಲು ಅದೇ ಜಾಗಕ್ಕೆ ಬರುತ್ತಿದ್ದರು. ಇದೇ ವೇಳೆ ಹೊಂಗೆಮರದಡಿ ಬೀಳುವ ಕಾಯಿಗಳನ್ನು ಆಯ್ದುಕೊಳ್ಳುತ್ತಿದ್ದರು. ಇದನ್ನು ಗಮನಿಸಿದ್ದ ಕಳ್ಳರು ಏನ್ ಅಜ್ಜಿ ಇವತ್ತು ಮೇಕೆ ಹೊಡೆದುಕೊಂಡು ಬಂದಿಲ್ಲ ಎಂದು ಅಜ್ಜಿಯನ್ನು ಮಾತಿಗಿಳಿಸಿದ್ದಾರೆ. ಅಜ್ಜಿಯನ್ನು ಮಾತಿನ ಬಲೆಗೆ ಬೀಳಿಸಿ ಒಳ್ಳೆಯ ಹುಡುಗರಂತೆ ನಟಿಸಿ ಅಜ್ಜಿಯ ಮನ ಗೆದ್ದಿದ್ದಾರೆ. ಇದನ್ನೆ ಬಂಡವಾಳ ಮಾಡಿಕೊಂಡ
ಖದೀಮರು ಕೃತ್ಯವನ್ನು ಎಸಗಿದ್ದಾರೆ.
ನಂತರ ಸುದ್ದಿಯನ್ನು ತನ್ನ ಗಂಡನಿಗೆ ತಿಳಿಸಿ ಅಜ್ಜಿ ಕೂಡಲೇ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಇತ್ತೀಚಿಗೆ ತಾಲೂಕು ಹಾಗೂ ನಗರದಲ್ಲಿ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾಂಗಲ್ಯ ಸರ ಕಸಿಯಲು ಇಳಿದಿರುವ ಕಳ್ಳರು.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…