ತಾಲೂಕಿನ ತೂಬಗೆರೆ ಹೋಬಳಿಯ ಕರೇನಹಳ್ಳಿ ಗ್ರಾಮದ ಹೊರವಲಯದಲ್ಲಿ ತನ್ನ ಜಮೀನಿನಲ್ಲಿ ಮಾರ್ಚ್ 09ರ ಮಧ್ಯಾಹ್ನ ಸುಮಾರು 3ಗಂಟೆ ಸಮಯದಲ್ಲಿ ಹೊಂಗೆ ಮರದಡಿಯಲ್ಲಿ ಹೊಂಗೆಕಾಯಿ ಆಯ್ದುಕೊಳ್ಳುತ್ತಿದ್ದ ವೃದ್ಧೆಯ ಮಾಂಗಲ್ಯ ಸರ ಕಿತ್ತು ಕಳ್ಳರು ಪರಾರಿಯಾಗಿದ್ದಾರೆ.
ಸುಮಾರು 72 ವರ್ಷದ ವೃದ್ಧೆ ನಾರಾಯಣಮ್ಮ ತನ್ನ ಜಮೀನಿನಲ್ಲಿದ್ದ ಹೊಂಗೆ ಮರಗಳಡಿಯಲ್ಲಿ ಹೊಂಗೆಕಾಯಿ ಆಯ್ದುಕೊಳ್ಳುವ ಸಮಯದಲ್ಲಿ ಇಬ್ಬರು ಯುವಕರು ಬೈಕ್ ನಲ್ಲಿ ಬಂದಿದ್ದಾರೆ. ಮೊದಲಿಗೆ ಒಬ್ಬ ಸ್ವಲ್ಪ ದೂರದಲ್ಲೇ ಇಳಿದುಕೊಂಡು ಇನ್ನೊಬ್ಬ ಅಜ್ಜಿ ಬಳಿ ಬಂದು ಹೊಂಗೆಕಾಯಿಯನ್ನು ಮರದಿಂದ ಕೀಳುವುದಾಗಿ ಹೇಳಿದ್ದಾನೆ. ಬಳಿಕ ಮರವನ್ನು ಹತ್ತಿ ಸುತ್ತಲೂ ನೋಡಿ ಯಾರೂ ಇಲ್ಲದ ಸಮಯದಲ್ಲಿ ಅಜ್ಜಿಯ ಬಾಯಿಗೆ ಬಟ್ಟೆ ಸುತ್ತಿ ತಾಳಿ, 2 ಲಕ್ಷ್ಮಿ ಕಾಸು, ಕರಿಮಣಿ, ಚಿನ್ನದ ಗುಂಡುಗಳಿದ್ದ 45ಗ್ರಾಂ ತೂಕದ ಮಾಂಗಲ್ಯ ಸರ ಕಸಿದುಕೊಂಡು ಬೈಕ್ ನಲ್ಲಿ ಎಸ್ಕೇಪ್ ಆಗಿದ್ದಾರೆ.
ಅಜ್ಜಿ ಪ್ರತಿದಿನ ತನ್ನ ಬಳಿ ಇದ್ದ ಮೂರು ಮೇಕೆಗಳನ್ನು ಮೇಯಿಸಲು ಅದೇ ಜಾಗಕ್ಕೆ ಬರುತ್ತಿದ್ದರು. ಇದೇ ವೇಳೆ ಹೊಂಗೆಮರದಡಿ ಬೀಳುವ ಕಾಯಿಗಳನ್ನು ಆಯ್ದುಕೊಳ್ಳುತ್ತಿದ್ದರು. ಇದನ್ನು ಗಮನಿಸಿದ್ದ ಕಳ್ಳರು ಏನ್ ಅಜ್ಜಿ ಇವತ್ತು ಮೇಕೆ ಹೊಡೆದುಕೊಂಡು ಬಂದಿಲ್ಲ ಎಂದು ಅಜ್ಜಿಯನ್ನು ಮಾತಿಗಿಳಿಸಿದ್ದಾರೆ. ಅಜ್ಜಿಯನ್ನು ಮಾತಿನ ಬಲೆಗೆ ಬೀಳಿಸಿ ಒಳ್ಳೆಯ ಹುಡುಗರಂತೆ ನಟಿಸಿ ಅಜ್ಜಿಯ ಮನ ಗೆದ್ದಿದ್ದಾರೆ. ಇದನ್ನೆ ಬಂಡವಾಳ ಮಾಡಿಕೊಂಡ
ಖದೀಮರು ಕೃತ್ಯವನ್ನು ಎಸಗಿದ್ದಾರೆ.
ನಂತರ ಸುದ್ದಿಯನ್ನು ತನ್ನ ಗಂಡನಿಗೆ ತಿಳಿಸಿ ಅಜ್ಜಿ ಕೂಡಲೇ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಇತ್ತೀಚಿಗೆ ತಾಲೂಕು ಹಾಗೂ ನಗರದಲ್ಲಿ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾಂಗಲ್ಯ ಸರ ಕಸಿಯಲು ಇಳಿದಿರುವ ಕಳ್ಳರು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…