ವೃದ್ಧೆಯ ಮಾಂಗಲ್ಯ ಸರ ಕಿತ್ತು ಕಳ್ಳರು ಎಸ್ಕೇಪ್; ತಾಲೂಕಿನ ಕರೇನಹಳ್ಳಿಯಲ್ಲಿ ಘಟನೆ

ತಾಲೂಕಿನ ತೂಬಗೆರೆ ಹೋಬಳಿಯ ಕರೇನಹಳ್ಳಿ ಗ್ರಾಮದ‌ ಹೊರವಲಯದಲ್ಲಿ ತನ್ನ ಜಮೀನಿನಲ್ಲಿ ಮಾರ್ಚ್ 09ರ ಮಧ್ಯಾಹ್ನ ಸುಮಾರು 3ಗಂಟೆ ಸಮಯದಲ್ಲಿ ಹೊಂಗೆ ಮರದಡಿಯಲ್ಲಿ ಹೊಂಗೆಕಾಯಿ‌ ಆಯ್ದುಕೊಳ್ಳುತ್ತಿದ್ದ ವೃದ್ಧೆಯ ಮಾಂಗಲ್ಯ ಸರ ಕಿತ್ತು ಕಳ್ಳರು ಪರಾರಿಯಾಗಿದ್ದಾರೆ.

ಸುಮಾರು 72 ವರ್ಷದ ವೃದ್ಧೆ ನಾರಾಯಣಮ್ಮ ತನ್ನ ಜಮೀನಿನಲ್ಲಿದ್ದ ಹೊಂಗೆ ಮರಗಳಡಿಯಲ್ಲಿ ಹೊಂಗೆಕಾಯಿ ಆಯ್ದುಕೊಳ್ಳುವ‌ ಸಮಯದಲ್ಲಿ ಇಬ್ಬರು ಯುವಕರು ಬೈಕ್ ನಲ್ಲಿ ಬಂದಿದ್ದಾರೆ. ಮೊದಲಿಗೆ ಒಬ್ಬ ಸ್ವಲ್ಪ ದೂರದಲ್ಲೇ ಇಳಿದುಕೊಂಡು ಇನ್ನೊಬ್ಬ ಅಜ್ಜಿ ಬಳಿ ಬಂದು ಹೊಂಗೆಕಾಯಿಯನ್ನು ಮರದಿಂದ ಕೀಳುವುದಾಗಿ ಹೇಳಿದ್ದಾನೆ. ಬಳಿಕ ಮರ‌ವನ್ನು ಹತ್ತಿ ಸುತ್ತಲೂ ನೋಡಿ ಯಾರೂ ಇಲ್ಲದ ಸಮಯದಲ್ಲಿ ಅಜ್ಜಿಯ ಬಾಯಿಗೆ‌ ಬಟ್ಟೆ‌ ಸುತ್ತಿ ತಾಳಿ, 2 ಲಕ್ಷ್ಮಿ ಕಾಸು, ಕರಿಮಣಿ, ಚಿನ್ನದ ಗುಂಡುಗಳಿದ್ದ 45ಗ್ರಾಂ ತೂಕದ ಮಾಂಗಲ್ಯ ಸರ ಕಸಿದುಕೊಂಡು ಬೈಕ್ ನಲ್ಲಿ ಎಸ್ಕೇಪ್ ಆಗಿದ್ದಾರೆ.

ಘಟನೆ ವಿವರ:

ಅಜ್ಜಿ ಪ್ರತಿದಿನ ತನ್ನ ಬಳಿ ಇದ್ದ ಮೂರು ಮೇಕೆಗಳನ್ನು ಮೇಯಿಸಲು ಅದೇ ಜಾಗಕ್ಕೆ ಬರುತ್ತಿದ್ದರು. ಇದೇ ವೇಳೆ ಹೊಂಗೆಮರದಡಿ ಬೀಳುವ ಕಾಯಿಗಳನ್ನು ಆಯ್ದುಕೊಳ್ಳುತ್ತಿದ್ದರು. ಇದನ್ನು ಗಮನಿಸಿದ್ದ ಕಳ್ಳರು ಏನ್ ಅಜ್ಜಿ ಇವತ್ತು ಮೇಕೆ ಹೊಡೆದುಕೊಂಡು ಬಂದಿಲ್ಲ ಎಂದು ಅಜ್ಜಿಯನ್ನು ಮಾತಿಗಿಳಿಸಿದ್ದಾರೆ. ಅಜ್ಜಿಯನ್ನು ಮಾತಿನ ಬಲೆಗೆ ಬೀಳಿಸಿ ಒಳ್ಳೆಯ ಹುಡುಗರಂತೆ ನಟಿಸಿ ಅಜ್ಜಿಯ ಮನ ಗೆದ್ದಿದ್ದಾರೆ. ಇದನ್ನೆ ಬಂಡವಾಳ ಮಾಡಿಕೊಂಡ
ಖದೀಮರು ಕೃತ್ಯವನ್ನು ಎಸಗಿದ್ದಾರೆ.

ನಂತರ ಸುದ್ದಿಯನ್ನು ತನ್ನ ಗಂಡನಿಗೆ ತಿಳಿಸಿ ಅಜ್ಜಿ ಕೂಡಲೇ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇತ್ತೀಚಿಗೆ ತಾಲೂಕು ಹಾಗೂ ನಗರದಲ್ಲಿ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾಂಗಲ್ಯ ಸರ ಕಸಿಯಲು ಇಳಿದಿರುವ ಕಳ್ಳರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

7 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

10 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

22 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

23 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago