ತಾಲೂಕಿನ ತೂಬಗೆರೆ ಹೋಬಳಿಯ ಕರೇನಹಳ್ಳಿ ಗ್ರಾಮದ ಹೊರವಲಯದಲ್ಲಿ ತನ್ನ ಜಮೀನಿನಲ್ಲಿ ಮಾರ್ಚ್ 09ರ ಮಧ್ಯಾಹ್ನ ಸುಮಾರು 3ಗಂಟೆ ಸಮಯದಲ್ಲಿ ಹೊಂಗೆ ಮರದಡಿಯಲ್ಲಿ ಹೊಂಗೆಕಾಯಿ ಆಯ್ದುಕೊಳ್ಳುತ್ತಿದ್ದ ವೃದ್ಧೆಯ ಮಾಂಗಲ್ಯ ಸರ ಕಿತ್ತು ಕಳ್ಳರು ಪರಾರಿಯಾಗಿದ್ದಾರೆ.
ಸುಮಾರು 72 ವರ್ಷದ ವೃದ್ಧೆ ನಾರಾಯಣಮ್ಮ ತನ್ನ ಜಮೀನಿನಲ್ಲಿದ್ದ ಹೊಂಗೆ ಮರಗಳಡಿಯಲ್ಲಿ ಹೊಂಗೆಕಾಯಿ ಆಯ್ದುಕೊಳ್ಳುವ ಸಮಯದಲ್ಲಿ ಇಬ್ಬರು ಯುವಕರು ಬೈಕ್ ನಲ್ಲಿ ಬಂದಿದ್ದಾರೆ. ಮೊದಲಿಗೆ ಒಬ್ಬ ಸ್ವಲ್ಪ ದೂರದಲ್ಲೇ ಇಳಿದುಕೊಂಡು ಇನ್ನೊಬ್ಬ ಅಜ್ಜಿ ಬಳಿ ಬಂದು ಹೊಂಗೆಕಾಯಿಯನ್ನು ಮರದಿಂದ ಕೀಳುವುದಾಗಿ ಹೇಳಿದ್ದಾನೆ. ಬಳಿಕ ಮರವನ್ನು ಹತ್ತಿ ಸುತ್ತಲೂ ನೋಡಿ ಯಾರೂ ಇಲ್ಲದ ಸಮಯದಲ್ಲಿ ಅಜ್ಜಿಯ ಬಾಯಿಗೆ ಬಟ್ಟೆ ಸುತ್ತಿ ತಾಳಿ, 2 ಲಕ್ಷ್ಮಿ ಕಾಸು, ಕರಿಮಣಿ, ಚಿನ್ನದ ಗುಂಡುಗಳಿದ್ದ 45ಗ್ರಾಂ ತೂಕದ ಮಾಂಗಲ್ಯ ಸರ ಕಸಿದುಕೊಂಡು ಬೈಕ್ ನಲ್ಲಿ ಎಸ್ಕೇಪ್ ಆಗಿದ್ದಾರೆ.
ಅಜ್ಜಿ ಪ್ರತಿದಿನ ತನ್ನ ಬಳಿ ಇದ್ದ ಮೂರು ಮೇಕೆಗಳನ್ನು ಮೇಯಿಸಲು ಅದೇ ಜಾಗಕ್ಕೆ ಬರುತ್ತಿದ್ದರು. ಇದೇ ವೇಳೆ ಹೊಂಗೆಮರದಡಿ ಬೀಳುವ ಕಾಯಿಗಳನ್ನು ಆಯ್ದುಕೊಳ್ಳುತ್ತಿದ್ದರು. ಇದನ್ನು ಗಮನಿಸಿದ್ದ ಕಳ್ಳರು ಏನ್ ಅಜ್ಜಿ ಇವತ್ತು ಮೇಕೆ ಹೊಡೆದುಕೊಂಡು ಬಂದಿಲ್ಲ ಎಂದು ಅಜ್ಜಿಯನ್ನು ಮಾತಿಗಿಳಿಸಿದ್ದಾರೆ. ಅಜ್ಜಿಯನ್ನು ಮಾತಿನ ಬಲೆಗೆ ಬೀಳಿಸಿ ಒಳ್ಳೆಯ ಹುಡುಗರಂತೆ ನಟಿಸಿ ಅಜ್ಜಿಯ ಮನ ಗೆದ್ದಿದ್ದಾರೆ. ಇದನ್ನೆ ಬಂಡವಾಳ ಮಾಡಿಕೊಂಡ
ಖದೀಮರು ಕೃತ್ಯವನ್ನು ಎಸಗಿದ್ದಾರೆ.
ನಂತರ ಸುದ್ದಿಯನ್ನು ತನ್ನ ಗಂಡನಿಗೆ ತಿಳಿಸಿ ಅಜ್ಜಿ ಕೂಡಲೇ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಇತ್ತೀಚಿಗೆ ತಾಲೂಕು ಹಾಗೂ ನಗರದಲ್ಲಿ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾಂಗಲ್ಯ ಸರ ಕಸಿಯಲು ಇಳಿದಿರುವ ಕಳ್ಳರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…