ತಾಯಿಗಿಂತ ದೇವರಿಲ್ಲ ಎಂಬ ಮಾತು ಸುಳ್ಳಲ್ಲ. ತಾಯಿಗೆ ತನ್ನ ಮಕ್ಕಳಿಗಿಂತ ಯಾವುದೂ ಮುಖ್ಯವಲ್ಲ. ಮಕ್ಕಳಿಗೆ ತಾಯಿಯೇ ರಕ್ಷಾಕವಚ. ತಾಯಂದಿರು ತಮ್ಮ ಮಕ್ಕಳಿಗಾಗಿ ತಮ್ಮ ಪ್ರಾಣವನ್ನೂ ತ್ಯಾಗ ಮಾಡಲು ಸಿದ್ಧರಿರುತ್ತಾರೆ. ಇದು ಹಲವು ಬಾರಿ ನಡೆದಿದೆ. ಹಗಲು ಹೊತ್ತಿನಲ್ಲಿ ಮಗನನ್ನು ಕೊಲ್ಲಲು ಬಂದ ಹಂತಕರನ್ನು ಕಲ್ಲು ತೆಗೆದುಕೊಂಡು ತಾಯಿಯೇ ಓಡಿಸಿದ ಘಟನೆ ಮಹಾರಾಷ್ಟ್ರದ ಜೈಸಿಂಗ್ಪುರದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ.
ವಿಡಿಯೋದಲ್ಲಿ ಮಗ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಮೇಲೆ ಕುಳಿತು ತಾಯಿಯೊಂದಿಗೆ ಮಾತನಾಡುತ್ತಿರುತ್ತಾನೆ. ಅದೇ ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ ಮೂವರು ಬಂದರು. ಅವರಲ್ಲಿ ಒಬ್ಬನು ತನ್ನ ತಾಯಿಯೊಂದಿಗೆ ಮಾತನಾಡುತ್ತಾ ಕುಳಿತಿದ್ದ ವ್ಯಕ್ತಿಯ ಮೇಲೆ ಕತ್ತಿಯನ್ನು ಬೀಸುತ್ತಾನೆ. ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಆ ವ್ಯಕ್ತಿ ಪಾರಾಗಿದ್ದಾನೆ. ತನ್ನ ಮಗನ್ನು ರಕ್ಷಿಸಲು ತಾಯಿ ಕೆಳಗಿನಿಂದ ಕಲ್ಲನ್ನು ಎತ್ತಿ ಕತ್ತಿ ಬೀಸಿದ ವ್ಯಕ್ತಿಯನ್ನು ಹೊಡೆಯಲು ಮುಂದಾದರು. ಕೂಡಲೇ ಕತ್ತಿ ಬೀಸಿದ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ.
ಈ ಘಟನೆಗೂ ಮುನ್ನ ಇಬ್ಬರ ನಡುವೆ ಸಣ್ಣ-ಪುಟ್ಟ ಜಗಳ ನಡೆದು ಜಗಳ ತಾರಕಕ್ಕೇರಿದೆ. ಹೇಗೋ ವಿಷಯ ಇತ್ಯರ್ಥವಾಗಿ ಎಲ್ಲರೂ ಹೊರಟರು. ಆದರೆ, ಇದಾದ ಬಳಿಕ ಜೈಸಿಂಗ್ಪುರದ ನಂದನಿ ನಾಕಾ ರಸ್ತೆಯಲ್ಲಿ ಸುನೀಲ್ ರಾಮಪ್ಪ ಲಮಾಣಿ ತನ್ನ ತಾಯಿಯೊಂದಿಗೆ ಇದ್ದಾಗ ಬೈಕ್ನಲ್ಲಿ ಬಂದ ಇಬ್ಬರು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ. ಕೂಡಲೇ ಸುನೀಲ್ ಅವರ ತಾಯಿ ಹಂತಕರನ್ನು ಹಿಮ್ಮೆಟ್ಟಿಸಿದ್ದಾರೆ. ವೃದ್ಧ ತಾಯಿಯ ಮಾತೃಪ್ರೀತಿ ಮತ್ತೊಮ್ಮೆ ಜಗತ್ತಿಗೆ ಸಾಬೀತುಪಡಿಸಿದೆ.
ಅದೃಷ್ಟವಶಾತ್, ಕತ್ತಿಯ ದಾಳಿಯಲ್ಲಿ ಸುನೀಲ್ ಗಂಭೀರವಾಗಿ ಗಾಯಗೊಂಡಿಲ್ಲ, ಆದರೂ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ತನ್ನ ಮಗನನ್ನು ರಕ್ಷಿಸಲು ವೃದ್ಧ ತಾಯಿ ದಾಳಿಕೋರರನ್ನು ಓಡಿಸಲು ಯತ್ನಿಸಿದ ರೀತಿಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗುತ್ತಿದೆ.
ಈ ಘಟನೆಯ ನಂತರ ಸುನೀಲ್ ರಾಮಪ್ಪ ಲಮಾಣಿ ಅವರು ವಿನೋದ ಕಾಸು ಪವಾರ್, ಅರವಿಂದ ಕಾಸು ಪವಾರ್ ಮತ್ತು ವಿನೋದ ಬಾಬು ಜಾಧವ್ ವಿರುದ್ಧ ಜೈಸಿಂಗ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದೀಗ ಪೊಲೀಸರು ಸಿಸಿಟಿವಿ ವಿಡಿಯೋ ಆಧರಿಸಿ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…
ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…
ದೊಡ್ಡಬಳ್ಳಾಪುರ: ಕಾಂಗ್ರೆಸ್ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…