Categories: ವೈರಲ್

ವೃದ್ಧ ತಾಯಿಯ ಮಾತೃಪ್ರೀತಿಯಿಂದ ಹಂತಕರ ಲಾಂಗ್ ನಿಂದ ಪಾರಾದ ಮಗ: ಮಗನ ರಕ್ಷಾಕವಚವಾಗಿ ನಿಂತ ತಾಯಿ

ತಾಯಿಗಿಂತ ದೇವರಿಲ್ಲ ಎಂಬ ಮಾತು ಸುಳ್ಳಲ್ಲ. ತಾಯಿಗೆ ತನ್ನ ಮಕ್ಕಳಿಗಿಂತ ಯಾವುದೂ ಮುಖ್ಯವಲ್ಲ. ಮಕ್ಕಳಿಗೆ ತಾಯಿಯೇ ರಕ್ಷಾಕವಚ. ತಾಯಂದಿರು ತಮ್ಮ ಮಕ್ಕಳಿಗಾಗಿ ತಮ್ಮ ಪ್ರಾಣವನ್ನೂ ತ್ಯಾಗ ಮಾಡಲು ಸಿದ್ಧರಿರುತ್ತಾರೆ. ಇದು ಹಲವು ಬಾರಿ ನಡೆದಿದೆ. ಹಗಲು ಹೊತ್ತಿನಲ್ಲಿ ಮಗನನ್ನು ಕೊಲ್ಲಲು ಬಂದ ಹಂತಕರನ್ನು ಕಲ್ಲು ತೆಗೆದುಕೊಂಡು ತಾಯಿಯೇ ಓಡಿಸಿದ ಘಟನೆ ಮಹಾರಾಷ್ಟ್ರದ ಜೈಸಿಂಗ್‌ಪುರದಲ್ಲಿ ನಡೆದಿದೆ.‌‌ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಮಗ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಮೇಲೆ ಕುಳಿತು ತಾಯಿಯೊಂದಿಗೆ ಮಾತನಾಡುತ್ತಿರುತ್ತಾನೆ. ಅದೇ ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ ಮೂವರು ಬಂದರು.  ಅವರಲ್ಲಿ ಒಬ್ಬನು ತನ್ನ ತಾಯಿಯೊಂದಿಗೆ ಮಾತನಾಡುತ್ತಾ ಕುಳಿತಿದ್ದ ವ್ಯಕ್ತಿಯ ಮೇಲೆ ಕತ್ತಿಯನ್ನು ಬೀಸುತ್ತಾನೆ.  ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಆ ವ್ಯಕ್ತಿ‌ ಪಾರಾಗಿದ್ದಾನೆ. ತನ್ನ ಮಗನ್ನು ರಕ್ಷಿಸಲು ತಾಯಿ ಕೆಳಗಿನಿಂದ ಕಲ್ಲನ್ನು ಎತ್ತಿ ಕತ್ತಿ ಬೀಸಿದ ವ್ಯಕ್ತಿಯನ್ನು ಹೊಡೆಯಲು ಮುಂದಾದರು. ಕೂಡಲೇ ಕತ್ತಿ‌ ಬೀಸಿದ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ.

ಈ ಘಟನೆಗೂ ಮುನ್ನ ಇಬ್ಬರ ನಡುವೆ ಸಣ್ಣ-ಪುಟ್ಟ ಜಗಳ ನಡೆದು ಜಗಳ ತಾರಕಕ್ಕೇರಿದೆ. ಹೇಗೋ ವಿಷಯ ಇತ್ಯರ್ಥವಾಗಿ ಎಲ್ಲರೂ ಹೊರಟರು. ಆದರೆ, ಇದಾದ ಬಳಿಕ ಜೈಸಿಂಗ್‌ಪುರದ ನಂದನಿ ನಾಕಾ ರಸ್ತೆಯಲ್ಲಿ ಸುನೀಲ್ ರಾಮಪ್ಪ ಲಮಾಣಿ ತನ್ನ ತಾಯಿಯೊಂದಿಗೆ ಇದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ.  ಕೂಡಲೇ ಸುನೀಲ್ ಅವರ ತಾಯಿ ಹಂತಕರನ್ನು ಹಿಮ್ಮೆಟ್ಟಿಸಿದ್ದಾರೆ. ವೃದ್ಧ ತಾಯಿಯ ಮಾತೃಪ್ರೀತಿ ಮತ್ತೊಮ್ಮೆ ಜಗತ್ತಿಗೆ ಸಾಬೀತುಪಡಿಸಿದೆ.

ಅದೃಷ್ಟವಶಾತ್, ಕತ್ತಿಯ ದಾಳಿಯಲ್ಲಿ ಸುನೀಲ್ ಗಂಭೀರವಾಗಿ ಗಾಯಗೊಂಡಿಲ್ಲ, ಆದರೂ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ತನ್ನ ಮಗನನ್ನು ರಕ್ಷಿಸಲು ವೃದ್ಧ ತಾಯಿ ದಾಳಿಕೋರರನ್ನು ಓಡಿಸಲು ಯತ್ನಿಸಿದ ರೀತಿಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗುತ್ತಿದೆ.

ಈ ಘಟನೆಯ ನಂತರ ಸುನೀಲ್ ರಾಮಪ್ಪ ಲಮಾಣಿ ಅವರು ವಿನೋದ ಕಾಸು ಪವಾರ್, ಅರವಿಂದ ಕಾಸು ಪವಾರ್ ಮತ್ತು ವಿನೋದ ಬಾಬು ಜಾಧವ್ ವಿರುದ್ಧ ಜೈಸಿಂಗ್‌ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದೀಗ ಪೊಲೀಸರು ಸಿಸಿಟಿವಿ ವಿಡಿಯೋ ಆಧರಿಸಿ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.  ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

11 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

11 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

14 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

15 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

19 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

23 hours ago