ಸುಮಾರು 80 ವರ್ಷ ಮೀರಿದ ವೃದ್ಧ ದಂಪತಿಯ ಮನೆಗೆ ಕನ್ನ ಹಾಕಿರುವ ಕಳ್ಳರು ಮನೆಯಲ್ಲಿದ್ದ ಒಡವೆ, ನಗದು ಸೇರಿ ಸುಮಾರು ಹದಿನಾಲ್ಕುವರೆ ಲಕ್ಷ ಹಣವನ್ನು ಕಳ್ಳರು ದೋಚಿ ಪರಾರಿಯಾಗಿರುವಂತ ಘಟನೆ ತಾಲೂಕಿನ ಶ್ಯಾಕಲದೇವನಪುರ ಗ್ರಾಮದಲ್ಲಿ ನಡೆದಿದೆ.
ಘಟನೆ ವಿವರ:
ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಶ್ಯಾಕಲದೇವನಪುರ ಗ್ರಾಮದಲ್ಲಿ ವಾಸವಿರುವ ೮೧ ವರ್ಷದ ರೇಣುಕಯ್ಯ ವೃದ್ಧ ದಂಪತಿ ವಾಸವಾಗಿದ್ದಾರೆ. ವೃದ್ಧ ರೇಣುಕಯ್ಯ ನಿವೃತ್ತ ಶಿಕ್ಷಕರಾಗಿದ್ದು, ಬಂದ ಪೆನ್ಶೆನ್ ಹಣ ಮತ್ತು ಕೂಡಿಟ್ಟಿದ್ದ ಹಣದಲ್ಲಿ ಮನೆಯನ್ನು ಇತ್ತೀಚೆಗೆ ರಿಪೇರಿ ಮಾಡಿಸಿದ್ದರು. ಇದರಿಂದ ಮನೆಯಲ್ಲಿ ಚಳಿಯಿಂದಾಗಿ ತಂಡಿ ವಾತಾವರಣ ಹೆಚ್ಚಾಗಿತ್ತು.
ಹೃದಯ ಸಂಬಂಧಿತ ಕಾಯಿಲೆಗೆ ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡು ಚೇತರಿಸಿಕೊಳ್ಳುತ್ತಿದ್ದ ವೃದ್ಧ ರೇಣುಕಯ್ಯಗೆ ಚಳಿಯಿಂದಾಗಿ ಆರೋಗ್ಯ ಸಮಸ್ಯೆ ಎದುರಾಗಿತ್ತು. ಹೀಗಾಗಿ ಡಿಸೆಂಬರ್ ಆರಂಭದಿಂದ ರಾತ್ರಿ ವೇಳೆ ಮಲಗಲು ಹಳೆ ಮನೆಗೆ ಹೋಗುತ್ತಿದ್ದರು. ಇದನ್ನೇ ಟಾರ್ಗೆಟ್ ಮಾಡಿದ ಕಳ್ಳರು ರಾತ್ರಿ ವೇಳೆ ಮನೆಯ ಗ್ರೀಲ್ ಮುರಿದು ಒಳ ನುಗ್ಗಿ ಮನೆಯಲ್ಲಿದ್ದ ಸುಮಾರು ಹದಿನಾಲ್ಕುವರೆ ಲಕ್ಷ ರೂ. ಮೌಲ್ಯದ ಒಡವೆ, ನಗದು ದೋಚಿ ಪರಾರಿಯಾಗಿದ್ದಾರೆ. ಮನೆಯಲ್ಲಿದ್ದ ಸಿಸಿಟಿವಿಯ ಡಿವಿಆರ್ ಅನ್ನು ಕೂಡ ಕಳ್ಳರು ಕದ್ದೊಯ್ದಿದ್ದಾರೆ.
ಕಣ್ಣೀರಲ್ಲಿ ದಿನ ಕಳೆಯುತ್ತಿರುವ ವೃದ್ಧರು:
ಅಜ್ಜ – ಅಜ್ಜಿ ಇಬ್ಬರೂ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಕೊನೆಗಾಲದಲ್ಲಿ ಮಕ್ಕಳ ಆಸರೆ ಇಲ್ಲದೆ ಸ್ವಾಭಿಮಾನದಿಂದ ಜೀವನ ಮಾಡುತ್ತಿದ್ದ ದಂಪತಿಗೆ ಜೀವನಾಧಾರಕ್ಕಿದ್ದ ಹಣವನ್ನು ಕಳ್ಳರು ಕಳ್ಳತನ ಮಾಡಿರುವುದು ವೃದ್ಧರಿಗೆ ಮತ್ತಷ್ಟು ಸಂಕಟ ತಂದೊಡ್ಡಿದೆ. ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಲ್ಲದ ಸರಣಿ ಕಳ್ಳತನ:
ತಾಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಮನೆ ಕಳ್ಳತನ, ಮಾಂಗಲ್ಯ ಸರ ಕಳ್ಳತನ ಹೀಗೆ ಸಾಲು ಸಾಲು ಕಳ್ಳತನಗಳು ನಡೆಯುತ್ತಿದ್ದರೂ ಪೊಲೀಸರ ಯಾವುದೇ ಕಠಿಣ ಕ್ರಮಕ್ಕೆ ಮುಂದಾಗದೆ ಇರುವುದು ಸಾರ್ವಜನಿಕರಲ್ಲಿ ಬೇಸರ ಮೂಡಿಸಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…