ಸುಮಾರು 80 ವರ್ಷ ಮೀರಿದ ವೃದ್ಧ ದಂಪತಿಯ ಮನೆಗೆ ಕನ್ನ ಹಾಕಿರುವ ಕಳ್ಳರು ಮನೆಯಲ್ಲಿದ್ದ ಒಡವೆ, ನಗದು ಸೇರಿ ಸುಮಾರು ಹದಿನಾಲ್ಕುವರೆ ಲಕ್ಷ ಹಣವನ್ನು ಕಳ್ಳರು ದೋಚಿ ಪರಾರಿಯಾಗಿರುವಂತ ಘಟನೆ ತಾಲೂಕಿನ ಶ್ಯಾಕಲದೇವನಪುರ ಗ್ರಾಮದಲ್ಲಿ ನಡೆದಿದೆ.
ಘಟನೆ ವಿವರ:
ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಶ್ಯಾಕಲದೇವನಪುರ ಗ್ರಾಮದಲ್ಲಿ ವಾಸವಿರುವ ೮೧ ವರ್ಷದ ರೇಣುಕಯ್ಯ ವೃದ್ಧ ದಂಪತಿ ವಾಸವಾಗಿದ್ದಾರೆ. ವೃದ್ಧ ರೇಣುಕಯ್ಯ ನಿವೃತ್ತ ಶಿಕ್ಷಕರಾಗಿದ್ದು, ಬಂದ ಪೆನ್ಶೆನ್ ಹಣ ಮತ್ತು ಕೂಡಿಟ್ಟಿದ್ದ ಹಣದಲ್ಲಿ ಮನೆಯನ್ನು ಇತ್ತೀಚೆಗೆ ರಿಪೇರಿ ಮಾಡಿಸಿದ್ದರು. ಇದರಿಂದ ಮನೆಯಲ್ಲಿ ಚಳಿಯಿಂದಾಗಿ ತಂಡಿ ವಾತಾವರಣ ಹೆಚ್ಚಾಗಿತ್ತು.
ಹೃದಯ ಸಂಬಂಧಿತ ಕಾಯಿಲೆಗೆ ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡು ಚೇತರಿಸಿಕೊಳ್ಳುತ್ತಿದ್ದ ವೃದ್ಧ ರೇಣುಕಯ್ಯಗೆ ಚಳಿಯಿಂದಾಗಿ ಆರೋಗ್ಯ ಸಮಸ್ಯೆ ಎದುರಾಗಿತ್ತು. ಹೀಗಾಗಿ ಡಿಸೆಂಬರ್ ಆರಂಭದಿಂದ ರಾತ್ರಿ ವೇಳೆ ಮಲಗಲು ಹಳೆ ಮನೆಗೆ ಹೋಗುತ್ತಿದ್ದರು. ಇದನ್ನೇ ಟಾರ್ಗೆಟ್ ಮಾಡಿದ ಕಳ್ಳರು ರಾತ್ರಿ ವೇಳೆ ಮನೆಯ ಗ್ರೀಲ್ ಮುರಿದು ಒಳ ನುಗ್ಗಿ ಮನೆಯಲ್ಲಿದ್ದ ಸುಮಾರು ಹದಿನಾಲ್ಕುವರೆ ಲಕ್ಷ ರೂ. ಮೌಲ್ಯದ ಒಡವೆ, ನಗದು ದೋಚಿ ಪರಾರಿಯಾಗಿದ್ದಾರೆ. ಮನೆಯಲ್ಲಿದ್ದ ಸಿಸಿಟಿವಿಯ ಡಿವಿಆರ್ ಅನ್ನು ಕೂಡ ಕಳ್ಳರು ಕದ್ದೊಯ್ದಿದ್ದಾರೆ.
ಕಣ್ಣೀರಲ್ಲಿ ದಿನ ಕಳೆಯುತ್ತಿರುವ ವೃದ್ಧರು:
ಅಜ್ಜ – ಅಜ್ಜಿ ಇಬ್ಬರೂ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಕೊನೆಗಾಲದಲ್ಲಿ ಮಕ್ಕಳ ಆಸರೆ ಇಲ್ಲದೆ ಸ್ವಾಭಿಮಾನದಿಂದ ಜೀವನ ಮಾಡುತ್ತಿದ್ದ ದಂಪತಿಗೆ ಜೀವನಾಧಾರಕ್ಕಿದ್ದ ಹಣವನ್ನು ಕಳ್ಳರು ಕಳ್ಳತನ ಮಾಡಿರುವುದು ವೃದ್ಧರಿಗೆ ಮತ್ತಷ್ಟು ಸಂಕಟ ತಂದೊಡ್ಡಿದೆ. ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಲ್ಲದ ಸರಣಿ ಕಳ್ಳತನ:
ತಾಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಮನೆ ಕಳ್ಳತನ, ಮಾಂಗಲ್ಯ ಸರ ಕಳ್ಳತನ ಹೀಗೆ ಸಾಲು ಸಾಲು ಕಳ್ಳತನಗಳು ನಡೆಯುತ್ತಿದ್ದರೂ ಪೊಲೀಸರ ಯಾವುದೇ ಕಠಿಣ ಕ್ರಮಕ್ಕೆ ಮುಂದಾಗದೆ ಇರುವುದು ಸಾರ್ವಜನಿಕರಲ್ಲಿ ಬೇಸರ ಮೂಡಿಸಿದೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…