ವೃದ್ಧ ದಂಪತಿ ಮನೆಯಲ್ಲಿದ್ದ ಒಡವೆ, ನಗದು ಕಳ್ಳತನ; ಸಂಕಷ್ಟದಲ್ಲಿ ವೃದ್ಧ ದಂಪತಿ; ತಾಲೂಕಿನ ಶ್ಯಾಕಲದೇವನಪುರದಲ್ಲಿ ಘಟನೆ

ಸುಮಾರು 80 ವರ್ಷ ಮೀರಿದ ವೃದ್ಧ ದಂಪತಿಯ ಮನೆಗೆ ಕನ್ನ ಹಾಕಿರುವ ಕಳ್ಳರು ಮನೆಯಲ್ಲಿದ್ದ ಒಡವೆ, ನಗದು ಸೇರಿ ಸುಮಾರು ಹದಿನಾಲ್ಕುವರೆ ಲಕ್ಷ ಹಣವನ್ನು ಕಳ್ಳರು ದೋಚಿ ಪರಾರಿಯಾಗಿರುವಂತ ಘಟನೆ ತಾಲೂಕಿನ ಶ್ಯಾಕಲದೇವನಪುರ ಗ್ರಾಮದಲ್ಲಿ ನಡೆದಿದೆ.

ಘಟನೆ ವಿವರ:

ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಶ್ಯಾಕಲದೇವನಪುರ ಗ್ರಾಮದಲ್ಲಿ ವಾಸವಿರುವ ೮೧ ವರ್ಷದ ರೇಣುಕಯ್ಯ ವೃದ್ಧ ದಂಪತಿ ವಾಸವಾಗಿದ್ದಾರೆ. ವೃದ್ಧ ರೇಣುಕಯ್ಯ ನಿವೃತ್ತ ಶಿಕ್ಷಕರಾಗಿದ್ದು, ಬಂದ ಪೆನ್ಶೆನ್ ಹಣ ಮತ್ತು ಕೂಡಿಟ್ಟಿದ್ದ ಹಣದಲ್ಲಿ ಮನೆಯನ್ನು ಇತ್ತೀಚೆಗೆ ರಿಪೇರಿ ಮಾಡಿಸಿದ್ದರು. ಇದರಿಂದ ಮನೆಯಲ್ಲಿ ಚಳಿಯಿಂದಾಗಿ ತಂಡಿ ವಾತಾವರಣ ಹೆಚ್ಚಾಗಿತ್ತು.

ಹೃದಯ ಸಂಬಂಧಿತ ಕಾಯಿಲೆಗೆ ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡು ಚೇತರಿಸಿಕೊಳ್ಳುತ್ತಿದ್ದ ವೃದ್ಧ ರೇಣುಕಯ್ಯಗೆ ಚಳಿಯಿಂದಾಗಿ ಆರೋಗ್ಯ ಸಮಸ್ಯೆ ಎದುರಾಗಿತ್ತು. ಹೀಗಾಗಿ ಡಿಸೆಂಬರ್ ಆರಂಭದಿಂದ ರಾತ್ರಿ ವೇಳೆ ಮಲಗಲು ಹಳೆ ಮನೆಗೆ ಹೋಗುತ್ತಿದ್ದರು. ಇದನ್ನೇ ಟಾರ್ಗೆಟ್ ಮಾಡಿದ ಕಳ್ಳರು ರಾತ್ರಿ ವೇಳೆ ಮನೆಯ ಗ್ರೀಲ್ ಮುರಿದು ಒಳ ನುಗ್ಗಿ ಮನೆಯಲ್ಲಿದ್ದ ಸುಮಾರು ಹದಿನಾಲ್ಕುವರೆ ಲಕ್ಷ ರೂ. ಮೌಲ್ಯದ ಒಡವೆ, ನಗದು ದೋಚಿ ಪರಾರಿಯಾಗಿದ್ದಾರೆ. ಮನೆಯಲ್ಲಿದ್ದ ಸಿಸಿಟಿವಿಯ ಡಿವಿಆರ್ ಅನ್ನು ಕೂಡ ಕಳ್ಳರು ಕದ್ದೊಯ್ದಿದ್ದಾರೆ.

ಕಣ್ಣೀರಲ್ಲಿ ದಿನ ಕಳೆಯುತ್ತಿರುವ ವೃದ್ಧರು:

ಅಜ್ಜ – ಅಜ್ಜಿ ಇಬ್ಬರೂ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಕೊನೆಗಾಲದಲ್ಲಿ ಮಕ್ಕಳ ಆಸರೆ ಇಲ್ಲದೆ ಸ್ವಾಭಿಮಾನದಿಂದ ಜೀವನ ಮಾಡುತ್ತಿದ್ದ ದಂಪತಿಗೆ ಜೀವನಾಧಾರಕ್ಕಿದ್ದ ಹಣವನ್ನು ಕಳ್ಳರು ಕಳ್ಳತನ ಮಾಡಿರುವುದು ವೃದ್ಧರಿಗೆ ಮತ್ತಷ್ಟು ಸಂಕಟ ತಂದೊಡ್ಡಿದೆ. ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಲ್ಲದ ಸರಣಿ ಕಳ್ಳತನ:

ತಾಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಮನೆ ಕಳ್ಳತನ, ಮಾಂಗಲ್ಯ ಸರ ಕಳ್ಳತನ ಹೀಗೆ ಸಾಲು ಸಾಲು ಕಳ್ಳತನಗಳು ನಡೆಯುತ್ತಿದ್ದರೂ ಪೊಲೀಸರ ಯಾವುದೇ ಕಠಿಣ ಕ್ರಮಕ್ಕೆ ಮುಂದಾಗದೆ ಇರುವುದು ಸಾರ್ವಜನಿಕರಲ್ಲಿ ಬೇಸರ ಮೂಡಿಸಿದೆ.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

1 hour ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

3 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

4 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

8 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

19 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

19 hours ago