ಕೋಲಾರ: ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ವೆರ್ಗಾ ಅಟಾಚ್ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಸುಳ್ಳು ದಾಖಲೆಗಳನ್ನು ಸೃಷ್ಠಿಸಿ, ನಷ್ಟ ಎಂದು ತೋರಿಸಿ ಅಕ್ರಮವಾಗಿ ಮುಚ್ಚಿರುವುದನ್ನು ವಿರೋಧಿಸಿ, ಕೈಗಾರಿಕೆಯನ್ನು ಮತ್ತೆ ಆರಂಭಿಸಬೇಕೆಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದಿಂದ ನಗರದ ತಹಶೀಲ್ದಾರ್ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಮಾತನಾಡಿ ಸುಮಾರು 2006 ರಲ್ಲಿ ಒಂದು ಸಣ್ಣ ಶೆಡ್ನಲ್ಲಿ ಆರಂಭವಾದ ವೆರ್ಗಾ ಅಟಾಚ್ಮೆಂಟ್ ಪ್ರೈವೇಟ್ ಲಿಮಿಟೆಡ್ ಕೈಗಾರಿಕೆಯು 2019 ರಲ್ಲಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ವಿದೇಶಕ್ಕೆ ರಪ್ತು ಮಾಡಿದ ಲಾಭದಾಯಕ ಕಂಪನಿ ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ಈ ಕೈಗಾರಿಕೆಯು ಬುಲ್ಡೋಜರ್ ಬಕೆಟ್ಗೆ ಬೇಕಾಗುವ ಎಕ್ಸ್ ಕವೇಟರ್ ಬಕೆಟ್ಸ್, ರಿಫ್, ಮತ್ತು ಕಪ್ಲರ್ಸ್ 200 ರಿಂದ 1800 ವಿವಿಧ ಸಾಮಗ್ರಿಗಳನ್ನು ತಯಾರಿ ಮಾಡಿ, ಸುಮಾರು 58 ದೇಶಗಳಿಗೆ ರಪ್ತು ಮಾಡುತ್ತಿದ್ದು, ಲಾಭದಾಯಕವಾಗಿ ನಡೆಯುತ್ತಿರುವ ಕೈಗಾರಿಕೆಯಾಗಿದೆ ಈ ಕೈಗಾರಿಕೆಯಿಂದ ಬಂದ ಲಾಭದಿಂದ 2018-19 ರಲ್ಲಿ ವೆರ್ಗಾ 2, ವೆರ್ಗಾ 3 ನೇ ಘಟಕಗಳನ್ನು ಮಾಲೂರು ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿ ಆರಂಭಿಸಿದ್ದರು. 2023 ರಲ್ಲಿ ವೆರ್ಗಾ 2 ಮತ್ತು ವೆರ್ಗಾ 3 ಘಟಕದ ಹೆಸರುಗಳನ್ನು ವೀರ್ಯ 1 ಮತ್ತು ವೀರ್ಯ 2 ಎಂದು ಹೆಸರು ಬದಲಾವಣೆ ಮಾಡಿದರು. ವೆರ್ಗಾ 1 ಘಟಕದಲ್ಲಿ 2019 ರಲ್ಲಿ ದುಡಿಯುತ್ತಿದ್ದ 182 ಕಾರ್ಮಿಕರಿಗೆ ಹಲವು ಆಸೆ ಆಮೀಷಗಳನ್ನು ನೀಡಿ ಹಂತ ಹಂತವಾಗಿ ಕಡಿಮೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು
ವೆರ್ಗಾ ಕಂಪನಿಯಲ್ಲಿ ಪ್ರಸ್ತುತ ದುಡಿಯುತ್ತಿರುವ 81 ಖಾಯಂ ಕಾರ್ಮಿಕರನ್ನು ಮನೆಗೆ ಕಳುಹಿಸಿ ಗುತ್ತಿಗೆ ಕಾರ್ಮಿಕರಿಗೆ ಕಡಿಮೆ ವೇತನವನ್ನು ನೀಡಿ ಕೆಲಸ ಮಾಡಿಸಿಕೊಳ್ಳುವ ದುರುದ್ದೇಶದಿಂದ ಲಾಭದಾಯಕವಾಗಿರುವ ಕೈಗಾರಿಕೆಯನ್ನು ನಷ್ಠ ಎಂದು ತೋರಿಸುತ್ತಿರುವುದು ಸ್ಪಷ್ಠವಾಗಿದೆ ಎಂದು ಆರೋಪಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ವಿಜಯಕೃಷ್ಣ ಮಾತನಾಡಿ ಆಡಳಿತ ಮಂಡಳಿಯು ಸಮಸ್ಯೆಯನ್ನು ಸೌಹಾರ್ಧಯುತವಾಗಿ ಬಗೆಹರಿಸಿಕೊಳ್ಳಲು ಮುಂದಾಗದೇ ಇರುವುದು ಸರಿಯಲ್ಲ. ಕಳೆದ 10 ದಿನಗಳಿಂದ ಸರದಿ ಉಪವಾಸ ಸತ್ಯಾಗ್ರಹವನ್ನು ಅಲ್ಲಿನ ಕಾರ್ಮಿಕರು ನಡೆಸುತ್ತಿದ್ದರೂ ಜಿಲ್ಲಾಡಳಿತ ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ನಡೆಸದೇ ಇರುವುದು ಸರಿಯಲ್ಲ. ತಕ್ಷಣ ಮಧ್ಯ ಪ್ರವೇಶ ಮಾಡಿ, ಸಮಸ್ಯೆಯನ್ನು ಇತ್ಯರ್ಥ ಮಾಡಬೇಕು ಎಂದು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಯನ್ನು ಒತ್ತಾಯಿಸಿದರು,
ಪ್ರತಿಭಟನೆಯ ನೇತೃತ್ವವನ್ನು ಸಿಪಿಐ(ಎಂ) ತಾಲ್ಲೂಕು ಮುಖಂಡರಾದ, ಎಂ.ಭೀಮರಾಜ್, ಎನ್.ಎನ್.ಶ್ರೀರಾಮ್, ಎಸ್ ಆಶಾ, ವಿ.ನಾರಾಯಣರೆಡ್ಡಿ, ಗಂಗಟ್ಟ ಯಲ್ಲಪ್ಪ, ಕೆ.ವಿ.ಮಂಜುನಾಥ್, ಚಿನ್ನಮ್ಮ, ಡಿ.ಎಸ್.ವೆಂಕಟರವಣ ಮುಂತಾದವರು ಇದ್ದರು.
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…