Categories: ಕೋಲಾರ

ವೆರ್ಗಾ ಕಂಪನಿ ಮುಚ್ಚದಂತೆ ಸಿಪಿಐಎಂ ಪ್ರತಿಭಟನೆ

 

ಕೋಲಾರ: ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ವೆರ್ಗಾ ಅಟಾಚ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಸುಳ್ಳು ದಾಖಲೆಗಳನ್ನು ಸೃಷ್ಠಿಸಿ, ನಷ್ಟ ಎಂದು ತೋರಿಸಿ ಅಕ್ರಮವಾಗಿ ಮುಚ್ಚಿರುವುದನ್ನು ವಿರೋಧಿಸಿ, ಕೈಗಾರಿಕೆಯನ್ನು ಮತ್ತೆ ಆರಂಭಿಸಬೇಕೆಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದಿಂದ ನಗರದ ತಹಶೀಲ್ದಾರ್ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಮಾತನಾಡಿ ಸುಮಾರು 2006 ರಲ್ಲಿ ಒಂದು ಸಣ್ಣ ಶೆಡ್‌ನಲ್ಲಿ ಆರಂಭವಾದ ವೆರ್ಗಾ ಅಟಾಚ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಕೈಗಾರಿಕೆಯು 2019 ರಲ್ಲಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ವಿದೇಶಕ್ಕೆ ರಪ್ತು ಮಾಡಿದ ಲಾಭದಾಯಕ ಕಂಪನಿ ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ಈ ಕೈಗಾರಿಕೆಯು ಬುಲ್ಡೋಜರ್ ಬಕೆಟ್‌ಗೆ ಬೇಕಾಗುವ ಎಕ್ಸ್ ಕವೇಟರ್ ಬಕೆಟ್ಸ್, ರಿಫ್, ಮತ್ತು ಕಪ್ಲರ್ಸ್ 200 ರಿಂದ 1800 ವಿವಿಧ ಸಾಮಗ್ರಿಗಳನ್ನು ತಯಾರಿ ಮಾಡಿ, ಸುಮಾರು 58 ದೇಶಗಳಿಗೆ ರಪ್ತು ಮಾಡುತ್ತಿದ್ದು, ಲಾಭದಾಯಕವಾಗಿ ನಡೆಯುತ್ತಿರುವ ಕೈಗಾರಿಕೆಯಾಗಿದೆ ಈ ಕೈಗಾರಿಕೆಯಿಂದ ಬಂದ ಲಾಭದಿಂದ 2018-19 ರಲ್ಲಿ ವೆರ್ಗಾ 2, ವೆರ್ಗಾ 3 ನೇ ಘಟಕಗಳನ್ನು ಮಾಲೂರು ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿ ಆರಂಭಿಸಿದ್ದರು. 2023 ರಲ್ಲಿ ವೆರ್ಗಾ 2 ಮತ್ತು ವೆರ್ಗಾ 3 ಘಟಕದ ಹೆಸರುಗಳನ್ನು ವೀರ್ಯ 1 ಮತ್ತು ವೀರ್ಯ 2 ಎಂದು ಹೆಸರು ಬದಲಾವಣೆ ಮಾಡಿದರು. ವೆರ್ಗಾ 1 ಘಟಕದಲ್ಲಿ 2019 ರಲ್ಲಿ ದುಡಿಯುತ್ತಿದ್ದ 182 ಕಾರ್ಮಿಕರಿಗೆ ಹಲವು ಆಸೆ ಆಮೀಷಗಳನ್ನು ನೀಡಿ ಹಂತ ಹಂತವಾಗಿ ಕಡಿಮೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು

ವೆರ್ಗಾ ಕಂಪನಿಯಲ್ಲಿ ಪ್ರಸ್ತುತ ದುಡಿಯುತ್ತಿರುವ 81 ಖಾಯಂ ಕಾರ್ಮಿಕರನ್ನು ಮನೆಗೆ ಕಳುಹಿಸಿ ಗುತ್ತಿಗೆ ಕಾರ್ಮಿಕರಿಗೆ ಕಡಿಮೆ ವೇತನವನ್ನು ನೀಡಿ ಕೆಲಸ ಮಾಡಿಸಿಕೊಳ್ಳುವ ದುರುದ್ದೇಶದಿಂದ ಲಾಭದಾಯಕವಾಗಿರುವ ಕೈಗಾರಿಕೆಯನ್ನು ನಷ್ಠ ಎಂದು ತೋರಿಸುತ್ತಿರುವುದು ಸ್ಪಷ್ಠವಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ವಿಜಯಕೃಷ್ಣ ಮಾತನಾಡಿ ಆಡಳಿತ ಮಂಡಳಿಯು ಸಮಸ್ಯೆಯನ್ನು ಸೌಹಾರ್ಧಯುತವಾಗಿ ಬಗೆಹರಿಸಿಕೊಳ್ಳಲು ಮುಂದಾಗದೇ ಇರುವುದು ಸರಿಯಲ್ಲ. ಕಳೆದ 10 ದಿನಗಳಿಂದ ಸರದಿ ಉಪವಾಸ ಸತ್ಯಾಗ್ರಹವನ್ನು ಅಲ್ಲಿನ ಕಾರ್ಮಿಕರು ನಡೆಸುತ್ತಿದ್ದರೂ ಜಿಲ್ಲಾಡಳಿತ ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ನಡೆಸದೇ ಇರುವುದು ಸರಿಯಲ್ಲ. ತಕ್ಷಣ ಮಧ್ಯ ಪ್ರವೇಶ ಮಾಡಿ, ಸಮಸ್ಯೆಯನ್ನು ಇತ್ಯರ್ಥ ಮಾಡಬೇಕು ಎಂದು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಯನ್ನು ಒತ್ತಾಯಿಸಿದರು,

ಪ್ರತಿಭಟನೆಯ ನೇತೃತ್ವವನ್ನು ಸಿಪಿಐ(ಎಂ) ತಾಲ್ಲೂಕು ಮುಖಂಡರಾದ, ಎಂ.ಭೀಮರಾಜ್, ಎನ್.ಎನ್.ಶ್ರೀರಾಮ್, ಎಸ್ ಆಶಾ, ವಿ.ನಾರಾಯಣರೆಡ್ಡಿ, ಗಂಗಟ್ಟ ಯಲ್ಲಪ್ಪ, ಕೆ.ವಿ.ಮಂಜುನಾಥ್, ಚಿನ್ನಮ್ಮ, ಡಿ.ಎಸ್.ವೆಂಕಟರವಣ ಮುಂತಾದವರು ಇದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

2 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

5 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

18 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

19 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

21 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

23 hours ago