Categories: ಕೋಲಾರ

ವೆರ್ಗಾ ಕಂಪನಿ ಮುಚ್ಚದಂತೆ ಸಿಪಿಐಎಂ ಪ್ರತಿಭಟನೆ

 

ಕೋಲಾರ: ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ವೆರ್ಗಾ ಅಟಾಚ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಸುಳ್ಳು ದಾಖಲೆಗಳನ್ನು ಸೃಷ್ಠಿಸಿ, ನಷ್ಟ ಎಂದು ತೋರಿಸಿ ಅಕ್ರಮವಾಗಿ ಮುಚ್ಚಿರುವುದನ್ನು ವಿರೋಧಿಸಿ, ಕೈಗಾರಿಕೆಯನ್ನು ಮತ್ತೆ ಆರಂಭಿಸಬೇಕೆಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದಿಂದ ನಗರದ ತಹಶೀಲ್ದಾರ್ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಮಾತನಾಡಿ ಸುಮಾರು 2006 ರಲ್ಲಿ ಒಂದು ಸಣ್ಣ ಶೆಡ್‌ನಲ್ಲಿ ಆರಂಭವಾದ ವೆರ್ಗಾ ಅಟಾಚ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಕೈಗಾರಿಕೆಯು 2019 ರಲ್ಲಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ವಿದೇಶಕ್ಕೆ ರಪ್ತು ಮಾಡಿದ ಲಾಭದಾಯಕ ಕಂಪನಿ ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ಈ ಕೈಗಾರಿಕೆಯು ಬುಲ್ಡೋಜರ್ ಬಕೆಟ್‌ಗೆ ಬೇಕಾಗುವ ಎಕ್ಸ್ ಕವೇಟರ್ ಬಕೆಟ್ಸ್, ರಿಫ್, ಮತ್ತು ಕಪ್ಲರ್ಸ್ 200 ರಿಂದ 1800 ವಿವಿಧ ಸಾಮಗ್ರಿಗಳನ್ನು ತಯಾರಿ ಮಾಡಿ, ಸುಮಾರು 58 ದೇಶಗಳಿಗೆ ರಪ್ತು ಮಾಡುತ್ತಿದ್ದು, ಲಾಭದಾಯಕವಾಗಿ ನಡೆಯುತ್ತಿರುವ ಕೈಗಾರಿಕೆಯಾಗಿದೆ ಈ ಕೈಗಾರಿಕೆಯಿಂದ ಬಂದ ಲಾಭದಿಂದ 2018-19 ರಲ್ಲಿ ವೆರ್ಗಾ 2, ವೆರ್ಗಾ 3 ನೇ ಘಟಕಗಳನ್ನು ಮಾಲೂರು ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿ ಆರಂಭಿಸಿದ್ದರು. 2023 ರಲ್ಲಿ ವೆರ್ಗಾ 2 ಮತ್ತು ವೆರ್ಗಾ 3 ಘಟಕದ ಹೆಸರುಗಳನ್ನು ವೀರ್ಯ 1 ಮತ್ತು ವೀರ್ಯ 2 ಎಂದು ಹೆಸರು ಬದಲಾವಣೆ ಮಾಡಿದರು. ವೆರ್ಗಾ 1 ಘಟಕದಲ್ಲಿ 2019 ರಲ್ಲಿ ದುಡಿಯುತ್ತಿದ್ದ 182 ಕಾರ್ಮಿಕರಿಗೆ ಹಲವು ಆಸೆ ಆಮೀಷಗಳನ್ನು ನೀಡಿ ಹಂತ ಹಂತವಾಗಿ ಕಡಿಮೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು

ವೆರ್ಗಾ ಕಂಪನಿಯಲ್ಲಿ ಪ್ರಸ್ತುತ ದುಡಿಯುತ್ತಿರುವ 81 ಖಾಯಂ ಕಾರ್ಮಿಕರನ್ನು ಮನೆಗೆ ಕಳುಹಿಸಿ ಗುತ್ತಿಗೆ ಕಾರ್ಮಿಕರಿಗೆ ಕಡಿಮೆ ವೇತನವನ್ನು ನೀಡಿ ಕೆಲಸ ಮಾಡಿಸಿಕೊಳ್ಳುವ ದುರುದ್ದೇಶದಿಂದ ಲಾಭದಾಯಕವಾಗಿರುವ ಕೈಗಾರಿಕೆಯನ್ನು ನಷ್ಠ ಎಂದು ತೋರಿಸುತ್ತಿರುವುದು ಸ್ಪಷ್ಠವಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ವಿಜಯಕೃಷ್ಣ ಮಾತನಾಡಿ ಆಡಳಿತ ಮಂಡಳಿಯು ಸಮಸ್ಯೆಯನ್ನು ಸೌಹಾರ್ಧಯುತವಾಗಿ ಬಗೆಹರಿಸಿಕೊಳ್ಳಲು ಮುಂದಾಗದೇ ಇರುವುದು ಸರಿಯಲ್ಲ. ಕಳೆದ 10 ದಿನಗಳಿಂದ ಸರದಿ ಉಪವಾಸ ಸತ್ಯಾಗ್ರಹವನ್ನು ಅಲ್ಲಿನ ಕಾರ್ಮಿಕರು ನಡೆಸುತ್ತಿದ್ದರೂ ಜಿಲ್ಲಾಡಳಿತ ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ನಡೆಸದೇ ಇರುವುದು ಸರಿಯಲ್ಲ. ತಕ್ಷಣ ಮಧ್ಯ ಪ್ರವೇಶ ಮಾಡಿ, ಸಮಸ್ಯೆಯನ್ನು ಇತ್ಯರ್ಥ ಮಾಡಬೇಕು ಎಂದು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಯನ್ನು ಒತ್ತಾಯಿಸಿದರು,

ಪ್ರತಿಭಟನೆಯ ನೇತೃತ್ವವನ್ನು ಸಿಪಿಐ(ಎಂ) ತಾಲ್ಲೂಕು ಮುಖಂಡರಾದ, ಎಂ.ಭೀಮರಾಜ್, ಎನ್.ಎನ್.ಶ್ರೀರಾಮ್, ಎಸ್ ಆಶಾ, ವಿ.ನಾರಾಯಣರೆಡ್ಡಿ, ಗಂಗಟ್ಟ ಯಲ್ಲಪ್ಪ, ಕೆ.ವಿ.ಮಂಜುನಾಥ್, ಚಿನ್ನಮ್ಮ, ಡಿ.ಎಸ್.ವೆಂಕಟರವಣ ಮುಂತಾದವರು ಇದ್ದರು.

Ramesh Babu

Journalist

Recent Posts

ಕೊಳಚೆ ನೀರು ಶುದ್ಧೀಕರಣಕ್ಕೆ STP ಘಟಕ ಸ್ಥಾಪನೆಗೆ ಆಗ್ರಹ: ಆ.15ರಂದು ಗಾಂಧಿ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ

ದೊಡ್ಡಬಳ್ಳಾಪುರ: ನಗರದಿಂದ ಗ್ರಾಮಗಳ ಕೆರೆಗಳಿಗೆ ಹರಿಯುತ್ತಿರುವ ಕೊಳಚೆ ನೀರನ್ನು ಶುದ್ಧೀಕರಿಸಲು ಎಸ್‌ಟಿಪಿ (STP) ಘಟಕ ಸ್ಥಾಪಿಸುವಂತೆ ಆಗ್ರಹಿಸಿ ಅರ್ಕಾವತಿ ನದಿ…

2 hours ago

ದೊಡ್ಡಬಳ್ಳಾಪುರದಲ್ಲಿ ಕಾರ್ಮಿಕ–ರೈತರ ಆಕ್ರೋಶ; ಎಸಿ ಕಚೇರಿಗೆ ಮುತ್ತಿಗೆ: ನಾಲ್ಕು ಕಾರ್ಮಿಕ ಸಂಹಿತೆ ರದ್ದು, ವಿದ್ಯುತ್ ಖಾಸಗೀಕರಣ ಕೈಬಿಡಲು ಆಗ್ರಹ

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಹಾಗೂ ವಿದ್ಯುತ್ ಖಾಸಗೀಕರಣ ಕೈಬಿಡಬೇಕು ಸೇರಿದಂತೆ ವಿವಿಧ…

7 hours ago

ಕಾರು–ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ…

7 hours ago

ಕೆಐಎಎಲ್ ಏರ್‌ಪೋರ್ಟ್ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಬೆಚ್ಚಿಬೀಳಿಸುವ ಘಟನೆ:

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಇಬ್ಬರು ಬಾಲಕಿಯರು ಶಂಕಾಸ್ಪದವಾಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ…

19 hours ago

ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಿಸಿ ಅರ್ಜುನ್ ವಿರಾಟ್ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಅರ್ಜುನ್ ವಿರಾಟ್ ಅವರ ಜನ್ಮದಿನದ ಹಿನ್ನೆಲೆ, ಅವರ ಸ್ನೇಹಿತರು ಹಾಗೂ ಒಡನಾಡಿಗಳು…

1 day ago

ಸೈಕಲ್ ಗೋಡಾನ್ ಗೆ ಆಕಸ್ಮಿಕ ಬೆಂಕಿ; ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲು

ದೊಡ್ಡಬಳ್ಳಾಪುರ: ನಗರದ ಸೈಕಲ್ ಗೋಡೌನ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಗೋಡೌನ್‌ನಲ್ಲಿದ್ದ ಅಪಾರ ಪ್ರಮಾಣದ ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲಾದ…

1 day ago