Categories: ಕೋಲಾರ

ವೆರ್ಗಾ ಕಂಪನಿ ಮುಚ್ಚದಂತೆ ಸಿಪಿಐಎಂ ಪ್ರತಿಭಟನೆ

 

ಕೋಲಾರ: ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ವೆರ್ಗಾ ಅಟಾಚ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಸುಳ್ಳು ದಾಖಲೆಗಳನ್ನು ಸೃಷ್ಠಿಸಿ, ನಷ್ಟ ಎಂದು ತೋರಿಸಿ ಅಕ್ರಮವಾಗಿ ಮುಚ್ಚಿರುವುದನ್ನು ವಿರೋಧಿಸಿ, ಕೈಗಾರಿಕೆಯನ್ನು ಮತ್ತೆ ಆರಂಭಿಸಬೇಕೆಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದಿಂದ ನಗರದ ತಹಶೀಲ್ದಾರ್ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಮಾತನಾಡಿ ಸುಮಾರು 2006 ರಲ್ಲಿ ಒಂದು ಸಣ್ಣ ಶೆಡ್‌ನಲ್ಲಿ ಆರಂಭವಾದ ವೆರ್ಗಾ ಅಟಾಚ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಕೈಗಾರಿಕೆಯು 2019 ರಲ್ಲಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ವಿದೇಶಕ್ಕೆ ರಪ್ತು ಮಾಡಿದ ಲಾಭದಾಯಕ ಕಂಪನಿ ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ಈ ಕೈಗಾರಿಕೆಯು ಬುಲ್ಡೋಜರ್ ಬಕೆಟ್‌ಗೆ ಬೇಕಾಗುವ ಎಕ್ಸ್ ಕವೇಟರ್ ಬಕೆಟ್ಸ್, ರಿಫ್, ಮತ್ತು ಕಪ್ಲರ್ಸ್ 200 ರಿಂದ 1800 ವಿವಿಧ ಸಾಮಗ್ರಿಗಳನ್ನು ತಯಾರಿ ಮಾಡಿ, ಸುಮಾರು 58 ದೇಶಗಳಿಗೆ ರಪ್ತು ಮಾಡುತ್ತಿದ್ದು, ಲಾಭದಾಯಕವಾಗಿ ನಡೆಯುತ್ತಿರುವ ಕೈಗಾರಿಕೆಯಾಗಿದೆ ಈ ಕೈಗಾರಿಕೆಯಿಂದ ಬಂದ ಲಾಭದಿಂದ 2018-19 ರಲ್ಲಿ ವೆರ್ಗಾ 2, ವೆರ್ಗಾ 3 ನೇ ಘಟಕಗಳನ್ನು ಮಾಲೂರು ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿ ಆರಂಭಿಸಿದ್ದರು. 2023 ರಲ್ಲಿ ವೆರ್ಗಾ 2 ಮತ್ತು ವೆರ್ಗಾ 3 ಘಟಕದ ಹೆಸರುಗಳನ್ನು ವೀರ್ಯ 1 ಮತ್ತು ವೀರ್ಯ 2 ಎಂದು ಹೆಸರು ಬದಲಾವಣೆ ಮಾಡಿದರು. ವೆರ್ಗಾ 1 ಘಟಕದಲ್ಲಿ 2019 ರಲ್ಲಿ ದುಡಿಯುತ್ತಿದ್ದ 182 ಕಾರ್ಮಿಕರಿಗೆ ಹಲವು ಆಸೆ ಆಮೀಷಗಳನ್ನು ನೀಡಿ ಹಂತ ಹಂತವಾಗಿ ಕಡಿಮೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು

ವೆರ್ಗಾ ಕಂಪನಿಯಲ್ಲಿ ಪ್ರಸ್ತುತ ದುಡಿಯುತ್ತಿರುವ 81 ಖಾಯಂ ಕಾರ್ಮಿಕರನ್ನು ಮನೆಗೆ ಕಳುಹಿಸಿ ಗುತ್ತಿಗೆ ಕಾರ್ಮಿಕರಿಗೆ ಕಡಿಮೆ ವೇತನವನ್ನು ನೀಡಿ ಕೆಲಸ ಮಾಡಿಸಿಕೊಳ್ಳುವ ದುರುದ್ದೇಶದಿಂದ ಲಾಭದಾಯಕವಾಗಿರುವ ಕೈಗಾರಿಕೆಯನ್ನು ನಷ್ಠ ಎಂದು ತೋರಿಸುತ್ತಿರುವುದು ಸ್ಪಷ್ಠವಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ವಿಜಯಕೃಷ್ಣ ಮಾತನಾಡಿ ಆಡಳಿತ ಮಂಡಳಿಯು ಸಮಸ್ಯೆಯನ್ನು ಸೌಹಾರ್ಧಯುತವಾಗಿ ಬಗೆಹರಿಸಿಕೊಳ್ಳಲು ಮುಂದಾಗದೇ ಇರುವುದು ಸರಿಯಲ್ಲ. ಕಳೆದ 10 ದಿನಗಳಿಂದ ಸರದಿ ಉಪವಾಸ ಸತ್ಯಾಗ್ರಹವನ್ನು ಅಲ್ಲಿನ ಕಾರ್ಮಿಕರು ನಡೆಸುತ್ತಿದ್ದರೂ ಜಿಲ್ಲಾಡಳಿತ ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ನಡೆಸದೇ ಇರುವುದು ಸರಿಯಲ್ಲ. ತಕ್ಷಣ ಮಧ್ಯ ಪ್ರವೇಶ ಮಾಡಿ, ಸಮಸ್ಯೆಯನ್ನು ಇತ್ಯರ್ಥ ಮಾಡಬೇಕು ಎಂದು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಯನ್ನು ಒತ್ತಾಯಿಸಿದರು,

ಪ್ರತಿಭಟನೆಯ ನೇತೃತ್ವವನ್ನು ಸಿಪಿಐ(ಎಂ) ತಾಲ್ಲೂಕು ಮುಖಂಡರಾದ, ಎಂ.ಭೀಮರಾಜ್, ಎನ್.ಎನ್.ಶ್ರೀರಾಮ್, ಎಸ್ ಆಶಾ, ವಿ.ನಾರಾಯಣರೆಡ್ಡಿ, ಗಂಗಟ್ಟ ಯಲ್ಲಪ್ಪ, ಕೆ.ವಿ.ಮಂಜುನಾಥ್, ಚಿನ್ನಮ್ಮ, ಡಿ.ಎಸ್.ವೆಂಕಟರವಣ ಮುಂತಾದವರು ಇದ್ದರು.

Ramesh Babu

Journalist

Recent Posts

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

3 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

14 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

14 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

19 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

1 day ago