ವೇಗದ ಸಂಚಾರಕ್ಕೆ ಕಡಿವಾಣ: 130 ಕಿ.ಮೀ ಗಿಂತ ಹೆಚ್ಚು ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಆ.1ರಿಂದ ಎಫ್‌ಐಆರ್ ದಾಖಲು

130 ಕಿಲೋ ಮೀಟರ್ ಗಿಂತ ಹೆಚ್ಚು ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಆಗಸ್ಟ್ 1ರಿಂದ ಎಫ್‌ಐಆರ್ ದಾಖಲಾಗಲಿದ್ದು, ರಾಜ್ಯಾದ್ಯಂತ ಈ ಕ್ರಮ ಜಾರಿಯಾಗಲಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ‘X’ ಖಾತೆಯಲ್ಲಿ ಸಂದೇಶ ಪೋಸ್ಟ್ ಅವರು ಮಾಡಿದ್ದಾರೆ, ‘ಸ್ಪಾಟ್ ವೇಗ ಮತ್ತು ವಿಭಾಗೀಯ ವೇಗ ಇದರ ಆಧಾರದ ಮೇಲೆ ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುವುದು ಎಂದು ತಿಳಿಸಿದರು. ಅಂತಹ ಪ್ರಕರಣಗಳಲ್ಲಿ ₹ 2,000 ವರೆಗೆ ದಂಡ ಅಥವಾ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗು ಸಾಧ್ಯತೆ ಇರುತ್ತದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸುವ ಶೇ 90ರಷ್ಟು ಅಪಘಾತಗಳಿಗೆ ಅತಿ ವೇಗದ ಚಾಲನೆಯೇ ಕಾರಣ ಎಂಬುದು ಸರ್ಕಾರ ವಿವಿಧ ಇಲಾಖೆಗಳ ಮೂಲಕ ನಡೆಸಿದ ಸಮೀಕ್ಷೆಯಿಂದ ಗೊತ್ತಾಗಿದೆ.  ಇದಕ್ಕೆ ಕಡಿವಾಣ ಹಾಕಲು ಗಂಟೆಗೆ 130 ಕಿ.ಮೀ.ಗಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ನಿರ್ಲಕ್ಷ್ಯದ ಚಾಲನೆ ಎಂದು ಪರಿಗಣಿಸಿ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು.

ಜುಲೈ 25 ರಂದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 155 ವಾಹನಗಳು ಗಂಟೆಗೆ 130 ಕಿ.ಮೀ.ಗೂ ಹೆಚ್ಚು ವೇಗದಲ್ಲಿ ಸಂಚರಿಸುತ್ತಿದ್ದವು. ಇದರಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ಮತ್ತು ಸರ್ಕಾರಿ ವಾಹನಗಳು ಸೇರಿವೆ. ಕೆಲವು ವಾಹನಗಳು ಗಂಟೆಗೆ 159 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿರುವುದನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ ಎಂದರು.

ಸದ್ಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಹತ್ತು ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಇತರೆ ಭಾಗಗಳಲ್ಲಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ramesh Babu

Journalist

Recent Posts

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

29 minutes ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

2 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

3 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

10 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

11 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

11 hours ago