130 ಕಿಲೋ ಮೀಟರ್ ಗಿಂತ ಹೆಚ್ಚು ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಆಗಸ್ಟ್ 1ರಿಂದ ಎಫ್ಐಆರ್ ದಾಖಲಾಗಲಿದ್ದು, ರಾಜ್ಯಾದ್ಯಂತ ಈ ಕ್ರಮ ಜಾರಿಯಾಗಲಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ‘X’ ಖಾತೆಯಲ್ಲಿ ಸಂದೇಶ ಪೋಸ್ಟ್ ಅವರು ಮಾಡಿದ್ದಾರೆ, ‘ಸ್ಪಾಟ್ ವೇಗ ಮತ್ತು ವಿಭಾಗೀಯ ವೇಗ ಇದರ ಆಧಾರದ ಮೇಲೆ ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುವುದು ಎಂದು ತಿಳಿಸಿದರು. ಅಂತಹ ಪ್ರಕರಣಗಳಲ್ಲಿ ₹ 2,000 ವರೆಗೆ ದಂಡ ಅಥವಾ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗು ಸಾಧ್ಯತೆ ಇರುತ್ತದೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸುವ ಶೇ 90ರಷ್ಟು ಅಪಘಾತಗಳಿಗೆ ಅತಿ ವೇಗದ ಚಾಲನೆಯೇ ಕಾರಣ ಎಂಬುದು ಸರ್ಕಾರ ವಿವಿಧ ಇಲಾಖೆಗಳ ಮೂಲಕ ನಡೆಸಿದ ಸಮೀಕ್ಷೆಯಿಂದ ಗೊತ್ತಾಗಿದೆ. ಇದಕ್ಕೆ ಕಡಿವಾಣ ಹಾಕಲು ಗಂಟೆಗೆ 130 ಕಿ.ಮೀ.ಗಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ನಿರ್ಲಕ್ಷ್ಯದ ಚಾಲನೆ ಎಂದು ಪರಿಗಣಿಸಿ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು.
ಜುಲೈ 25 ರಂದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 155 ವಾಹನಗಳು ಗಂಟೆಗೆ 130 ಕಿ.ಮೀ.ಗೂ ಹೆಚ್ಚು ವೇಗದಲ್ಲಿ ಸಂಚರಿಸುತ್ತಿದ್ದವು. ಇದರಲ್ಲಿ ಕೆಎಸ್ಆರ್ಟಿಸಿ ಬಸ್ಗಳು ಮತ್ತು ಸರ್ಕಾರಿ ವಾಹನಗಳು ಸೇರಿವೆ. ಕೆಲವು ವಾಹನಗಳು ಗಂಟೆಗೆ 159 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿರುವುದನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ ಎಂದರು.
ಸದ್ಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಹತ್ತು ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಇತರೆ ಭಾಗಗಳಲ್ಲಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್ಗಳು ಹಾಗೂ ಇತರೆ…
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…