ವೇಗವಾಗಿ ಬಂದ ಆಟೋ ಮಹಿಳೆಗೆ ಡಿಕ್ಕಿ: ಪುಟ್ಟ ಬಾಲಕಿಯೊಬ್ಬಳ ಸಮಯಪ್ರಜ್ಞೆಯಿಂದ ಬದುಕುಳಿದ ಮಹಿಳೆ: ಬಾಲಕಿಯ ಧೈರ್ಯ ಮತ್ತು ಸಮಯಪ್ರಜ್ಞೆಗೆ ಸಿಎಂ ಸೇರಿದಂತೆ ಹಲವರ ಮೆಚ್ಚುಗೆ

ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ.

ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ.

ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡುಬರುತ್ತಿವೆ. ಆದರೆ, ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ.

ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

8 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

8 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

10 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

11 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

13 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

19 hours ago