Categories: ಕೋಲಾರ

ವೇಮಗಲ್-ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಕೋಲಾರ: ಸುಳ್ಳು ಹೇಳಿಕೊಂಡೆ ಜನತೆಯನ್ನು ಯಾಮಾರಿಸುವ ಜೆಡಿಎಸ್, ಬಿಜೆಪಿ ಮತ್ತು ವರ್ತೂರ್ ಪಕ್ಷಗಳನ್ನು ಯಾವುದೇ ಕಾರಣಕ್ಕೂ ನಂಬಬಾರದು ಚುನಾವಣೆಯ ಪೂರ್ವದಲ್ಲಿ ಹೇಳಿದಂತೆ ಮಾಡುವ, ಮಾಡಿದಂತೆ ಹೇಳುವ ಕಾಂಗ್ರೆಸ್ ಪಕ್ಷವನ್ನು ಮಾತ್ರವೇ ಬೆಂಬಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು.

ತಾಲೂಕಿನ ವೇಮಗಲ್ ನಲ್ಲಿ ಶನಿವಾರ ವೇಮಗಲ್-ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದ ಜನತೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಕ್ಕೆ ಅಧಿಕಾರ ಕೊಟ್ಟಾಗ ಅಭಿವೃದ್ಧಿಗೆ ಒತ್ತು ನೀಡದೆ ಜಾತಿ ಧರ್ಮಗಳ ಮಧ್ಯೆ ಗಲಾಟೆಗಳಿಗೆ ಸೀಮಿತವಾಗಿತ್ತು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಟ್ಟಾಗ ಹಾಳು ಮಾಡದೆ ಮನೆ ಮನೆಗೆ ಸೌಲಭ್ಯ ಒದಗಿಸಿದೆ ಕಾಂಗ್ರೆಸ್ ಪಕ್ಷವು ಬಡವರ ದಲಿತರ ಮಹಿಳೆಯರ ಪರವಾಗಿದ್ದು ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ನಿಮ್ಮೆಲ್ಲರ ಆಶೀರ್ವಾವು ಕಾಂಗ್ರೆಸ್ ಪಕ್ಷದ ಮೇಲೆ ಇರಬೇಕಾಗಿದೆ ಎಂದರು.

ಕೋಲಾರ ಜಿಲ್ಲೆಯಲ್ಲಿ ಈಗಾಗಲೇ ಮಾದರಿ ಜಿಲ್ಲೆಯಾಗುವಂತೆ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ವೇಮಗಲ್ ಭಾಗದಲ್ಲಿ ನಗರಾಭಿವೃದ್ಧಿ ಇಲಾಖೆಯಿಂದ ಐದು ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ, ಮೆಡಿಕಲ್ ಕಾಲೇಜು, ಎಪಿಎಂಸಿಗೆ ನೂರು ಎಕರೆ ಜಾಗ, ರಿಂಗ್ ರಸ್ತೆ, ಮೂರು ಸಾವಿರ ವೆಚ್ಚದ ರಸ್ತೆ ಸೇರಿದಂತೆ ಅಭಿವೃದ್ಧಿಗೆ ಕೆಲಸ ಪ್ರಾರಂಭವಾಗಿದೆ ಮುಂದೆಯೂ ಸಹ ವೇಮಗಲ್ ತಾಲೂಕು ಕೇಂದ್ರವಾಗಿ ಮಾಡಲಾಗುತ್ತದೆ ನಿಮ್ಮ ಋಣ ನಮ್ಮ ಮೇಲಿದೆ ಅದನ್ನು ತೀರಿಸುವುದು ಕೂಡ ಕಾಂಗ್ರೆಸ್ ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.

ಕಂದಾಯ ಸಚಿವ ಸಿ.ಬಿ‌ ಕೃಷ್ಣಬೈರೇಗೌಡ ಮಾತನಾಡಿ ಈ ಭಾಗದಲ್ಲಿ ಹುಟ್ಟಿ ಬೆಳೆದಿರುವುದರಿಂದ ಜನರ ಋಣದಲ್ಲಿ ನಾನು ಇದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವ, ಶಾಸಕ, ಎಂಎಲ್ಸಿ ಕಾಂಗ್ರೆಸ್‌ ನವರು ಇದ್ದು ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು, ಇದು ಅಭಿವೃದ್ಧಿಗೆ ಪೂರಕವಾಗಲಿದೆ ಮೊದಲ ಹಂತದಲ್ಲಿ ಕೈಗಾರಿಕೆ ಸ್ಥಾಪನೆಯಾದ ನಂತರ ಪಟ್ಟಣ ಪಂಚಾಯಿತಿ ಮೇಲ್ದರ್ಜೆಗೇರಿತು ಮೊದಲ ಚುನಾವಣೆಯಲ್ಲಿ ವ್ಯವಸ್ಥಿತವಾಗಿ ಬೆಳೆಸಬೇಕು ಎಂದು ಉದ್ದೇಶದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾಗಿದೆ ಎಂದರು

ಈಗಾಗಲೇ ಈ ಭಾಗದಲ್ಲಿ ಯೋಜನಾ ಪ್ರಾಧಿಕಾರ ಘೋಷಣೆ ಮಾಡಿದೆ ಎಚ್.ಕ್ರಾಸ್, ವೇಮಗಲ್ ನರಾಸಪುರ ಮಾಲೂರು, ಕೋಲಾರ ಹೆದ್ದಾರಿ ಅಭಿವೃದ್ಧಿಗೆ ಟೆಂಡರ್ ಕರೆಯಲಾಗಿದೆ. ಇದಕ್ಕೆ ೩೨೦೦ ಕೋಟಿಯನ್ನು ಸರ್ಕಾರ ಮೀಸಲಿರಿಸಿದೆ. ಇದು ವಾಣಿಜ್ಯ ಅಭಿವೃದ್ಧಿಗೆ ಸಹಕಾರವಾಗುತ್ತದೆ ಸ್ಥಳೀಯ ಜನ ಗಂಭೀರವಾಗಿ ಅಲೋಚನೆ ಮಾಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗಲ್ಲಿಸುವ ಮೂಲಕ ಅಧಿಕಾರಕ್ಕೆ ತರಬೇಕು ಬಡವರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ನಿಟ್ಟಿನಲ್ಲಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದರು.

ಈ ಭಾಗದಲ್ಲಿ ನಮ್ಮ ತಂದೆಯವರ ಕಾಲದಿಂದ ನಮಗೆ ಶಕ್ತಿ ತುಂಬಿದ್ದಾರೆ ಇಲ್ಲಿ ಹಕ್ಕು ಪತ್ರ ವಿತರಣೆ ಮಾಡಿರುವವರಿಗೆ ಪಕ್ಕ ಖಾತೆ ಮಾಡದೆ ಇದ್ದು, ಮಾಡಿಸಿಕೊಡಲು ಜವಾಬ್ದಾರಿ ನೀಡಿದ್ದು ಈಡೇರಿಸಲಾಗುವುದು, ಕಾನೂನು ತೊಡಲು ಬಾರದಂತೆ ಸೂರಿಗೆ ಗ್ಯಾರೆಂಟಿ ನೀಡಲಾಗುವುದು ಎಂದು ಭರವಸೆ ನೀಡಿದರು ಮಣ್ಣಿನ ಋಣದಲ್ಲಿ ಬದುಕಿರುವುದರಿಂದ ಎಂದಿಗೂ ಸದಾ ನಿಮ್ಮೊಂದಿಗೆ ಇರುತ್ತೆವೆ ಎಂದರು

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಕಾಂಗ್ರೆಸ್ ಪಕ್ಷಕ್ಕೆ ಸ್ವಾತಂತ್ರ್ಯ ಪೂರ್ವದಿಂದ ತನ್ನದೇ ಸಾಧನೆಗಳನ್ನು ದೇಶಕ್ಕೆ ಕೊಡುಗೆ ಕೊಟ್ಟಿದೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷದವರನ್ನು ಪ್ರಶ್ನೆ ಮಾಡಬೇಕು ಜನರನ್ನು ಯಾಮಾರಿಸಿದ್ದು ಆಗಿದೆ ಅವರ ಆಟ ಚುನಾವಣೆಯಲ್ಲಿ ನಡೆಯಲ್ಲ ಅಂತ ಹೆಚ್ ಕ್ರಾಸ್ ನಲ್ಲಿ ಟೋಕನ್ ಕೊಟ್ಟು ಜನರನ್ನು ಮತ್ತೊಮ್ಮೆ ಯಾಮಾರಿಸಲು ಹೊರಟಿದ್ದಾರೆ ಜನ ಸ್ವಾಭಿಮಾನದಿಂದ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.

ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಎಲ್ಲಾ ಜಾತಿ ಧರ್ಮಗಳಿಗೂ ಸಮಾಜಿಕ ನ್ಯಾಯದ ಅಡಿಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ 17 ವಾರ್ಡ್ ಗಳಲ್ಲಿ ಪರಿಶಿಷ್ಟ ಜಾತಿ 5, ಹಿಂದುಳಿದ ವರ್ಗಕ್ಕೆ 5, ವಕ್ಕಲಿಗ 4, ಪರಿಶಿಷ್ಟ ಪಂಗಡ 1, ಮುಸ್ಲಿಂ1 ಲಿಂಗಾಯತ 1 ಸ್ಥಾನಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿದೆ ಎಂದು ವಿವರಿಸಿದರು,

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ಲೋಕಸಭಾ ಪರಾಜಿತ ಅಭ್ಯರ್ಥಿ ಕೆ.ವಿ ಗೌತಮ್ ಮಾತನಾಡಿದರು.

ವೇದಿಕೆಯಲ್ಲಿ ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿಯ 17 ವಾರ್ಡ್ ಗಳ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು, ಮುಖಂಡರಾದ ಚಂಜಿಮಲೆ ರಮೇಶ್ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ವೈ ಶಿವಕುಮಾರ್, ಮುನಿಯಪ್ಪ, ಮುಂತಾದವರು ಇದ್ದರು.

Ramesh Babu

Journalist

Recent Posts

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 hour ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 hour ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

4 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

6 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

18 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

18 hours ago