Categories: ಕೋಲಾರ

ವೇಮಗಲ್ ಪಟ್ಟಣದಲ್ಲಿ ನ.10ರಂದು ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ

ಕೋಲಾರ: ಗ್ರಾಮೀಣ ಭಾಗದ ಜನರಿಗೆ ಸಾಂಸ್ಕೃತಿಕ ರಸದೌತಣ ನೀಡುವ ಸಲುವಾಗಿ ಪ್ರತಿ ವರ್ಷದಂತೆ ಈ ಬಾರಿಯು ತಾಲೂಕಿನ ವೇಮಗಲ್ ಪಟ್ಟಣದಲ್ಲಿ ನ.10 ರಂದು ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಮಾಜಿ ಅಧ್ಯಕ್ಷ ಸಿ.ಎಸ್ ವೆಂಕಟೇಶ್ ತಿಳಿಸಿದರು.

ವೇಮಗಲ್ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮೈಸೂರು ದಸರಾ ಆಚರಣೆಯ ರೀತಿಯಲ್ಲಿ ಅಂದು ವೇಮಗಲ್ ಪಟ್ಟಣದಲ್ಲಿ ದೀಪಾಲಂಕಾರಿಂದ ಅಲಂಕರಿಸಿ ಗ್ರಾಮೀಣ ಭಾಗದ ಜನರಿಗೆ ಸಾಂಸ್ಕೃತಿಕ ರಸದೌಟಣ ನೀಡಲಾಗುವುದು ಎಂದು ತಿಳಿಸಿದರು.

ಕನ್ನಡ ರಾಜ್ಯೋತ್ಸವ ಸಮಿತಿ ವತಿಯಿಂದ ಈ ಭಾಗದ ಎಲ್ಲಾ ಸಂಘಟನೆಗಳ ಹಾಗೂ ಮುಖಂಡರ ಸಹಕಾರದಿಂದ ಆಚರಿಸಲಾಗುತ್ತಿರುವ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸುಮಾರು 15 ರಿಂದ 20 ಸಾವಿರ ಜನರು ಸೇರುವ ನೀರಿಕ್ಷೆಯಿದ್ದು ನ.೧೦ ರಂದು ಬೆಳಗ್ಗೆ 9 ಗಂಟೆಗೆ ಬಸ್ ನಿಲ್ದಾಣದಲ್ಲಿ ಧ್ವಜಾರೋಹಣ 9:30 ಕ್ಕೆ ಭುವನೇಶ್ವರಿ ಪಲ್ಲಕ್ಕಿ ಪೂಜೆ ಮತ್ತು ಪ್ರಸಾದ ವಿನಿಯೋಗ ಹಾಗೂ ಅತಿಥಿಗಳಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಬೆಳಗ್ಗೆ 10 ಗಂಟೆಗೆ ವಿಶೇಷವಾಗಿ ಅಲಂಕೃತಗೊಳಿಸಲಾಗುವ ಆಟೋಗಳೊಂದಿಗೆ ವಿಶೇಷ ಕಲಾ ತಂಡಗಳು ಪಟ್ಟಣದ ಪ್ರಮುಖ ರಾಜ ಬೀದಿಗಳಲ್ಲಿ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಅಂದು ಸಂಜೆ 6 ಗಂಟೆಗೆ ಪಟ್ಟಣದ ಕ್ರೀಡಾಂಗಣದಲ್ಲಿ ಹಲವು ಸಿನಿ ತಾರೆಯರಿಂದ ಬಡವ್ರ ಮಕ್ಳು ಬೆಳಿಬೇಕು ಕಣ್ರಯ್ಯ ಸಿನಿಮಾದ ಟೀಸರ್ ಬಿಡುಗಡೆ ಮತ್ತು ಅದ್ದೂರಿಯಾಗಿ ವೇದಿಕೆಯ ರಸಮಂಜರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬಡವರ ಮಕ್ಕಳು ಹೇಗೆ ಜೀವನ ನಡೆಸುತ್ತಾರೆ ಎನ್ನುವ ಅಥಗರ್ಭಿತ ಸಿನಿಮಾ ಇದಾಗಿದ್ದು ಕುಟುಂಬ ಸಮೇತ ಕುಳಿತು ನೋಡಬಹುದಾಗಿರುವ ಸಿನಿಮಾ ಇದಾಗಿದೆ ನಟ ಡಾಲಿ ಧನಂಜಯ್ ಅವರು ನೀಡಿರುವ ಟೈಟಲ್ ಹೆಸರಲ್ಲೇ ಸಿನಿಮಾ ನಿರ್ಮಾಣ ಮಾಡಲಾಗಿದೆ ಎಂದರು.

ಈ ಸಿನಿಮಾವನ್ನು ಮಂಜುಕವಿ ನಿರ್ದೇಶನದಲ್ಲಿ ನಾನು ನಿರ್ಮಾಣ ಮಾಡಿರುವ ಸಿನಿಮಾದಲ್ಲಿ ನಾಲ್ಕು ಹಾಡುಗಳನ್ನು ಅರ್ಥಪೂರ್ಣವಾಗಿ ನಿರ್ಮಾಣ ಮಾಡಲಾಗಿದೆ ಯಾವುದೇ ರೀತಿಯ ಪೈಟಿಂಗ್ ಸೀನ್ಸ್ ಈ ಸಿನಿಮಾದಲ್ಲಿ ಇಲ್ಲ ಗ್ರಾಮೀಣ ಭಾಗದಲ್ಲಿ ಜನರಿಗೆ ಸಿನಿಮಾಗಳ ಟೀಸಲ್ ರಿಲೀಸ್ ಕಾರ್ಯಕ್ರಮಗಳನ್ನು ವೀಕ್ಷಣೆ ನಡೆಸಲು ಸಾಧ್ಯವಾಗುವುದಿಲ್ಲ ಆದ್ದರಿಂದ ನಮ್ಮ ಸಿನಿಮಾ ಟೀಸರ್ ರೀಲೀಸ್ ಕಾರ್ಯಕ್ರಮವನ್ನು ಕನ್ನಡ ರಾಜ್ಯೋತ್ಸವ ಜೊತೆಗೆ ಜೊತೆಗೆ ಹಮ್ಮಿಕೊಳ್ಳಲಾಗಿದೆ ಪ್ರತಿಯೊಬ್ಬರು ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಗೌಡರ ಚಿಕ್ಕಮುನಿಯಪ್ಪ, ಯಜಮಾನ್ ಅಶ್ವಥಪ್ಪ, ಕನ್ನಡ ರಾಜ್ಯೋತ್ಸವ ಸಮಿತಿ ಅಧ್ಯಕ್ಷ ಎಸ್. ಮಂಜುನಾಥ್ ತಿಗಳ ಜನಾಂಗದ ಅಧ್ಯಕ್ಷ ರಾಜೇಂದ್ರ ಪ್ರಸಾದ್, ವಕ್ಕಲಿಗರ ಸಂಘದ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಶ್ರೀನಿವಾಸ್, ರಾಜ್ಯ ನಿರ್ದೇಶಕ ವೆಂಕಟೇಶ್, ಕಸ್ತೂರಿ ಬಳಗ ರಾಜಕುಮಾರ್, ಕಾಂತರಾಜ್, ಪೊಲೀಸ್ ಚಲಪತಿ, ಜಮೀರ್, ಮುಂತಾದವರು ಇದ್ದರು.

Ramesh Babu

Journalist

Recent Posts

ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ- ಸಿಎಂ ಸಿದ್ದರಾಮಯ್ಯ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು…

11 hours ago

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅದ್ಧೂರಿಯಾಗಿ ನಡೆದ “ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ” (ವಿಜ್ಞಾನ ಮೇಳ), ಕಿಡ್ಸ್ ಕಾರ್ನಿವಲ್: ವಿಜ್ಞಾನ ಮೇಳವನ್ನು ಉದ್ಘಾಟಿಸಿದ ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿನ ಕರೆನಹಳ್ಳಿಯಲ್ಲಿರುವ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿಂದು "ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ" (ವಿಜ್ಞಾನ ಮೇಳ) ವನ್ನು ಆಯೋಜಿಸಲಾಗಿತ್ತು.…

14 hours ago

ಶಿವ ಶಿವ ಶಿವ ಶಿವ……ನೆನಪಾಗುವೆ ನೀನು ಪ್ರತಿಕ್ಷಣವೂ…‌‌‌‌…..

ಶಿವರಾತ್ರಿ....... ಶಿವರಾತ್ರಿಯ ಶಿವ - ರಂಜಾನ್ ಅಲ್ಲಾ - ಕ್ರಿಸ್ಮಸ್ ಯೇಸು ನಾಮ ಸ್ಮರಣೆ..... ಶಿವ ಶಿವ ಶಿವ ಶಿವ......…

21 hours ago

ಬೈರಸಂದ್ರದಲ್ಲಿ ಹಂದಿ ಶೆಡ್‌ ಸ್ಥಳಾಂತರಕ್ಕೆ ಒತ್ತಾಯ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಗ್ರಾಪಂ ವ್ಯಾಪ್ತಿಯ ಬೈರಸಂದ್ರ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಹಂದಿ ಸಾಕಣೆ ಶೆಡ್ ನಿಂದಾಗಿ ಗ್ರಾಮಸ್ಥರಿಗೆ ತೊಂದರೆಗಳಾಗುತ್ತಿದ್ದು,…

21 hours ago

ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ‌ ಶಾಲೆ ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, (ರಾಜ್ಯ ಪಠ್ಯಕ್ರಮ)…

1 day ago

ರೈತನ ಬಾಳೆ ತೋಟ ಮಾರಣಹೋಮ: ಕಿಡಿಗೇಡಿಗಳ ಕಿಡಿಗೇಡಿತನಕ್ಕೆ ಬೆಳೆದು ನಿಂತಿದ್ದ ಬಾಳೆ ಗಿಡಗಳು ನಾಶ: ಸಂಕಷ್ಟದಲ್ಲಿ ರೈತ

ಹೆಂಡತಿಯ ಒಡವೆಯನ್ನು ಅಡವಿಟ್ಟು, ಹಗಲು ರಾತ್ರಿ ಕಷ್ಟಪಟ್ಟು ಬಾಳೆ ತೋಟ ಬೆಳೆಸಿದ್ದ ರೈತನಿಗೆ ಅದೇ ಜೀವನಕ್ಕೆ ಆಸರೆಯಾಗಿತ್ತು. ಸಾವಿರಕ್ಕೂ ಹೆಚ್ಚು…

1 day ago