Categories: ಕೋಲಾರ

ವೇಮಗಲ್ ಪಟ್ಟಣದಲ್ಲಿ ನ.10ರಂದು ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ

ಕೋಲಾರ: ಗ್ರಾಮೀಣ ಭಾಗದ ಜನರಿಗೆ ಸಾಂಸ್ಕೃತಿಕ ರಸದೌತಣ ನೀಡುವ ಸಲುವಾಗಿ ಪ್ರತಿ ವರ್ಷದಂತೆ ಈ ಬಾರಿಯು ತಾಲೂಕಿನ ವೇಮಗಲ್ ಪಟ್ಟಣದಲ್ಲಿ ನ.10 ರಂದು ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಮಾಜಿ ಅಧ್ಯಕ್ಷ ಸಿ.ಎಸ್ ವೆಂಕಟೇಶ್ ತಿಳಿಸಿದರು.

ವೇಮಗಲ್ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮೈಸೂರು ದಸರಾ ಆಚರಣೆಯ ರೀತಿಯಲ್ಲಿ ಅಂದು ವೇಮಗಲ್ ಪಟ್ಟಣದಲ್ಲಿ ದೀಪಾಲಂಕಾರಿಂದ ಅಲಂಕರಿಸಿ ಗ್ರಾಮೀಣ ಭಾಗದ ಜನರಿಗೆ ಸಾಂಸ್ಕೃತಿಕ ರಸದೌಟಣ ನೀಡಲಾಗುವುದು ಎಂದು ತಿಳಿಸಿದರು.

ಕನ್ನಡ ರಾಜ್ಯೋತ್ಸವ ಸಮಿತಿ ವತಿಯಿಂದ ಈ ಭಾಗದ ಎಲ್ಲಾ ಸಂಘಟನೆಗಳ ಹಾಗೂ ಮುಖಂಡರ ಸಹಕಾರದಿಂದ ಆಚರಿಸಲಾಗುತ್ತಿರುವ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸುಮಾರು 15 ರಿಂದ 20 ಸಾವಿರ ಜನರು ಸೇರುವ ನೀರಿಕ್ಷೆಯಿದ್ದು ನ.೧೦ ರಂದು ಬೆಳಗ್ಗೆ 9 ಗಂಟೆಗೆ ಬಸ್ ನಿಲ್ದಾಣದಲ್ಲಿ ಧ್ವಜಾರೋಹಣ 9:30 ಕ್ಕೆ ಭುವನೇಶ್ವರಿ ಪಲ್ಲಕ್ಕಿ ಪೂಜೆ ಮತ್ತು ಪ್ರಸಾದ ವಿನಿಯೋಗ ಹಾಗೂ ಅತಿಥಿಗಳಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಬೆಳಗ್ಗೆ 10 ಗಂಟೆಗೆ ವಿಶೇಷವಾಗಿ ಅಲಂಕೃತಗೊಳಿಸಲಾಗುವ ಆಟೋಗಳೊಂದಿಗೆ ವಿಶೇಷ ಕಲಾ ತಂಡಗಳು ಪಟ್ಟಣದ ಪ್ರಮುಖ ರಾಜ ಬೀದಿಗಳಲ್ಲಿ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಅಂದು ಸಂಜೆ 6 ಗಂಟೆಗೆ ಪಟ್ಟಣದ ಕ್ರೀಡಾಂಗಣದಲ್ಲಿ ಹಲವು ಸಿನಿ ತಾರೆಯರಿಂದ ಬಡವ್ರ ಮಕ್ಳು ಬೆಳಿಬೇಕು ಕಣ್ರಯ್ಯ ಸಿನಿಮಾದ ಟೀಸರ್ ಬಿಡುಗಡೆ ಮತ್ತು ಅದ್ದೂರಿಯಾಗಿ ವೇದಿಕೆಯ ರಸಮಂಜರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬಡವರ ಮಕ್ಕಳು ಹೇಗೆ ಜೀವನ ನಡೆಸುತ್ತಾರೆ ಎನ್ನುವ ಅಥಗರ್ಭಿತ ಸಿನಿಮಾ ಇದಾಗಿದ್ದು ಕುಟುಂಬ ಸಮೇತ ಕುಳಿತು ನೋಡಬಹುದಾಗಿರುವ ಸಿನಿಮಾ ಇದಾಗಿದೆ ನಟ ಡಾಲಿ ಧನಂಜಯ್ ಅವರು ನೀಡಿರುವ ಟೈಟಲ್ ಹೆಸರಲ್ಲೇ ಸಿನಿಮಾ ನಿರ್ಮಾಣ ಮಾಡಲಾಗಿದೆ ಎಂದರು.

ಈ ಸಿನಿಮಾವನ್ನು ಮಂಜುಕವಿ ನಿರ್ದೇಶನದಲ್ಲಿ ನಾನು ನಿರ್ಮಾಣ ಮಾಡಿರುವ ಸಿನಿಮಾದಲ್ಲಿ ನಾಲ್ಕು ಹಾಡುಗಳನ್ನು ಅರ್ಥಪೂರ್ಣವಾಗಿ ನಿರ್ಮಾಣ ಮಾಡಲಾಗಿದೆ ಯಾವುದೇ ರೀತಿಯ ಪೈಟಿಂಗ್ ಸೀನ್ಸ್ ಈ ಸಿನಿಮಾದಲ್ಲಿ ಇಲ್ಲ ಗ್ರಾಮೀಣ ಭಾಗದಲ್ಲಿ ಜನರಿಗೆ ಸಿನಿಮಾಗಳ ಟೀಸಲ್ ರಿಲೀಸ್ ಕಾರ್ಯಕ್ರಮಗಳನ್ನು ವೀಕ್ಷಣೆ ನಡೆಸಲು ಸಾಧ್ಯವಾಗುವುದಿಲ್ಲ ಆದ್ದರಿಂದ ನಮ್ಮ ಸಿನಿಮಾ ಟೀಸರ್ ರೀಲೀಸ್ ಕಾರ್ಯಕ್ರಮವನ್ನು ಕನ್ನಡ ರಾಜ್ಯೋತ್ಸವ ಜೊತೆಗೆ ಜೊತೆಗೆ ಹಮ್ಮಿಕೊಳ್ಳಲಾಗಿದೆ ಪ್ರತಿಯೊಬ್ಬರು ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಗೌಡರ ಚಿಕ್ಕಮುನಿಯಪ್ಪ, ಯಜಮಾನ್ ಅಶ್ವಥಪ್ಪ, ಕನ್ನಡ ರಾಜ್ಯೋತ್ಸವ ಸಮಿತಿ ಅಧ್ಯಕ್ಷ ಎಸ್. ಮಂಜುನಾಥ್ ತಿಗಳ ಜನಾಂಗದ ಅಧ್ಯಕ್ಷ ರಾಜೇಂದ್ರ ಪ್ರಸಾದ್, ವಕ್ಕಲಿಗರ ಸಂಘದ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಶ್ರೀನಿವಾಸ್, ರಾಜ್ಯ ನಿರ್ದೇಶಕ ವೆಂಕಟೇಶ್, ಕಸ್ತೂರಿ ಬಳಗ ರಾಜಕುಮಾರ್, ಕಾಂತರಾಜ್, ಪೊಲೀಸ್ ಚಲಪತಿ, ಜಮೀರ್, ಮುಂತಾದವರು ಇದ್ದರು.

Ramesh Babu

Journalist

Recent Posts

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

9 minutes ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

9 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago