ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ ಕೇಳಿದಷ್ಟು ಅನುದಾನ ತಂದು ಅಭಿವೃದ್ಧಿ ಮಾಡಕ್ಕೆ ಸಿದ್ದವಿದ್ದು ಅವಕಾಶಗಳು ಇವೆ ಯಾರೋ ಮಾತಾಡರೋಕಿ ಅಭಿವೃದ್ಧಿ ಮೂಲಕವೇ ಉತ್ತರವಾಗಲಿ ಇಲ್ಲ ಎಂದರೆ ಯಾರು ತಪ್ಪು ಮಾಡಿದ್ದಾರೆ ಅವರನ್ನು ಸೀತಿ ಬೈರೇಶ್ವರ ಸ್ವಾಮಿಯೇ ನೋಡಿಕೊಳ್ಳಲಿ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ತಾಲೂಕಿನ ವೇಮಗಲ್ ಹೋಬಳಿಯ ಚಂಜಿಮಲೆ ಗ್ರಾಮದಿಂದ ಕಡಗಟ್ಟೂರು, ಸೀತಿಹೊಸೂರು ಮತ್ತು ಬೈರಂಡಹಳ್ಳಿವರೆಗೆ 5 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ, ಬೈರಂಡಹಳ್ಳಿ ಕೆರೆ ಅಭಿವೃದ್ಧಿಗೆ 3.5, ಕಡಗಟ್ಟೂರು ಗ್ರಾಮದಿಂದ ಮಠಪುರ ಕ್ಯಾಲನೂರು ತಿಪ್ಪೇನಹಳ್ಳಿ ರಸ್ತೆ 2 ಕೋಟಿ ಎಂಎಲ್ಸಿ ಅನಿಲ್ ಕುಮಾರ್ ಅನುದಾನದಲ್ಲಿ ಸೀತಿ ಬೆಟ್ಟದಲ್ಲಿ ಸೀತಿ ದೇವಾಲಯದ ಬಳಿ ಊಟದ ವ್ಯವಸ್ಥೆಗೆ ಡೈನಿಂಗ್ ಹಾಲ್ ನಿರ್ಮಾಣಕ್ಕೆ 95 ಲಕ್ಷ, ಮಹಿಳೆಯರ ವಿಶ್ರಾಂತಿ ಕೊಠಡಿಗೆ 25 ಲಕ್ಷ ಹಾಗೂ ಮುಡಿ ಕಟ್ಟು ನಿರ್ಮಾಣಕ್ಕೆ 15 ಲಕ್ಷ ಒಟ್ಟು 11.50 ಕೋಟಿ ಮತ್ತು ಸೀತಿ ಗ್ರಾಮ ಪಂಚಾಯಿತಿ ವತಿಯಿಂದ ದೇವಾಲಯದ ಬಳಿ ನಿರ್ಮಿಸಿರುವ 23 ಅಂಗಡಿ ಮಳಿಗೆಗಳ ಉದ್ಘಾಟನಾ ಕಾರ್ಯಾಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸೀತಿ ಬೈರೇಶ್ವರ ದೇವಾಲಯ ಇತಿಹಾಸ ಪ್ರಸಿದ್ದ ವಾಗಿದ್ದು ಮೂರು ರಾಜ್ಯಗಳಿಂದ ಭಕ್ತಾದಿಗಳು ಇಲ್ಲಿಗೆ ಬರತ್ತಾರೆ ಇಂತಹ ಐತಿಹಾಸಿಕ ಸ್ಥಳವನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.
ಸೀತಿ ಗ್ರಾಮ ಪಂಚಾಯತಿಯು ಮಾದರಿ ಪಂಚಾಯತಿಗಳಲ್ಲಿ ಒಂದಾಗಿದೆ ಯಾವುದೇ ಅನುದಾನವಿಲ್ಲದೇ 23 ಅಂಗಡಿ ಮಳಿಗೆಗಳು ಕಟ್ಟಲಾಗುತ್ತಿದೆ ನನ್ನ ಅನುದಾನದಲ್ಲಿ 10 ಲಕ್ಷ ನೀಡಲಾಗುತ್ತದೆ ಮುಂದೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಎಂಎಲ್ಸಿ ನಸೀರ್ ಅಹಮದ್ ಅವರನ್ನು ಕರೆದುಕೊಂಡು ಬಂದು ಅವರ ಅನುದಾನವನ್ನು ನೀಡಲಾಗುತ್ತದೆ ವಸತಿ ನಿಲಯವನ್ನು ಮಾಡಿದರೆ ಅನುಕೂಲವಾಗುತ್ತೆ ಅಭಿವೃದ್ಧಿ ವಿಚಾರದಲ್ಲಿ ನಿಮ್ಮೊಂದಿಗೆ ಸದಾ ಇರತ್ತೇವೆ ಎಂದರು.
ಈ ಸಂದರ್ಭದಲ್ಲಿ ಎಂಎಲ್ಸಿ ಅನಿಲ್ ಕುಮಾರ್ ಮಾತನಾಡಿ ಜವಾಬ್ದಾರಿ ಸ್ಥಾನದಲ್ಲಿ ಇರುವವರು ಯಾರು ಕೂಡು ಸುಮ್ಮನೆ ಬಂದು ಪೂಜೆ ಮಾಡಲ್ಲ ಇಲಾಖೆಗಳಿಂದ ಟೆಂಡರ್ ಆಗಿ ಅನುಮೋದನೆ ಸಿಕ್ಕಿದ ಮೇಲೆಯೇ ಗುದ್ದಲಿ ಪೂಜೆಗೆ ಬಂದಿರೋದು ಪ್ರಶ್ನೆ ಮಾಡಲಿ ಅದನ್ನು ಬಿಟ್ಟು ದೌರ್ಜನ್ಯ ಮಾಡುವುದು ದಬ್ಬಾಳಿಕೆ ನಡೆಸಬಾರದು ಅಭಿವೃದ್ಧಿ ತೊಂದರೆ ಕೊಡಕ್ಕೆ ಅಂತ ಬಂದವರಿಗೆ ಅಭಿವೃದ್ಧಿ ಮೂಲಕವೇ ಉತ್ತರವಾಗಬೇಕು ಎಂದರು
ಈ ಸಂದರ್ಭದಲ್ಲಿ ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸೀತಿ ಗ್ರಾಪಂ ಅಧ್ಯಕ್ಷೆ ಕವಿತ ಮುನಿರಾಜು, ಉಪಾಧ್ಯಕ್ಷೆ ಅನಿತಾ ಶ್ರೀನಿವಾಸ್, ತಾಪಂ ಇಒ ಮಂಜುನಾಥ್ ಎಇಇ ಮಂಜುನಾಥ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ವೀರೇಂದ್ರ ಪಾಟೀಲ್, ಅಂಕತಟ್ಟಿ ಬಾಬು, ಉರಟ ಅಗ್ರಹಾರ ಚೌಡರೆಡ್ಡಿ, ಸಕಲೇಶ್, ಕುಮಾರ್, ರಾಜಕುಮಾರ್, ಪೆರ್ಜೇನಹಳ್ಳಿ ನಾಗೇಶ್, ಬೈರಪ್ಪ, ಮುನಿರಾಜು ಮುಜರಾಯಿ ತಹಶಿಲ್ದಾರ್ ಶ್ರೀನಿವಾಸ್ ನಿರ್ಮಿತಿ ಕೇಂದ್ರದ ಅಶ್ವಿನ್ ಮುಂತಾದವರು ಇದ್ದರು
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…